AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆಸ್ ಒಲಿಂಪಿಯಾಡ್ ಜಾಹೀರಾತಿನಲ್ಲಿ ಪ್ರಧಾನಿ ಚಿತ್ರ ಇಲ್ಲ, ಭಿತ್ತಿಪತ್ರ ಮೇಲೆ ಮೋದಿ ಫೋಟೊ ಅಂಟಿಸಿದ ಬಿಜೆಪಿ ಕಾರ್ಯಕರ್ತರು

ಚೆಸ್ ಒಲಿಂಪಿಯಾಡ್ ಜಾಹೀರಾತಿನಲ್ಲಿ  ಪ್ರಧಾನಿ ನರೇಂದ್ರ ಮೋದಿ ಚಿತ್ರವನ್ನು ಉದ್ದೇಶಪೂರ್ವಕ ಕೈಬಿಡಲಾಗಿದೆ ಎಂದು ತಮಿಳುನಾಡು ಬಿಜೆಪಿ ಆರೋಪಿಸಿದೆ.

ಚೆಸ್ ಒಲಿಂಪಿಯಾಡ್ ಜಾಹೀರಾತಿನಲ್ಲಿ ಪ್ರಧಾನಿ ಚಿತ್ರ ಇಲ್ಲ, ಭಿತ್ತಿಪತ್ರ ಮೇಲೆ ಮೋದಿ ಫೋಟೊ ಅಂಟಿಸಿದ ಬಿಜೆಪಿ ಕಾರ್ಯಕರ್ತರು
ಭಿತ್ತಿಪತ್ರದಲ್ಲಿ ಮೋದಿ ಚಿತ್ರ ಅಂಟಿಸುತ್ತಿರುವ ಬಿಜೆಪಿ ಕಾರ್ಯಕರ್ತರು
TV9 Web
| Edited By: |

Updated on:Jul 27, 2022 | 2:16 PM

Share

ಚೆನ್ನೈ: ತಮಿಳುನಾಡು (Tamil nadu) ಸರ್ಕಾರ ಮತ್ತು ಸಿಎಂ ಸ್ಟಾಲಿನ್ ಚೆಸ್ ಒಲಿಂಪಿಯಾಡ್​​ನ್ನು (Chess Olympiad) ಹೈಜಾಕ್ ಮಾಡಲು ಯತ್ನಿಸುತ್ತಿದ್ದಾರೆ. ಆದ್ದರಿಂದಲೇ ಚೆಸ್ ಒಲಿಂಪಿಯಾಡ್ ಜಾಹೀರಾತಿನಲ್ಲಿ  ಪ್ರಧಾನಿ ನರೇಂದ್ರ ಮೋದಿ ( Narendra Modi) ಚಿತ್ರವನ್ನು ಉದ್ದೇಶಪೂರ್ವಕ ಕೈಬಿಡಲಾಗಿದೆ ಎಂದು ತಮಿಳುನಾಡು ಬಿಜೆಪಿ ಆರೋಪಿಸಿದೆ. ಕೊಯಂಬತ್ತೂರ್  ನಲ್ಲಿ ಚೆಸ್ ಒಲಿಂಪಿಯಾಡ್ ಪ್ರಚಾರ ಕಾರ್ಯಕ್ರಮದಿಂದ ಬಿಜೆಪಿ ಪ್ರತಿನಿಧಿಗಳು ಹೊರ ನಡೆದಿದ್ದಾರೆ. ಆನಂತರ ಬಿಜೆಪಿ ಕಾರ್ಯಕರ್ತರು ಜಾಹೀರಾತು ಪೋಸ್ಟರ್​​ಗಳಲ್ಲಿ ಪ್ರಧಾನಿ ಮೋದಿ ಫೋಟೊವನ್ನು ಅಂಟಿಸಿದ್ದಾರೆ. ವಿವಿಧ ಬಸ್ ನಿಲ್ದಾಣಗಳಲ್ಲಿ ಪ್ರಧಾನಿ ಮೋದಿಯ ಚಿತ್ರವಿರುವ ಹೋರ್ಡಿಂಗ್ ಚಿತ್ರವನ್ನು ಕ್ರೀಡೆ ಮತ್ತು ಕೌಶಲ ಅಭಿವೃದ್ಧಿ ಬಿಜೆಪಿಯ ರಾಜ್ಯ ಅಧ್ಯಕ್ಷ ಅಮರ್ ಪ್ರಸಾದ್ ರೆಡ್ಡಿ ಪೋಸ್ಟ್ ಮಾಡಿದ್ದಾರೆ. ಜಾಹೀರಾತಿನಲ್ಲಿ ಪ್ರಧಾನಿ ಮೋದಿ ಫೋಟೋ ಇಲ್ಲ. ಹೀಗಾಗಿ ಪೋಸ್ಟರ್ ಗಳಲ್ಲಿ ಮೋದಿ ಫೋಟೊ ಅಂಟಿಸಿ ಎಂದು ಅವರು ಬಿಜೆಪಿ ಕಾರ್ಯಕರ್ತರಿಗೆ ಹೇಳಿದ್ದಾರೆ.

ಕೇಂದ್ರ ಸರ್ಕಾರ ತಮಿಳುನಾಡಿನಲ್ಲಿ ಚೆಸ್ ಒಲಿಂಪಿಯಾಡ್ ಆಯೋಜಿಸಿದೆ. ಡಿಎಂಕೆ ಆತಿಥ್ಯ ವಹಿಸುತ್ತಿದ್ದು ಸಿಎಂ ಸ್ಟಾಲಿನ್ ಅವರು ತಮ್ಮ ಮಿತಿ ಗುಮ್ಮಡಿಪುಂಡಿಯಲ್ಲಿ ಮುಗಿಯುತ್ತದೆ ಎಂದು ಮರೆತಿದ್ದಾರೆ. ಹಾಗಾಗಿ ಅವರು ಪ್ರಧಾನಿ ಮೋದಿಯವರ ಫೋಟೊ ಇಲ್ಲದೆ ಜಾಹೀರಾತು ನೀಡುತ್ತಿದ್ದಾರೆ. ಇದು ಡಿಎಂಕೆಯ ಕಾರ್ಯಕ್ರಮ ಅಲ್ಲ , ಇದು ಕೇಂದ್ರ ಸರ್ಕಾರದ ಕಾರ್ಯಕ್ರಮ. ಹಾಗಾಗಿ ವಿವಿಧ ಜಾಗಗಳಲ್ಲಿ ಸ್ಥಾಪಿಸಲಾದ ಹೋರ್ಡಿಂಗ್ ಗಳಲ್ಲಿ ಮೋದಿಯವರ ಫೋಟೊವನ್ನು ಅಂಟಿಸಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಅಮರ್ ಪ್ರಸಾದ್ ರೆಡ್ಡಿ ಕರೆ ನೀಡಿದ್ದಾರೆ.

ಜುಲೈ 28ಕ್ಕೆ ಜವಾಹರ್ ಲಾಲ್ ನೆಹರು ಒಳಾಂಗಣ ಸ್ಟೇಡಿಯಂನಲ್ಲಿ ನಡೆಯುವ 44ನೇ ಚೆಸ್ ಒಲಿಂಪಿಯಾಡ್ ನ್ನು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ.

Published On - 2:03 pm, Wed, 27 July 22

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?