AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ 19ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತವನ್ನು 10 ಲಕ್ಷ ರೂ.ಗೆ ಏರಿಸಿದ ತಮಿಳುನಾಡಿನ ಸರ್ಕಾರ

ಕೊರೊನಾ ವೈರಸ್​ ಸಂದರ್ಭದಲ್ಲಿ ಕೂಡ ಪತ್ರಕರ್ತರು ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತಿದ್ದಾರೆ. ಅವರಿಗೆ ನೀಡಲಾಗುವ ನೆರವಿನ ಮೊತ್ತವನ್ನು ಹೆಚ್ಚಿಸಬೇಕು ಎಂದು ಪತ್ರಕರ್ತರ ಸಂಘಟನೆಗಳು ಮನವಿ ಮಾಡಿವೆ,

ಕೊವಿಡ್​ 19ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತವನ್ನು 10 ಲಕ್ಷ ರೂ.ಗೆ ಏರಿಸಿದ ತಮಿಳುನಾಡಿನ ಸರ್ಕಾರ
ಎಂ.ಕೆ.ಸ್ಟಾಲಿನ್​
Follow us
Lakshmi Hegde
|

Updated on: May 26, 2021 | 7:27 PM

ಚೆನ್ನೈ: ಕೊರೊನಾದಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ಇನ್ನು ಮುಂದೆ 10 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ತಮಿಳುನಾಡು ಸರ್ಕಾರ ಘೋಷಿಸಿದೆ. ಇಷ್ಟು ದಿನ ಅಲ್ಲಿ 5 ಲಕ್ಷ ರೂ.ಪರಿಹಾರ ನೀಡಲಾಗುತ್ತಿತ್ತು. ಅಲ್ಲದೆ, ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ಕೆಲಸ ಮಾಡಿದ ಮುಂಚೂಣಿ ಪತ್ರಕರ್ತರಿಗೆ 3000 ರೂ.ಬದಲು 5000 ರೂ.ಪ್ರೋತ್ಸಾಹಧನ ನೀಡುವುದಾಗಿಯೂ ಎಂ.ಕೆ.ಸ್ಟಾಲಿನ್​ ತಿಳಿಸಿದ್ದಾರೆ.

ಕೊರೊನಾ ವೈರಸ್​ ಸಂದರ್ಭದಲ್ಲಿ ಕೂಡ ಪತ್ರಕರ್ತರು ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತಿದ್ದಾರೆ. ಅವರಿಗೆ ನೀಡಲಾಗುವ ನೆರವಿನ ಮೊತ್ತವನ್ನು ಹೆಚ್ಚಿಸಬೇಕು ಎಂದು ಪತ್ರಕರ್ತರ ಸಂಘಟನೆಗಳು ಮನವಿ ಮಾಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ನೆರವಿನ ಮೊತ್ತವನ್ನು ಹೆಚ್ಚಿಸಿದ್ದಾರೆ ಎಂದು ತಮಿಳುನಾಡು ಸರ್ಕಾರ ಹೇಳಿಕೆ ಬಿಡುಗಡೆ ಮಾಡಿದೆ.

ಕೊರೊನಾ ಸಮಯದಲ್ಲಿ ಪತ್ರಕರ್ತರು ಉತ್ತಮ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಕೊಂಡಿಯಾಗಿದ್ದಾರೆ. ಸರ್ಕಾರದ ಯೋಜನೆಗಳು, ಮಾಹಿತಿಗಳನ್ನು ಜನರಿಗೆ ಸರಿಯಾಗಿ ತಲುಪಿಸಿದ್ದಾರೆ. ಇನ್ನು ರಾಜ್ಯದ ವಿವಿಧ ಭಾಗಗಳಲ್ಲಿ ಇರುವ ಕೊವಿಡ್ ಸ್ಥಿತಿಗತಿಗಳನ್ನು ಸರಿಯಾಗಿ ವರದಿ ಮಾಡುವ ಮೂಲಕ ಸರ್ಕಾರಕ್ಕೂ ಸಹಾಯ ಮಾಡಿದ್ದಾರೆ. ಸಾರ್ವಜನಿಕರಲ್ಲಿ ಅರಿವು ಕೂಡ ಮೂಡಿಸುವ ಕೆಲಸ ಮಾಡಿದ್ದಾರೆ. ಹೀಗಾಗಿ ಸರ್ಕಾರ ಮತ್ತು ಸಾರ್ವಜನಿಕರ ಮಧ್ಯೆ ಸೇತುವೆಯಾಗಿದ್ದಾರೆ. ಅಂಥ ಪತ್ರಕರ್ತರನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಪರಿಹಾರ ಮೊತ್ತ ಹೆಚ್ಚಿಸಲಾಗಿದೆ ಎಂದು ಸರ್ಕಾರಿ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಇದು ಮುಂಚೂಣಿಯಲ್ಲಿರುವ ಪತ್ರಕರ್ತರು, ಫೋಟೋ ಜರ್ನಲಿಸ್ಟ್​, ಕ್ಯಾಮರಾಮೆನ್​​ಗಳಿಗೆ ಅನ್ವಯ ಆಗಲಿದೆ. ಮುಖ್ಯಮಂತ್ರಿಯ ಹೊಸ ನಿರ್ಧಾರವನ್ನು ಸ್ವಾಗತಿಸಿದ ಚೆನ್ನೈ ಪ್ರೆಸ್​ ಕ್ಲಬ್​ನ ಸದಸ್ಯರು, ಪರಿಹಾರ ಮೊತ್ತವನ್ನು 10 ಲಕ್ಷದಿಂದ 25 ಲಕ್ಷ ರೂಪಾಯಿಗೆ ಏರಿಸಿ ಎಂದೂ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ವಿವಾದಾತ್ಮಕ ಹೇಳಿಕೆಯಿಂದ ಏನನ್ನು ಸಾಧಿಸಲಾಗದು; ಮೊಹಮ್ಮದ್ ಅಮೀರ್​ಗೆ ಬುದ್ಧಿ ಹೇಳಿದ ಶೋಯೆಬ್ ಅಖ್ತರ್

ಅಕ್ಕಿ ಸಾಗಿಸುತ್ತಿದ್ದ ಸರಕು ಸಾಗಣೆ ವಾಹನದಲ್ಲಿ 41 ಮೂಟೆಗಳು ಪತ್ತೆ
ಅಕ್ಕಿ ಸಾಗಿಸುತ್ತಿದ್ದ ಸರಕು ಸಾಗಣೆ ವಾಹನದಲ್ಲಿ 41 ಮೂಟೆಗಳು ಪತ್ತೆ
ಯಶ್ ಲುಕ್​ನಲ್ಲಿ ಬಂದ ತುಕಾಲಿ ಸಂತೋಷ್; ನಗುವಿನ ಹೊಳೆ
ಯಶ್ ಲುಕ್​ನಲ್ಲಿ ಬಂದ ತುಕಾಲಿ ಸಂತೋಷ್; ನಗುವಿನ ಹೊಳೆ
ಅಮೆರಿಕದ ಎಚ್ಚರಿಕೆಗಳಿಗೆ ಇರಾನ್ ಸೊಪ್ಪು ಹಾಕುತ್ತಿಲ್ಲ!
ಅಮೆರಿಕದ ಎಚ್ಚರಿಕೆಗಳಿಗೆ ಇರಾನ್ ಸೊಪ್ಪು ಹಾಕುತ್ತಿಲ್ಲ!
ಅವಧಿಗೂ ಮುನ್ನವೇ ತುಂಬುತ್ತಿದೆ ಕೆಆರ್​​ಎಸ್ ಡ್ಯಾಂ: 9 ಅಡಿ ಅಷ್ಟೇ ಬಾಕಿ
ಅವಧಿಗೂ ಮುನ್ನವೇ ತುಂಬುತ್ತಿದೆ ಕೆಆರ್​​ಎಸ್ ಡ್ಯಾಂ: 9 ಅಡಿ ಅಷ್ಟೇ ಬಾಕಿ
ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ