AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

K Annamalai: ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕ ಅಣ್ಣಾಮಲೈಗೆ ವೈ ಶ್ರೇಣಿ ಭದ್ರತೆ, ಅವರಿಗಿದ್ದ ಭೀತಿ ಏನು?

ಕೇಂದ್ರ ಗೃಹ ಸಚಿವಾಲಯವು ಅಣ್ಣಾಮಲೈಗೆ ಭದ್ರತೆಯ ಆತಂಕವಿದೆ ಎಂದು ಈ ಏರ್ಪಾಡು ಮಾಡಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸಶಸ್ತ್ರ ಅಧಿಕಾರಿಗಳು ಮತ್ತು ತಮಿಳುನಾಡು ಪೊಲೀಸ್ ಇಲಾಖೆಯ ಅಧಿಕಾರಿಗಳು ದಿನದ 24 ಗಂಟೆಯೂ ಅಣ್ಣಾಮಲೈಗೆ ರಕ್ಷಣೆ ಒದಗಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ಹೇಳಿವೆ.

K Annamalai: ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕ ಅಣ್ಣಾಮಲೈಗೆ ವೈ ಶ್ರೇಣಿ ಭದ್ರತೆ, ಅವರಿಗಿದ್ದ ಭೀತಿ ಏನು?
ಮಾಜಿ ಐಪಿಎಸ್, ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈಗೆ ವೈ ಶ್ರೇಣಿ ಭದ್ರತೆ, ಅವರಿಗಿದ್ದ ಭೀತಿ ಏನು?
TV9 Web
| Edited By: ಸಾಧು ಶ್ರೀನಾಥ್​|

Updated on:Apr 02, 2022 | 4:49 PM

Share

ಚೆನ್ನೈ/ ನವದೆಹಲಿ: ಖಾಕಿ ಸಮಸವಸ್ತ್ರ ಕಳಚಿಟ್ಟು, ಬಿಳಿ ರಾಜಕೀಯ ಬಟ್ಟೆ ಧರಿಸಿರುವ ಮಾಜಿ ಐಪಿಎಸ್ ಅಧಿಕಾರಿ, ಕರ್ನಾಟಕದ ಸಿಂಗಂ ಖ್ಯಾತಿಯ ಕೆ. ಅಣ್ಣಾಮಲೈಗೆ (K Annamalai) ತಕ್ಷಣದಿಂದ ಜಾರೊಗೆ ಬರುವಂತೆ ವೈ ಶ್ರೇಣಿ ಭದ್ರತೆ ಕಲ್ಪಿಸಲಾಗಿದೆ (Y category CRPF security). ಇದು ತಮಿಳುನಾಡು ಸರ್ಕಾರ ಪ್ರಸ್ತುತ ಅಣ್ಣಾಮಲೈಗೆ ಒದಗಿಸುತ್ತಿರುವ ಭದ್ರತೆಗಿಂತ ಹೆಚ್ಚಿನದ್ದಾಗಿದೆ (Tamil Nadu BJP president). ಕೇಂದ್ರ ಗೃಹ ಸಚಿವಾಲಯವು ಅಣ್ಣಾಮಲೈಗೆ ಭದ್ರತೆಯ ಆತಂಕವಿದೆ ಎಂದು ಈ ಏರ್ಪಾಡು ಮಾಡಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (Central Reserve Police Force -CRPF) ಸಶಸ್ತ್ರ ಅಧಿಕಾರಿಗಳು ಮತ್ತು ತಮಿಳುನಾಡು ಪೊಲೀಸ್ ಇಲಾಖೆಯ ಅಧಿಕಾರಿಗಳು ದಿನದ 24 ಗಂಟೆಯೂ ಅಣ್ಣಾಮಲೈಗೆ ರಕ್ಷಣೆ ಒದಗಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ಹೇಳಿವೆ.

ಕೆ ಅಣ್ಣಾಮಲೈಗೆ ಇದ್ದ ಭೀತಿ ಏನು?: ಕೆ ಅಣ್ಣಾಮಲೈಗೆ ಎದುರಾಗಿದ್ದ ಭದ್ರತಾ ಭೀತಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಿದ ಬಳಿಕ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಗುಪ್ತಚರ ಇಲಾಖೆ ಪೊಲೀಸ್ ಹುದ್ದೆ ತೊರೆದು, ರಾಷ್ಟ್ರೀಯ ಪಕ್ಷದ ಜೊತೆ ರಾಜಕೀಯದಲ್ಲಿ ಗುರುತಿಸಿಕೊಂಡ ಅಣ್ಣಾಮಲೈ ಜೀವಕ್ಕೆ ಅಪಾಯವಿದೆ ಎಂಬುದು ಮನವರಿಕೆಯಾಗಿತ್ತು ಎಂದು ಮೂಲಗಳು ತಿಳಿಸಿವೆ.

ಕಳೆದ ತಿಂಗಳು ಪೆಟ್ರೋಲ್ ತುಂಬಿದ ಬಾಟಲ್​ಗಳನ್ನು ಚೆನ್ನೈನಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಕಮಲಾಲಯಂ (Kamalalayam) ಒಳಗೆ ಫೆಬ್ರವರಿ 10ರ ನಡುರಾತ್ರಿ ಎಸೆಯಲಾಗಿತ್ತು. ಆ ಪ್ರಕರಣದಲ್ಲಿ ರಾಜ್ಯ ಪೊಲೀಸರು ಓರ್ವನನ್ನು ಬಂಧಿಸಿದ್ದರು. ತಮಿಳುನಾಡು ಗುಪ್ತಚರ ಇಲಾಖೆ ಅಧಿಕಾರಿಗಳು ತಮ್ಮ ಮೊಬೈಲ್ ಫೋನ್​ ಕದ್ದಾಲಿಸುತ್ತಿದ್ದಾರೆ ಎಂದು ಅಣ್ಣಾಮಲೈ ದೂರಿದ್ದರು.

ಅದಕ್ಕೂ ಮುನ್ನ ಸ್ವತಃ ರಾಜ್ಯ ಸರ್ಕಾರವು ಅಣ್ಣಾಮಲೈಗೆ ನೀಡಿರುವ ಭದ್ರತೆಯ ಬಗ್ಗೆ ಕೂಲಂಕಷ ಅಧ್ಯಯನ ನಡೆಸಿ, ಅರಿಗೆ ನೀಡಿರುವ ಭದ್ರತೆಯನ್ನು ಮೊಟಕುಗೊಳಿಸಬಹುದು ಎಂದಿತ್ತು. ಅದರಂತೆ ಭದ್ರತಾ ಅಧಿಕಾರಿಗಳ ಸಂಖ್ಯೆಯನ್ನು ಕಡಿತಗೊಳಿಸಲಾಗಿತ್ತು.

Also Read:   BJP Office Attacked: ತಮಿಳುನಾಡು ಬಿಜೆಪಿ ಕೇಂದ್ರ ಕಚೇರಿ ‘ಕಮಲಾಲಯಂ’ ಮೇಲೆ ಪೆಟ್ರೋಲ್ ಬಾಂಬ್​ ದಾಳಿ​

Published On - 4:29 pm, Sat, 2 April 22

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!