AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆಸ್ ಒಲಿಂಪಿಯಾಡ್ ಜಾಹೀರಾತಿನಲ್ಲಿ ಪ್ರಧಾನಿ ಚಿತ್ರ ಇಲ್ಲ, ಭಿತ್ತಿಪತ್ರ ಮೇಲೆ ಮೋದಿ ಫೋಟೊ ಅಂಟಿಸಿದ ಬಿಜೆಪಿ ಕಾರ್ಯಕರ್ತರು

ಚೆಸ್ ಒಲಿಂಪಿಯಾಡ್ ಜಾಹೀರಾತಿನಲ್ಲಿ  ಪ್ರಧಾನಿ ನರೇಂದ್ರ ಮೋದಿ ಚಿತ್ರವನ್ನು ಉದ್ದೇಶಪೂರ್ವಕ ಕೈಬಿಡಲಾಗಿದೆ ಎಂದು ತಮಿಳುನಾಡು ಬಿಜೆಪಿ ಆರೋಪಿಸಿದೆ.

ಚೆಸ್ ಒಲಿಂಪಿಯಾಡ್ ಜಾಹೀರಾತಿನಲ್ಲಿ ಪ್ರಧಾನಿ ಚಿತ್ರ ಇಲ್ಲ, ಭಿತ್ತಿಪತ್ರ ಮೇಲೆ ಮೋದಿ ಫೋಟೊ ಅಂಟಿಸಿದ ಬಿಜೆಪಿ ಕಾರ್ಯಕರ್ತರು
ಭಿತ್ತಿಪತ್ರದಲ್ಲಿ ಮೋದಿ ಚಿತ್ರ ಅಂಟಿಸುತ್ತಿರುವ ಬಿಜೆಪಿ ಕಾರ್ಯಕರ್ತರು
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 27, 2022 | 2:16 PM

Share

ಚೆನ್ನೈ: ತಮಿಳುನಾಡು (Tamil nadu) ಸರ್ಕಾರ ಮತ್ತು ಸಿಎಂ ಸ್ಟಾಲಿನ್ ಚೆಸ್ ಒಲಿಂಪಿಯಾಡ್​​ನ್ನು (Chess Olympiad) ಹೈಜಾಕ್ ಮಾಡಲು ಯತ್ನಿಸುತ್ತಿದ್ದಾರೆ. ಆದ್ದರಿಂದಲೇ ಚೆಸ್ ಒಲಿಂಪಿಯಾಡ್ ಜಾಹೀರಾತಿನಲ್ಲಿ  ಪ್ರಧಾನಿ ನರೇಂದ್ರ ಮೋದಿ ( Narendra Modi) ಚಿತ್ರವನ್ನು ಉದ್ದೇಶಪೂರ್ವಕ ಕೈಬಿಡಲಾಗಿದೆ ಎಂದು ತಮಿಳುನಾಡು ಬಿಜೆಪಿ ಆರೋಪಿಸಿದೆ. ಕೊಯಂಬತ್ತೂರ್  ನಲ್ಲಿ ಚೆಸ್ ಒಲಿಂಪಿಯಾಡ್ ಪ್ರಚಾರ ಕಾರ್ಯಕ್ರಮದಿಂದ ಬಿಜೆಪಿ ಪ್ರತಿನಿಧಿಗಳು ಹೊರ ನಡೆದಿದ್ದಾರೆ. ಆನಂತರ ಬಿಜೆಪಿ ಕಾರ್ಯಕರ್ತರು ಜಾಹೀರಾತು ಪೋಸ್ಟರ್​​ಗಳಲ್ಲಿ ಪ್ರಧಾನಿ ಮೋದಿ ಫೋಟೊವನ್ನು ಅಂಟಿಸಿದ್ದಾರೆ. ವಿವಿಧ ಬಸ್ ನಿಲ್ದಾಣಗಳಲ್ಲಿ ಪ್ರಧಾನಿ ಮೋದಿಯ ಚಿತ್ರವಿರುವ ಹೋರ್ಡಿಂಗ್ ಚಿತ್ರವನ್ನು ಕ್ರೀಡೆ ಮತ್ತು ಕೌಶಲ ಅಭಿವೃದ್ಧಿ ಬಿಜೆಪಿಯ ರಾಜ್ಯ ಅಧ್ಯಕ್ಷ ಅಮರ್ ಪ್ರಸಾದ್ ರೆಡ್ಡಿ ಪೋಸ್ಟ್ ಮಾಡಿದ್ದಾರೆ. ಜಾಹೀರಾತಿನಲ್ಲಿ ಪ್ರಧಾನಿ ಮೋದಿ ಫೋಟೋ ಇಲ್ಲ. ಹೀಗಾಗಿ ಪೋಸ್ಟರ್ ಗಳಲ್ಲಿ ಮೋದಿ ಫೋಟೊ ಅಂಟಿಸಿ ಎಂದು ಅವರು ಬಿಜೆಪಿ ಕಾರ್ಯಕರ್ತರಿಗೆ ಹೇಳಿದ್ದಾರೆ.

ಕೇಂದ್ರ ಸರ್ಕಾರ ತಮಿಳುನಾಡಿನಲ್ಲಿ ಚೆಸ್ ಒಲಿಂಪಿಯಾಡ್ ಆಯೋಜಿಸಿದೆ. ಡಿಎಂಕೆ ಆತಿಥ್ಯ ವಹಿಸುತ್ತಿದ್ದು ಸಿಎಂ ಸ್ಟಾಲಿನ್ ಅವರು ತಮ್ಮ ಮಿತಿ ಗುಮ್ಮಡಿಪುಂಡಿಯಲ್ಲಿ ಮುಗಿಯುತ್ತದೆ ಎಂದು ಮರೆತಿದ್ದಾರೆ. ಹಾಗಾಗಿ ಅವರು ಪ್ರಧಾನಿ ಮೋದಿಯವರ ಫೋಟೊ ಇಲ್ಲದೆ ಜಾಹೀರಾತು ನೀಡುತ್ತಿದ್ದಾರೆ. ಇದು ಡಿಎಂಕೆಯ ಕಾರ್ಯಕ್ರಮ ಅಲ್ಲ , ಇದು ಕೇಂದ್ರ ಸರ್ಕಾರದ ಕಾರ್ಯಕ್ರಮ. ಹಾಗಾಗಿ ವಿವಿಧ ಜಾಗಗಳಲ್ಲಿ ಸ್ಥಾಪಿಸಲಾದ ಹೋರ್ಡಿಂಗ್ ಗಳಲ್ಲಿ ಮೋದಿಯವರ ಫೋಟೊವನ್ನು ಅಂಟಿಸಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಅಮರ್ ಪ್ರಸಾದ್ ರೆಡ್ಡಿ ಕರೆ ನೀಡಿದ್ದಾರೆ.

ಜುಲೈ 28ಕ್ಕೆ ಜವಾಹರ್ ಲಾಲ್ ನೆಹರು ಒಳಾಂಗಣ ಸ್ಟೇಡಿಯಂನಲ್ಲಿ ನಡೆಯುವ 44ನೇ ಚೆಸ್ ಒಲಿಂಪಿಯಾಡ್ ನ್ನು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ.

Published On - 2:03 pm, Wed, 27 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ