AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Armstrong Death: ಬಿಎಸ್​ಪಿ ತಮಿಳುನಾಡು ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್ ಬರ್ಬರ ಹತ್ಯೆ

ಬಹುಜನ ಸಮಾಜವಾದಿ ಪಕ್ಷ (ಬಿಎಸ್​ಪಿ)ದ ತಮಿಳುನಾಡು ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್ ಅವರನ್ನು ಚೆನ್ನೈ ಬಳಿಯ ಅವರ ಪೆರಂಬೂರ್ ನಿವಾಸದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆಯನ್ನು ಮಾಡಿದ ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

Armstrong Death: ಬಿಎಸ್​ಪಿ ತಮಿಳುನಾಡು ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್ ಬರ್ಬರ ಹತ್ಯೆ
ಆರ್ಮ್‌ಸ್ಟ್ರಾಂಗ್
ಸುಷ್ಮಾ ಚಕ್ರೆ
|

Updated on: Jul 05, 2024 | 9:56 PM

Share

ಚೆನ್ನೈ: ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ತಮಿಳುನಾಡು ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಅವರನ್ನು ಇಂದು (ಜುಲೈ 5) ಪೆರಂಬೂರ್‌ನಲ್ಲಿರುವ ಅವರ ನಿವಾಸದ ಬಳಿ 6 ಮಂದಿ ಅಪರಿಚಿತ ವ್ಯಕ್ತಿಗಳ ಗುಂಪೊಂದು ಬರ್ಬರವಾಗಿ ಕೊಲೆ ಮಾಡಿದೆ ಎಂದು ಚೆನ್ನೈ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಕೊಲೆಯ ಹಿಂದಿನ ಉದ್ದೇಶವು ಅಸ್ಪಷ್ಟವಾಗಿದೆ.

ಸೇಂಬಿಯಂ ಪೊಲೀಸರ ವ್ಯಾಪ್ತಿಯಲ್ಲಿ ಈ ಭೀಕರ ಘಟನೆ ಸಂಭವಿಸಿದೆ. ದುಷ್ಕರ್ಮಿಗಳನ್ನು ಬಂಧಿಸಲು ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಚೆನ್ನೈನ ಪೆರಂಬೂರ್ ಪ್ರದೇಶದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.

ಇದನ್ನೂ ಓದಿ: ಕಸದ ತೊಟ್ಟಿಯಲ್ಲಿತ್ತು ದೇಹದ ತುಂಡುಗಳು; ಕೊಲೆ ರಹಸ್ಯದ ಸುಳಿವು ನೀಡಿತ್ತು ಕಪ್ಪು ಮೀಸೆ!

ವರದಿಗಳ ಪ್ರಕಾರ, ಅಪರಿಚಿತ ಗ್ಯಾಂಗ್ ಪೆರಂಬೂರಿನ ಸದಾಯಪ್ಪನ್ ಸ್ಟ್ರೀಟ್‌ನಲ್ಲಿರುವ ಅವರ ಮನೆಯ ಸಮೀಪವೇ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ, ಪರಾರಿಯಾಗಿದೆ. ತಕ್ಷಣ ಬಿಎಸ್​ಪಿ ರಾಜ್ಯಾಧ್ಯಕ್ಷರನ್ನು ಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ.

ಸದ್ಯ ಪೊಲೀಸರು ಈ ಕೊಲೆಯ ತನಿಖೆ ನಡೆಸುತ್ತಿದ್ದಾರೆ. ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಪಳನಿಸ್ವಾಮಿ ಈ ಹತ್ಯೆಯನ್ನು ಖಂಡಿಸಿದ್ದಾರೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಮತ್ತು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯನ್ನು ಈ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್