AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ಕೀಳು ಜಾತಿ ಯಾವುದು?; ವಿವಾದಕ್ಕೀಡಾದ ಪೆರಿಯಾರ್ ವಿವಿ ಪ್ರಶ್ನೆ ಪತ್ರಿಕೆ

ತಮಿಳುನಾಡಿನಲ್ಲಿ ಕೀಳು ಜಾತಿಗೆ ಸೇರಿದ್ದು ಯಾವುದು ಎಂಬ ಪ್ರಶ್ನೆಗೆ ನಾಲ್ಕು ಆಯ್ಕೆ ಉತ್ತರಗಳನ್ನು ಕೊಡಲಾಗಿದೆ. ಇತಿಹಾಸ ಸ್ನಾತಕೋತ್ತರ ಪದವಿ ಪ್ರಥಮ ವರ್ಷದ(ಎರಡನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆಯಲ್ಲಿ ಈ ಪ್ರಶ್ನೆ ಕೇಳಲಾಗಿದೆ.

ತಮಿಳುನಾಡಿನಲ್ಲಿ ಕೀಳು ಜಾತಿ ಯಾವುದು?; ವಿವಾದಕ್ಕೀಡಾದ ಪೆರಿಯಾರ್ ವಿವಿ ಪ್ರಶ್ನೆ ಪತ್ರಿಕೆ
ಪ್ರಶ್ನೆ ಪತ್ರಿಕೆ
TV9 Web
| Edited By: |

Updated on:Jul 15, 2022 | 6:11 PM

Share

ಸೇಲಂ: ತಮಿಳುನಾಡಿನ (Tamil Nadu) ಪೆರಿಯಾರ್ ವಿಶ್ವವಿದ್ಯಾಲಯದ (Periyar University) ಪರೀಕ್ಷೆಯ  ಪ್ರಶ್ನೆ ಪತ್ರಿಕೆಯಲ್ಲಿ ಜಾತಿ (Caste) ಬಗ್ಗೆ ಪ್ರಶ್ನೆ ಕೇಳಿದ್ದು ಇದು ವಿವಾದಕ್ಕೀಡಾಗಿದೆ. ಗುರುವಾರ ನಡೆದ ಮೊದಲ ವರ್ಷ ಎಂಎ ಇತಿಹಾಸ ಪರೀಕ್ಷೆ ಪ್ರಶ್ನೆ  ಪತ್ರಿಕೆಯಲ್ಲಿ ಹೀಗೊಂದು ಪ್ರಶ್ನೆ ಕೇಳಲಾಗಿದೆ. ಆದಾಗ್ಯೂ, ಈ ಬಗ್ಗೆ ತನಿಖೆ ನಡೆಸುವುದಾಗಿ ಉಪ ಕುಲಪತಿ ಜಗನ್ನಾಥನ್ ಭರವಸೆ ನೀಡಿದ್ದಾರೆ. ತಮಿಳುನಾಡಿನಲ್ಲಿ ಕೀಳು ಜಾತಿಗೆ ಸೇರಿದ್ದು ಯಾವುದು ಎಂಬ ಪ್ರಶ್ನೆಗೆ ನಾಲ್ಕು ಆಯ್ಕೆ ಉತ್ತರಗಳನ್ನು ಕೊಡಲಾಗಿದೆ. ಇತಿಹಾಸ ಸ್ನಾತಕೋತ್ತರ ಪದವಿ ಪ್ರಥಮ ವರ್ಷದ(ಎರಡನೇ ಸೆಮಿಸ್ಟರ್) Freedom Movement of Tamil Nadu: From 1800 to 1947’ಎಂಬ ವಿಷಯದ ಪ್ರಶ್ನೆ ಪತ್ರಿಕೆಯಲ್ಲಿ ಈ ಪ್ರಶ್ನೆ ಕೇಳಲಾಗಿದೆ. ಈಗ್ಗೆ ಮಾತನಾಡಿದ ಉಪಕುಲಪತಿ ಇನ್ನೊಂದು ವಿಶ್ವವಿದ್ಯಾಲಯ ಪ್ರಶ್ನೆ ಪತ್ರಿಕೆಯನ್ನು ಸಿದ್ಧ ಪಡಿಸಿದ್ದು, ಈ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಪರೀಕ್ಷೆ ಪತ್ರಿಕೆಯನ್ನು ತಯಾರು ಮಾಡಿದ್ದು ಪೆರಿಯಾರ್ ವಿಶ್ವವಿದ್ಯಾಲಯ ಅಲ್ಲ. ಬೇರೊಂದು ವಿವಿ ಮತ್ತು ಬೇರೆ ಕಾಲೇಜಿನ ಪ್ರಾಧ್ಯಾಪಕರು ಈ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯುವುದಕ್ಕಾಗಿ ನಾವು ಪರೀಕ್ಷೆಗಿಂತ ಮುಂಚೆ ಪ್ರಶ್ನೆ ಪತ್ರಿಕೆಗಳನ್ನು ಓದಿ ನೋಡುವುದಿಲ್ಲ. ವಿವಾದತ ಪ್ರಶ್ನೆ ಬಗ್ಗೆ ನನಗೇನೂ ಮಾಹಿತಿ ಇಲ್ಲ. ನಾವು ಈ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ವಿಸಿ ಹೇಳಿದ್ದಾರೆ.

ಪರೀಕ್ಷಾ ಪತ್ರಿಕೆ ಸಿದ್ಧಪಡಿಸಿದ ಪರೀಕ್ಷಾ ಕಂಟ್ರೋಲರ್ ನಿಂದ ನಾವು ವರದಿ ಕೇಳಿದ್ದೇವೆ. ಈ ಪರೀಕ್ಷೆಯನ್ನು ಮತ್ತೊಮ್ಮೆ ನಡೆಸುವುದಿಲ್ಲ ಎಂದು ಅವರು ಹೇಳಿದ್ದಾರೆ.

Published On - 5:55 pm, Fri, 15 July 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ