AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ಕೀಳು ಜಾತಿ ಯಾವುದು?; ವಿವಾದಕ್ಕೀಡಾದ ಪೆರಿಯಾರ್ ವಿವಿ ಪ್ರಶ್ನೆ ಪತ್ರಿಕೆ

ತಮಿಳುನಾಡಿನಲ್ಲಿ ಕೀಳು ಜಾತಿಗೆ ಸೇರಿದ್ದು ಯಾವುದು ಎಂಬ ಪ್ರಶ್ನೆಗೆ ನಾಲ್ಕು ಆಯ್ಕೆ ಉತ್ತರಗಳನ್ನು ಕೊಡಲಾಗಿದೆ. ಇತಿಹಾಸ ಸ್ನಾತಕೋತ್ತರ ಪದವಿ ಪ್ರಥಮ ವರ್ಷದ(ಎರಡನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆಯಲ್ಲಿ ಈ ಪ್ರಶ್ನೆ ಕೇಳಲಾಗಿದೆ.

ತಮಿಳುನಾಡಿನಲ್ಲಿ ಕೀಳು ಜಾತಿ ಯಾವುದು?; ವಿವಾದಕ್ಕೀಡಾದ ಪೆರಿಯಾರ್ ವಿವಿ ಪ್ರಶ್ನೆ ಪತ್ರಿಕೆ
ಪ್ರಶ್ನೆ ಪತ್ರಿಕೆ
TV9 Web
| Edited By: |

Updated on:Jul 15, 2022 | 6:11 PM

Share

ಸೇಲಂ: ತಮಿಳುನಾಡಿನ (Tamil Nadu) ಪೆರಿಯಾರ್ ವಿಶ್ವವಿದ್ಯಾಲಯದ (Periyar University) ಪರೀಕ್ಷೆಯ  ಪ್ರಶ್ನೆ ಪತ್ರಿಕೆಯಲ್ಲಿ ಜಾತಿ (Caste) ಬಗ್ಗೆ ಪ್ರಶ್ನೆ ಕೇಳಿದ್ದು ಇದು ವಿವಾದಕ್ಕೀಡಾಗಿದೆ. ಗುರುವಾರ ನಡೆದ ಮೊದಲ ವರ್ಷ ಎಂಎ ಇತಿಹಾಸ ಪರೀಕ್ಷೆ ಪ್ರಶ್ನೆ  ಪತ್ರಿಕೆಯಲ್ಲಿ ಹೀಗೊಂದು ಪ್ರಶ್ನೆ ಕೇಳಲಾಗಿದೆ. ಆದಾಗ್ಯೂ, ಈ ಬಗ್ಗೆ ತನಿಖೆ ನಡೆಸುವುದಾಗಿ ಉಪ ಕುಲಪತಿ ಜಗನ್ನಾಥನ್ ಭರವಸೆ ನೀಡಿದ್ದಾರೆ. ತಮಿಳುನಾಡಿನಲ್ಲಿ ಕೀಳು ಜಾತಿಗೆ ಸೇರಿದ್ದು ಯಾವುದು ಎಂಬ ಪ್ರಶ್ನೆಗೆ ನಾಲ್ಕು ಆಯ್ಕೆ ಉತ್ತರಗಳನ್ನು ಕೊಡಲಾಗಿದೆ. ಇತಿಹಾಸ ಸ್ನಾತಕೋತ್ತರ ಪದವಿ ಪ್ರಥಮ ವರ್ಷದ(ಎರಡನೇ ಸೆಮಿಸ್ಟರ್) Freedom Movement of Tamil Nadu: From 1800 to 1947’ಎಂಬ ವಿಷಯದ ಪ್ರಶ್ನೆ ಪತ್ರಿಕೆಯಲ್ಲಿ ಈ ಪ್ರಶ್ನೆ ಕೇಳಲಾಗಿದೆ. ಈಗ್ಗೆ ಮಾತನಾಡಿದ ಉಪಕುಲಪತಿ ಇನ್ನೊಂದು ವಿಶ್ವವಿದ್ಯಾಲಯ ಪ್ರಶ್ನೆ ಪತ್ರಿಕೆಯನ್ನು ಸಿದ್ಧ ಪಡಿಸಿದ್ದು, ಈ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಪರೀಕ್ಷೆ ಪತ್ರಿಕೆಯನ್ನು ತಯಾರು ಮಾಡಿದ್ದು ಪೆರಿಯಾರ್ ವಿಶ್ವವಿದ್ಯಾಲಯ ಅಲ್ಲ. ಬೇರೊಂದು ವಿವಿ ಮತ್ತು ಬೇರೆ ಕಾಲೇಜಿನ ಪ್ರಾಧ್ಯಾಪಕರು ಈ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯುವುದಕ್ಕಾಗಿ ನಾವು ಪರೀಕ್ಷೆಗಿಂತ ಮುಂಚೆ ಪ್ರಶ್ನೆ ಪತ್ರಿಕೆಗಳನ್ನು ಓದಿ ನೋಡುವುದಿಲ್ಲ. ವಿವಾದತ ಪ್ರಶ್ನೆ ಬಗ್ಗೆ ನನಗೇನೂ ಮಾಹಿತಿ ಇಲ್ಲ. ನಾವು ಈ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ವಿಸಿ ಹೇಳಿದ್ದಾರೆ.

ಪರೀಕ್ಷಾ ಪತ್ರಿಕೆ ಸಿದ್ಧಪಡಿಸಿದ ಪರೀಕ್ಷಾ ಕಂಟ್ರೋಲರ್ ನಿಂದ ನಾವು ವರದಿ ಕೇಳಿದ್ದೇವೆ. ಈ ಪರೀಕ್ಷೆಯನ್ನು ಮತ್ತೊಮ್ಮೆ ನಡೆಸುವುದಿಲ್ಲ ಎಂದು ಅವರು ಹೇಳಿದ್ದಾರೆ.

Published On - 5:55 pm, Fri, 15 July 22

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು