AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

ಜೂನ್ 18ರಂದು ನಡೆಯಲಿರುವ ತಮಿಳುನಾಡಿನ ರಾಜ್ಯಸಭಾ ಉಪಚುನಾವಣೆಗಾಗಿ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ತನ್ನ ಮೈತ್ರಿ ಪಾಲುದಾರ ಪಕ್ಷವಾದ ಕಾಂಗ್ರೆಸ್‌ಗೆ ಒಂದು ಸ್ಥಾನವನ್ನು ಬಿಟ್ಟುಕೊಟ್ಟಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಪಕ್ಷದ ಮುಖ್ಯಸ್ಥ ಹಾಗೂ ತಮಿಳುನಾಡು ಮುಖ್ಯಮಂತ್ರಿ ವಿಜಯ್, "ಜೂನ್ 18 ರಂದು ತಮಿಳುನಾಡಿನಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ, ತಮಿಳಗ ವೆಟ್ರಿ ಕಳಗಂ ನೇತೃತ್ವದ ಮೈತ್ರಿಕೂಟವು ತನ್ನ ಮೈತ್ರಿ ಪಾಲುದಾರ ಪಕ್ಷವಾದ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ಗೆ ಆ ರಾಜ್ಯಸಭಾ ಸ್ಥಾನವನ್ನು ಹಂಚಿಕೆ ಮಾಡಲು ನಿರ್ಧರಿಸಿದೆ" ಎಂದು ತಿಳಿಸಿದ್ದಾರೆ.

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ
Rahul Gandhi With Cm VijayImage Credit source: PTI
ಸುಷ್ಮಾ ಚಕ್ರೆ
|

Updated on: Jun 03, 2026 | 8:39 PM

Share

ಚೆನ್ನೈ, ಜೂನ್ 3: ಜೂನ್ 18ರಂದು ನಡೆಯಲಿರುವ ತಮಿಳುನಾಡಿನ ರಾಜ್ಯಸಭಾ ಉಪಚುನಾವಣೆಗೆ ನಟ ವಿಜಯ್ (Vijay) ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ತನ್ನ ಪಾಲಿನ ಸೀಟನ್ನು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಡಲು ನಿರ್ಧರಿಸಿದೆ. ಈ ನಿರ್ಧಾರವು ಮುಂಬರುವ ದಿನಗಳಲ್ಲಿ ತಮಿಳುನಾಡಿನ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸುವ ಸಾಧ್ಯತೆ ಇದೆ. ತಮಿಳುನಾಡಿನಲ್ಲಿ ತೆರವಾಗಿರುವ 1 ರಾಜ್ಯಸಭಾ ಸ್ಥಾನಕ್ಕೆ ಕೇಂದ್ರ ಚುನಾವಣಾ ಆಯೋಗವು ಇತ್ತೀಚೆಗೆ ಉಪಚುನಾವಣೆ ಪ್ರಕಟಿಸಿತ್ತು.

ಜೂನ್ 18ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಅಂದೇ ಸಂಜೆ ಫಲಿತಾಂಶ ಹೊರಬೀಳಲಿದೆ. ವಿಧಾನಸಭೆಯಲ್ಲಿನ ಸಂಖ್ಯಾಬಲ ಮತ್ತು ರಾಜಕೀಯ ತಂತ್ರಗಾರಿಕೆಯ ಭಾಗವಾಗಿ ಟಿವಿಕೆ ಈ ಸ್ಥಾನವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಟ್ಟಿದ್ದು, ಕಾಂಗ್ರೆಸ್ ಶೀಘ್ರದಲ್ಲೇ ತನ್ನ ಅಧಿಕೃತ ಅಭ್ಯರ್ಥಿಯನ್ನು ಘೋಷಿಸಲಿದೆ.

ಇದನ್ನೂ ಓದಿ: ತಮಿಳುನಾಡು ರಾಜಕೀಯದಲ್ಲಿ ಹೊಸ ತಿರುವು; ಎಐಎಡಿಎಂಕೆಗೆ ರಾಜೀನಾಮೆ ನೀಡಿ ಟಿವಿಕೆಯತ್ತ ಮುಖ ಮಾಡಿದ 3 ಶಾಸಕರು

ಟಿವಿಕೆ ಪಕ್ಷವು ತಮಿಳುನಾಡಿನ ರಾಜಕೀಯ ರಂಗಕ್ಕೆ ಪ್ರವೇಶಿಸಿದ ನಂತರ ತೆಗೆದುಕೊಳ್ಳುತ್ತಿರುವ ಪ್ರಮುಖ ರಾಜಕೀಯ ನಿರ್ಧಾರ ಇದಾಗಿದೆ. ಈಗಾಗಲೇ ಚುನಾವಣಾ ಅಧಿಸೂಚನೆ ಹೊರಬಿದ್ದಿರುವುದರಿಂದ, ಕಾಂಗ್ರೆಸ್ ಹೈಕಮಾಂಡ್ ತಮಿಳುನಾಡಿನ ಹಿರಿಯ ನಾಯಕರೊಬ್ಬರನ್ನು ಈ ಸ್ಥಾನಕ್ಕೆ ಕಣಕ್ಕಿಳಿಸಲು ಚಿಂತನೆ ನಡೆಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!
ಈದ್ ಮಿಲಾದ್​ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ
ಈದ್ ಮಿಲಾದ್​ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ
ನಾಗೇಂದ್ರ ರಾಜೀನಾಮೆ ಕೊಟ್ರೆ ಬಿಜೆಪಿ ಪಾದಯಾತ್ರೆ ಮಾಡುತ್ತೋ ಇಲ್ವೋ?
ನಾಗೇಂದ್ರ ರಾಜೀನಾಮೆ ಕೊಟ್ರೆ ಬಿಜೆಪಿ ಪಾದಯಾತ್ರೆ ಮಾಡುತ್ತೋ ಇಲ್ವೋ?
ಅಮೆರಿಕದಲ್ಲಿ ಹೇಗಿದೆ ‘ಟಾಕ್ಸಿಕ್’ ಸಿನಿಮಾ ಅಬ್ಬರ: ವಿಡಿಯೋ ನೋಡಿ
ಅಮೆರಿಕದಲ್ಲಿ ಹೇಗಿದೆ ‘ಟಾಕ್ಸಿಕ್’ ಸಿನಿಮಾ ಅಬ್ಬರ: ವಿಡಿಯೋ ನೋಡಿ
ನಕಲಿ ಸೌಂದರ್ಯವರ್ಧಕಗಳ ವಿರುದ್ಧ FDA ಸಮರ
ನಕಲಿ ಸೌಂದರ್ಯವರ್ಧಕಗಳ ವಿರುದ್ಧ FDA ಸಮರ
ಮಂತ್ರಾಲಯದಲ್ಲಿ ಸಂಭ್ರಮ: 335ನೇ ಆರಾಧನಾ ಮಹೋತ್ಸವಕ್ಕೆ ಸಕಲ ಸಿದ್ಧತೆ
ಮಂತ್ರಾಲಯದಲ್ಲಿ ಸಂಭ್ರಮ: 335ನೇ ಆರಾಧನಾ ಮಹೋತ್ಸವಕ್ಕೆ ಸಕಲ ಸಿದ್ಧತೆ
ಲಖನೌದಿಂದ ಕೆಐಎಬಿಗೆ ಬಂದಿದ್ದ ವಿಮಾನಕ್ಕೆ ಬಾಂಬ್​​ ಬೆದರಿಕೆ
ಲಖನೌದಿಂದ ಕೆಐಎಬಿಗೆ ಬಂದಿದ್ದ ವಿಮಾನಕ್ಕೆ ಬಾಂಬ್​​ ಬೆದರಿಕೆ
ಅಭಿಮನ್ಯುಗೆ ವಿಶ್ರಾಂತಿ; ಈ ಬಾರಿ ಅಂಬಾರಿ ಹೊರುವ ಆನೆ ಯಾವುದು?
ಅಭಿಮನ್ಯುಗೆ ವಿಶ್ರಾಂತಿ; ಈ ಬಾರಿ ಅಂಬಾರಿ ಹೊರುವ ಆನೆ ಯಾವುದು?