AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆಸ್ ಒಲಿಂಪಿಯಾಡ್ ಜಾಹೀರಾತಿನಲ್ಲಿ ಪ್ರಧಾನಿ ಚಿತ್ರ ಇಲ್ಲ, ಭಿತ್ತಿಪತ್ರ ಮೇಲೆ ಮೋದಿ ಫೋಟೊ ಅಂಟಿಸಿದ ಬಿಜೆಪಿ ಕಾರ್ಯಕರ್ತರು

ಚೆಸ್ ಒಲಿಂಪಿಯಾಡ್ ಜಾಹೀರಾತಿನಲ್ಲಿ  ಪ್ರಧಾನಿ ನರೇಂದ್ರ ಮೋದಿ ಚಿತ್ರವನ್ನು ಉದ್ದೇಶಪೂರ್ವಕ ಕೈಬಿಡಲಾಗಿದೆ ಎಂದು ತಮಿಳುನಾಡು ಬಿಜೆಪಿ ಆರೋಪಿಸಿದೆ.

ಚೆಸ್ ಒಲಿಂಪಿಯಾಡ್ ಜಾಹೀರಾತಿನಲ್ಲಿ ಪ್ರಧಾನಿ ಚಿತ್ರ ಇಲ್ಲ, ಭಿತ್ತಿಪತ್ರ ಮೇಲೆ ಮೋದಿ ಫೋಟೊ ಅಂಟಿಸಿದ ಬಿಜೆಪಿ ಕಾರ್ಯಕರ್ತರು
ಭಿತ್ತಿಪತ್ರದಲ್ಲಿ ಮೋದಿ ಚಿತ್ರ ಅಂಟಿಸುತ್ತಿರುವ ಬಿಜೆಪಿ ಕಾರ್ಯಕರ್ತರು
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jul 27, 2022 | 2:16 PM

Share

ಚೆನ್ನೈ: ತಮಿಳುನಾಡು (Tamil nadu) ಸರ್ಕಾರ ಮತ್ತು ಸಿಎಂ ಸ್ಟಾಲಿನ್ ಚೆಸ್ ಒಲಿಂಪಿಯಾಡ್​​ನ್ನು (Chess Olympiad) ಹೈಜಾಕ್ ಮಾಡಲು ಯತ್ನಿಸುತ್ತಿದ್ದಾರೆ. ಆದ್ದರಿಂದಲೇ ಚೆಸ್ ಒಲಿಂಪಿಯಾಡ್ ಜಾಹೀರಾತಿನಲ್ಲಿ  ಪ್ರಧಾನಿ ನರೇಂದ್ರ ಮೋದಿ ( Narendra Modi) ಚಿತ್ರವನ್ನು ಉದ್ದೇಶಪೂರ್ವಕ ಕೈಬಿಡಲಾಗಿದೆ ಎಂದು ತಮಿಳುನಾಡು ಬಿಜೆಪಿ ಆರೋಪಿಸಿದೆ. ಕೊಯಂಬತ್ತೂರ್  ನಲ್ಲಿ ಚೆಸ್ ಒಲಿಂಪಿಯಾಡ್ ಪ್ರಚಾರ ಕಾರ್ಯಕ್ರಮದಿಂದ ಬಿಜೆಪಿ ಪ್ರತಿನಿಧಿಗಳು ಹೊರ ನಡೆದಿದ್ದಾರೆ. ಆನಂತರ ಬಿಜೆಪಿ ಕಾರ್ಯಕರ್ತರು ಜಾಹೀರಾತು ಪೋಸ್ಟರ್​​ಗಳಲ್ಲಿ ಪ್ರಧಾನಿ ಮೋದಿ ಫೋಟೊವನ್ನು ಅಂಟಿಸಿದ್ದಾರೆ. ವಿವಿಧ ಬಸ್ ನಿಲ್ದಾಣಗಳಲ್ಲಿ ಪ್ರಧಾನಿ ಮೋದಿಯ ಚಿತ್ರವಿರುವ ಹೋರ್ಡಿಂಗ್ ಚಿತ್ರವನ್ನು ಕ್ರೀಡೆ ಮತ್ತು ಕೌಶಲ ಅಭಿವೃದ್ಧಿ ಬಿಜೆಪಿಯ ರಾಜ್ಯ ಅಧ್ಯಕ್ಷ ಅಮರ್ ಪ್ರಸಾದ್ ರೆಡ್ಡಿ ಪೋಸ್ಟ್ ಮಾಡಿದ್ದಾರೆ. ಜಾಹೀರಾತಿನಲ್ಲಿ ಪ್ರಧಾನಿ ಮೋದಿ ಫೋಟೋ ಇಲ್ಲ. ಹೀಗಾಗಿ ಪೋಸ್ಟರ್ ಗಳಲ್ಲಿ ಮೋದಿ ಫೋಟೊ ಅಂಟಿಸಿ ಎಂದು ಅವರು ಬಿಜೆಪಿ ಕಾರ್ಯಕರ್ತರಿಗೆ ಹೇಳಿದ್ದಾರೆ.

ಕೇಂದ್ರ ಸರ್ಕಾರ ತಮಿಳುನಾಡಿನಲ್ಲಿ ಚೆಸ್ ಒಲಿಂಪಿಯಾಡ್ ಆಯೋಜಿಸಿದೆ. ಡಿಎಂಕೆ ಆತಿಥ್ಯ ವಹಿಸುತ್ತಿದ್ದು ಸಿಎಂ ಸ್ಟಾಲಿನ್ ಅವರು ತಮ್ಮ ಮಿತಿ ಗುಮ್ಮಡಿಪುಂಡಿಯಲ್ಲಿ ಮುಗಿಯುತ್ತದೆ ಎಂದು ಮರೆತಿದ್ದಾರೆ. ಹಾಗಾಗಿ ಅವರು ಪ್ರಧಾನಿ ಮೋದಿಯವರ ಫೋಟೊ ಇಲ್ಲದೆ ಜಾಹೀರಾತು ನೀಡುತ್ತಿದ್ದಾರೆ. ಇದು ಡಿಎಂಕೆಯ ಕಾರ್ಯಕ್ರಮ ಅಲ್ಲ , ಇದು ಕೇಂದ್ರ ಸರ್ಕಾರದ ಕಾರ್ಯಕ್ರಮ. ಹಾಗಾಗಿ ವಿವಿಧ ಜಾಗಗಳಲ್ಲಿ ಸ್ಥಾಪಿಸಲಾದ ಹೋರ್ಡಿಂಗ್ ಗಳಲ್ಲಿ ಮೋದಿಯವರ ಫೋಟೊವನ್ನು ಅಂಟಿಸಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಅಮರ್ ಪ್ರಸಾದ್ ರೆಡ್ಡಿ ಕರೆ ನೀಡಿದ್ದಾರೆ.

ಜುಲೈ 28ಕ್ಕೆ ಜವಾಹರ್ ಲಾಲ್ ನೆಹರು ಒಳಾಂಗಣ ಸ್ಟೇಡಿಯಂನಲ್ಲಿ ನಡೆಯುವ 44ನೇ ಚೆಸ್ ಒಲಿಂಪಿಯಾಡ್ ನ್ನು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ.

Published On - 2:03 pm, Wed, 27 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ