AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ಕೀಳು ಜಾತಿ ಯಾವುದು?; ವಿವಾದಕ್ಕೀಡಾದ ಪೆರಿಯಾರ್ ವಿವಿ ಪ್ರಶ್ನೆ ಪತ್ರಿಕೆ

ತಮಿಳುನಾಡಿನಲ್ಲಿ ಕೀಳು ಜಾತಿಗೆ ಸೇರಿದ್ದು ಯಾವುದು ಎಂಬ ಪ್ರಶ್ನೆಗೆ ನಾಲ್ಕು ಆಯ್ಕೆ ಉತ್ತರಗಳನ್ನು ಕೊಡಲಾಗಿದೆ. ಇತಿಹಾಸ ಸ್ನಾತಕೋತ್ತರ ಪದವಿ ಪ್ರಥಮ ವರ್ಷದ(ಎರಡನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆಯಲ್ಲಿ ಈ ಪ್ರಶ್ನೆ ಕೇಳಲಾಗಿದೆ.

ತಮಿಳುನಾಡಿನಲ್ಲಿ ಕೀಳು ಜಾತಿ ಯಾವುದು?; ವಿವಾದಕ್ಕೀಡಾದ ಪೆರಿಯಾರ್ ವಿವಿ ಪ್ರಶ್ನೆ ಪತ್ರಿಕೆ
ಪ್ರಶ್ನೆ ಪತ್ರಿಕೆ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 15, 2022 | 6:11 PM

Share

ಸೇಲಂ: ತಮಿಳುನಾಡಿನ (Tamil Nadu) ಪೆರಿಯಾರ್ ವಿಶ್ವವಿದ್ಯಾಲಯದ (Periyar University) ಪರೀಕ್ಷೆಯ  ಪ್ರಶ್ನೆ ಪತ್ರಿಕೆಯಲ್ಲಿ ಜಾತಿ (Caste) ಬಗ್ಗೆ ಪ್ರಶ್ನೆ ಕೇಳಿದ್ದು ಇದು ವಿವಾದಕ್ಕೀಡಾಗಿದೆ. ಗುರುವಾರ ನಡೆದ ಮೊದಲ ವರ್ಷ ಎಂಎ ಇತಿಹಾಸ ಪರೀಕ್ಷೆ ಪ್ರಶ್ನೆ  ಪತ್ರಿಕೆಯಲ್ಲಿ ಹೀಗೊಂದು ಪ್ರಶ್ನೆ ಕೇಳಲಾಗಿದೆ. ಆದಾಗ್ಯೂ, ಈ ಬಗ್ಗೆ ತನಿಖೆ ನಡೆಸುವುದಾಗಿ ಉಪ ಕುಲಪತಿ ಜಗನ್ನಾಥನ್ ಭರವಸೆ ನೀಡಿದ್ದಾರೆ. ತಮಿಳುನಾಡಿನಲ್ಲಿ ಕೀಳು ಜಾತಿಗೆ ಸೇರಿದ್ದು ಯಾವುದು ಎಂಬ ಪ್ರಶ್ನೆಗೆ ನಾಲ್ಕು ಆಯ್ಕೆ ಉತ್ತರಗಳನ್ನು ಕೊಡಲಾಗಿದೆ. ಇತಿಹಾಸ ಸ್ನಾತಕೋತ್ತರ ಪದವಿ ಪ್ರಥಮ ವರ್ಷದ(ಎರಡನೇ ಸೆಮಿಸ್ಟರ್) Freedom Movement of Tamil Nadu: From 1800 to 1947’ಎಂಬ ವಿಷಯದ ಪ್ರಶ್ನೆ ಪತ್ರಿಕೆಯಲ್ಲಿ ಈ ಪ್ರಶ್ನೆ ಕೇಳಲಾಗಿದೆ. ಈಗ್ಗೆ ಮಾತನಾಡಿದ ಉಪಕುಲಪತಿ ಇನ್ನೊಂದು ವಿಶ್ವವಿದ್ಯಾಲಯ ಪ್ರಶ್ನೆ ಪತ್ರಿಕೆಯನ್ನು ಸಿದ್ಧ ಪಡಿಸಿದ್ದು, ಈ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಪರೀಕ್ಷೆ ಪತ್ರಿಕೆಯನ್ನು ತಯಾರು ಮಾಡಿದ್ದು ಪೆರಿಯಾರ್ ವಿಶ್ವವಿದ್ಯಾಲಯ ಅಲ್ಲ. ಬೇರೊಂದು ವಿವಿ ಮತ್ತು ಬೇರೆ ಕಾಲೇಜಿನ ಪ್ರಾಧ್ಯಾಪಕರು ಈ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯುವುದಕ್ಕಾಗಿ ನಾವು ಪರೀಕ್ಷೆಗಿಂತ ಮುಂಚೆ ಪ್ರಶ್ನೆ ಪತ್ರಿಕೆಗಳನ್ನು ಓದಿ ನೋಡುವುದಿಲ್ಲ. ವಿವಾದತ ಪ್ರಶ್ನೆ ಬಗ್ಗೆ ನನಗೇನೂ ಮಾಹಿತಿ ಇಲ್ಲ. ನಾವು ಈ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ವಿಸಿ ಹೇಳಿದ್ದಾರೆ.

ಪರೀಕ್ಷಾ ಪತ್ರಿಕೆ ಸಿದ್ಧಪಡಿಸಿದ ಪರೀಕ್ಷಾ ಕಂಟ್ರೋಲರ್ ನಿಂದ ನಾವು ವರದಿ ಕೇಳಿದ್ದೇವೆ. ಈ ಪರೀಕ್ಷೆಯನ್ನು ಮತ್ತೊಮ್ಮೆ ನಡೆಸುವುದಿಲ್ಲ ಎಂದು ಅವರು ಹೇಳಿದ್ದಾರೆ.

Published On - 5:55 pm, Fri, 15 July 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ