Armstrong Death: ಬಿಎಸ್​ಪಿ ತಮಿಳುನಾಡು ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್ ಬರ್ಬರ ಹತ್ಯೆ

ಬಹುಜನ ಸಮಾಜವಾದಿ ಪಕ್ಷ (ಬಿಎಸ್​ಪಿ)ದ ತಮಿಳುನಾಡು ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್ ಅವರನ್ನು ಚೆನ್ನೈ ಬಳಿಯ ಅವರ ಪೆರಂಬೂರ್ ನಿವಾಸದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆಯನ್ನು ಮಾಡಿದ ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

Armstrong Death: ಬಿಎಸ್​ಪಿ ತಮಿಳುನಾಡು ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್ ಬರ್ಬರ ಹತ್ಯೆ
ಆರ್ಮ್‌ಸ್ಟ್ರಾಂಗ್
Follow us
|

Updated on: Jul 05, 2024 | 9:56 PM

ಚೆನ್ನೈ: ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ತಮಿಳುನಾಡು ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಅವರನ್ನು ಇಂದು (ಜುಲೈ 5) ಪೆರಂಬೂರ್‌ನಲ್ಲಿರುವ ಅವರ ನಿವಾಸದ ಬಳಿ 6 ಮಂದಿ ಅಪರಿಚಿತ ವ್ಯಕ್ತಿಗಳ ಗುಂಪೊಂದು ಬರ್ಬರವಾಗಿ ಕೊಲೆ ಮಾಡಿದೆ ಎಂದು ಚೆನ್ನೈ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಕೊಲೆಯ ಹಿಂದಿನ ಉದ್ದೇಶವು ಅಸ್ಪಷ್ಟವಾಗಿದೆ.

ಸೇಂಬಿಯಂ ಪೊಲೀಸರ ವ್ಯಾಪ್ತಿಯಲ್ಲಿ ಈ ಭೀಕರ ಘಟನೆ ಸಂಭವಿಸಿದೆ. ದುಷ್ಕರ್ಮಿಗಳನ್ನು ಬಂಧಿಸಲು ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಚೆನ್ನೈನ ಪೆರಂಬೂರ್ ಪ್ರದೇಶದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.

ಇದನ್ನೂ ಓದಿ: ಕಸದ ತೊಟ್ಟಿಯಲ್ಲಿತ್ತು ದೇಹದ ತುಂಡುಗಳು; ಕೊಲೆ ರಹಸ್ಯದ ಸುಳಿವು ನೀಡಿತ್ತು ಕಪ್ಪು ಮೀಸೆ!

ವರದಿಗಳ ಪ್ರಕಾರ, ಅಪರಿಚಿತ ಗ್ಯಾಂಗ್ ಪೆರಂಬೂರಿನ ಸದಾಯಪ್ಪನ್ ಸ್ಟ್ರೀಟ್‌ನಲ್ಲಿರುವ ಅವರ ಮನೆಯ ಸಮೀಪವೇ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ, ಪರಾರಿಯಾಗಿದೆ. ತಕ್ಷಣ ಬಿಎಸ್​ಪಿ ರಾಜ್ಯಾಧ್ಯಕ್ಷರನ್ನು ಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ.

ಸದ್ಯ ಪೊಲೀಸರು ಈ ಕೊಲೆಯ ತನಿಖೆ ನಡೆಸುತ್ತಿದ್ದಾರೆ. ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಪಳನಿಸ್ವಾಮಿ ಈ ಹತ್ಯೆಯನ್ನು ಖಂಡಿಸಿದ್ದಾರೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಮತ್ತು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯನ್ನು ಈ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ರಸ್ತೆಯಲ್ಲಿ ತಳ್ಳುಗಾಡಿ ಇಟ್ಟಿದ್ದಕ್ಕೆ ಗಲಾಟೆ: ವ್ಯಾಪಾರಿ ಮೇಲೆ ಪಿಸಿ ಹಲ್ಲೆ
ರಸ್ತೆಯಲ್ಲಿ ತಳ್ಳುಗಾಡಿ ಇಟ್ಟಿದ್ದಕ್ಕೆ ಗಲಾಟೆ: ವ್ಯಾಪಾರಿ ಮೇಲೆ ಪಿಸಿ ಹಲ್ಲೆ
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಜು.12ಕ್ಕೆ ದರ್ಶನ್ ನಟನೆಯ ‘ಶಾಸ್ತ್ರಿ’ ಮರು ಬಿಡುಗಡೆ; ಏನಿದು ಪ್ಲ್ಯಾನ್?
ಜು.12ಕ್ಕೆ ದರ್ಶನ್ ನಟನೆಯ ‘ಶಾಸ್ತ್ರಿ’ ಮರು ಬಿಡುಗಡೆ; ಏನಿದು ಪ್ಲ್ಯಾನ್?
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
ಡಿಸಿಎಂಗಳ ಬಗ್ಗೆ ಕೇಳಿದಾಗ ರಾಜಣ್ಣ ವರಿಷ್ಠರು ತೆಪ್ಪಗಿರಲು ಹೇಳಿದ್ದಾರೆಂದರು
ಡಿಸಿಎಂಗಳ ಬಗ್ಗೆ ಕೇಳಿದಾಗ ರಾಜಣ್ಣ ವರಿಷ್ಠರು ತೆಪ್ಪಗಿರಲು ಹೇಳಿದ್ದಾರೆಂದರು