AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ಕೀಳು ಜಾತಿ ಯಾವುದು?; ವಿವಾದಕ್ಕೀಡಾದ ಪೆರಿಯಾರ್ ವಿವಿ ಪ್ರಶ್ನೆ ಪತ್ರಿಕೆ

ತಮಿಳುನಾಡಿನಲ್ಲಿ ಕೀಳು ಜಾತಿಗೆ ಸೇರಿದ್ದು ಯಾವುದು ಎಂಬ ಪ್ರಶ್ನೆಗೆ ನಾಲ್ಕು ಆಯ್ಕೆ ಉತ್ತರಗಳನ್ನು ಕೊಡಲಾಗಿದೆ. ಇತಿಹಾಸ ಸ್ನಾತಕೋತ್ತರ ಪದವಿ ಪ್ರಥಮ ವರ್ಷದ(ಎರಡನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆಯಲ್ಲಿ ಈ ಪ್ರಶ್ನೆ ಕೇಳಲಾಗಿದೆ.

ತಮಿಳುನಾಡಿನಲ್ಲಿ ಕೀಳು ಜಾತಿ ಯಾವುದು?; ವಿವಾದಕ್ಕೀಡಾದ ಪೆರಿಯಾರ್ ವಿವಿ ಪ್ರಶ್ನೆ ಪತ್ರಿಕೆ
ಪ್ರಶ್ನೆ ಪತ್ರಿಕೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jul 15, 2022 | 6:11 PM

Share

ಸೇಲಂ: ತಮಿಳುನಾಡಿನ (Tamil Nadu) ಪೆರಿಯಾರ್ ವಿಶ್ವವಿದ್ಯಾಲಯದ (Periyar University) ಪರೀಕ್ಷೆಯ  ಪ್ರಶ್ನೆ ಪತ್ರಿಕೆಯಲ್ಲಿ ಜಾತಿ (Caste) ಬಗ್ಗೆ ಪ್ರಶ್ನೆ ಕೇಳಿದ್ದು ಇದು ವಿವಾದಕ್ಕೀಡಾಗಿದೆ. ಗುರುವಾರ ನಡೆದ ಮೊದಲ ವರ್ಷ ಎಂಎ ಇತಿಹಾಸ ಪರೀಕ್ಷೆ ಪ್ರಶ್ನೆ  ಪತ್ರಿಕೆಯಲ್ಲಿ ಹೀಗೊಂದು ಪ್ರಶ್ನೆ ಕೇಳಲಾಗಿದೆ. ಆದಾಗ್ಯೂ, ಈ ಬಗ್ಗೆ ತನಿಖೆ ನಡೆಸುವುದಾಗಿ ಉಪ ಕುಲಪತಿ ಜಗನ್ನಾಥನ್ ಭರವಸೆ ನೀಡಿದ್ದಾರೆ. ತಮಿಳುನಾಡಿನಲ್ಲಿ ಕೀಳು ಜಾತಿಗೆ ಸೇರಿದ್ದು ಯಾವುದು ಎಂಬ ಪ್ರಶ್ನೆಗೆ ನಾಲ್ಕು ಆಯ್ಕೆ ಉತ್ತರಗಳನ್ನು ಕೊಡಲಾಗಿದೆ. ಇತಿಹಾಸ ಸ್ನಾತಕೋತ್ತರ ಪದವಿ ಪ್ರಥಮ ವರ್ಷದ(ಎರಡನೇ ಸೆಮಿಸ್ಟರ್) Freedom Movement of Tamil Nadu: From 1800 to 1947’ಎಂಬ ವಿಷಯದ ಪ್ರಶ್ನೆ ಪತ್ರಿಕೆಯಲ್ಲಿ ಈ ಪ್ರಶ್ನೆ ಕೇಳಲಾಗಿದೆ. ಈಗ್ಗೆ ಮಾತನಾಡಿದ ಉಪಕುಲಪತಿ ಇನ್ನೊಂದು ವಿಶ್ವವಿದ್ಯಾಲಯ ಪ್ರಶ್ನೆ ಪತ್ರಿಕೆಯನ್ನು ಸಿದ್ಧ ಪಡಿಸಿದ್ದು, ಈ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಪರೀಕ್ಷೆ ಪತ್ರಿಕೆಯನ್ನು ತಯಾರು ಮಾಡಿದ್ದು ಪೆರಿಯಾರ್ ವಿಶ್ವವಿದ್ಯಾಲಯ ಅಲ್ಲ. ಬೇರೊಂದು ವಿವಿ ಮತ್ತು ಬೇರೆ ಕಾಲೇಜಿನ ಪ್ರಾಧ್ಯಾಪಕರು ಈ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯುವುದಕ್ಕಾಗಿ ನಾವು ಪರೀಕ್ಷೆಗಿಂತ ಮುಂಚೆ ಪ್ರಶ್ನೆ ಪತ್ರಿಕೆಗಳನ್ನು ಓದಿ ನೋಡುವುದಿಲ್ಲ. ವಿವಾದತ ಪ್ರಶ್ನೆ ಬಗ್ಗೆ ನನಗೇನೂ ಮಾಹಿತಿ ಇಲ್ಲ. ನಾವು ಈ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ವಿಸಿ ಹೇಳಿದ್ದಾರೆ.

ಪರೀಕ್ಷಾ ಪತ್ರಿಕೆ ಸಿದ್ಧಪಡಿಸಿದ ಪರೀಕ್ಷಾ ಕಂಟ್ರೋಲರ್ ನಿಂದ ನಾವು ವರದಿ ಕೇಳಿದ್ದೇವೆ. ಈ ಪರೀಕ್ಷೆಯನ್ನು ಮತ್ತೊಮ್ಮೆ ನಡೆಸುವುದಿಲ್ಲ ಎಂದು ಅವರು ಹೇಳಿದ್ದಾರೆ.

Published On - 5:55 pm, Fri, 15 July 22

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್