AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕನ ಮೆದುಳು ನಿಷ್ಕ್ರಿಯ: ಅಂಗಾಂಗ ದಾನದಿಂದ 5 ಮಂದಿಯ ಜೀವ ಉಳೀತು

ಅಪಘಾತದಿಂದಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ 18 ವರ್ಷದ ವಿದ್ಯಾರ್ಥಿಯ ಅಂಗಗಳು ಐವರ ಪ್ರಾಣವನ್ನು ಕಾಪಾಡಿದೆ. ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ತಮ್ಮ ಮಗನ ಅಂಗ ದಾನ ಮಾಡಲು ಮುಂದಾದ ಪಾಲಕರ ಮನೋಸ್ಥೈರ್ಯ ಮತ್ತು ಮಾನವೀಯತೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ

ಯುವಕನ ಮೆದುಳು ನಿಷ್ಕ್ರಿಯ: ಅಂಗಾಂಗ ದಾನದಿಂದ 5 ಮಂದಿಯ ಜೀವ ಉಳೀತು
Organ Donor
TV9 Web
| Edited By: |

Updated on:Jun 22, 2022 | 4:13 PM

Share

ಚೆನ್ನೈ: ಅಪಘಾತದಿಂದಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ 18 ವರ್ಷದ ವಿದ್ಯಾರ್ಥಿಯ ಅಂಗಗಳು ಐವರ ಪ್ರಾಣವನ್ನು ಕಾಪಾಡಿದೆ. ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ತಮ್ಮ ಮಗನ ಅಂಗಾಂಗ ದಾನ ಮಾಡಲು ಮುಂದಾದ ಪಾಲಕರ ಮನೋಸ್ಥೈರ್ಯ ಮತ್ತು ಮಾನವೀಯತೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಈ ಘಟನೆ ತಮಿಳುನಾಡಿನಲ್ಲಿ ನಡೆದಿದ್ದು, ಸಕ್ತಿಕುಮಾರ್ ಅಂಗದಾನ ಮಾಡಿದ ವಿದ್ಯಾರ್ಥಿ, ಥೇನಿ ಜಿಲ್ಲೆಯ ಉತ್ತಮಪಾಳ್ಯ ನಿವಾಸಿಯಾಗಿದ್ದಾರೆ. ಕಳೆದ ಶನಿವಾರ ಅಪಘಾತ ಸಂಭವಿಸಿತ್ತು, ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಥಿತಿ ಗಂಭೀರವಾಗಿದ್ದ ಕಾರಣ ಬಳಿಕ ಮದುರೈನ ಮೀನಾಕ್ಷಿ ಮಿಷನ್ ಹಾಸ್ಪಿಟಲ್ ಆಂಡ್ ರಿಸರ್ಚ್​ಗೆ ರವಾನಿಸಲಾಗಿತ್ತು.

ಮೆದುಳಿಗೆ ಸಂಬಂಧಿಸಿದಂತೆ ಕೆಲವು ಪರೀಕ್ಷೆಗಳನ್ನು ಮಾಡಲಾಗಿತ್ತು, ಬಳಿಕ ಬ್ರೈನ್ ಡೆಡ್ ಎಂದು ಘೋಷಿಸಲಾಗಿತ್ತು. ಸೋಮವಾರದವರೆಗೂ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿರಲಿಲ್ಲ. ಸಕ್ತಿಕುಮಾರ್ ಸಾವಿನ ಬಳಿಕ ಅಂಗಾಂಗ ದಾನದ ಕುರಿತು ಪೋಷಕರಿಗೆ ವೈದ್ಯರು ಜಾಗೃತಿ ಮೂಡಿಸಿದರು. ಬಳಿಕ ಅವರು ಒಪ್ಪಿಕೊಂಡು ಅಂಗಾಂಗ ದಾನ ಮಾಡಿದರು.

ಅದೇ ಆಸ್ಪತ್ರೆಯಲ್ಲಿ ದಾಖಳಾಗಿದ್ದ ರೋಗಿಗೆ ಸಕ್ತಿಕುಮಾರ್ ಅವರ ಕಿಡ್ನಿ ಹಾಗೂ ಲಿವರ್​ ಅನ್ನು ನೀಡಲಾಗಿತ್ತು, ಮತ್ತೊಂದು ಕಿಡ್ನಿಯನ್ನು ತಿರುಚಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಯಿತು, ಚೆನ್ನೈನ ಅಪೋಲೊ ಆಸ್ಪತ್ರೆಗೆ ಹೃದಯ ಹಾಗೂ ಶ್ವಾಸಕೋಶವನ್ನು ಕಳುಹಿಸಿಕೊಡಲಾಯಿತು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:12 pm, Wed, 22 June 22

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ