ಪ್ರಧಾನಿ ಮೋದಿಯನ್ನು ಭೇಟಿಯಾದ ಸಿಎಂ ವಿಜಯ್; ವಂದೇ ಮಾತರಂ ವಿವಾದದ ಬಗ್ಗೆ ಚರ್ಚೆ
ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ದೆಹಲಿ ಪ್ರವಾಸ ಕೈಗೊಂಡಿರುವ ಜೋಸೆಫ್ ವಿಜಯ್ (ದಳಪತಿ ವಿಜಯ್) ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ರಾಜಕೀಯವಾಗಿ ಹಾಗೂ ತಮಿಳುನಾಡಿನ ಅಭಿವೃದ್ಧಿಯ ದೃಷ್ಟಿಯಿಂದ ಈ ಭೇಟಿ ಅತ್ಯಂತ ಮಹತ್ವದ್ದಾಗಿ ಪರಿಣಮಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಸಿಎಂ ವಿಜಯ್, ಅವರಿಗೆ ಶಾಲು ಹೊದಿಸಿ, ಸ್ಮರಣಿಕೆಯನ್ನು ನೀಡಿ ಗೌರವಿಸಿದರು.

ನವದೆಹಲಿ, ಮೇ 27: ತಮಿಳುನಾಡು ಮುಖ್ಯಮಂತ್ರಿ ವಿಜಯ್ (CM Vijay) ಅವರು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಇತ್ತೀಚೆಗೆ ತಮಿಳುನಾಡಿನಲ್ಲಿ ಭಾರಿ ವಿವಾದ ಸೃಷ್ಟಿಸಿರುವ ‘ವಂದೇ ಮಾತರಂ’ ವಿವಾದದ ಕುರಿತು ಪ್ರಧಾನಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ತಮಿಳುನಾಡು ಮುಖ್ಯಮಂತ್ರಿಯಾದ ಬಳಿಕ ವಿಜಯ್ ಮತ್ತು ಪ್ರಧಾನಿ ಮೋದಿ (PM Modi) ನಡುವಿನ ಮೊದಲ ಭೇಟಿ ಇದಾಗಿದೆ. ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಂಡ ವಿಜಯ್ ಅವರಿಗೆ ಪ್ರಧಾನಿ ಮೋದಿ ಅವರು ಕೂಡ ಅಭಿನಂದನೆ ಸಲ್ಲಿಸಿ, ತಮಿಳುನಾಡಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಸಂಪೂರ್ಣ ಸಹಕಾರದ ಭರವಸೆ ನೀಡಿದರು.
ಪ್ರಧಾನಿ ಮೋದಿ ಜೊತೆಗಿನ ಮಾತುಕತೆಯ ವೇಳೆ ತಮಿಳುನಾಡು ಸಿಎಂ ವಿಜಯ್ ಅವರು ರಾಜ್ಯದಲ್ಲಿ ಇತ್ತೀಚೆಗೆ ನಡೆದ ‘ವಂದೇ ಮಾತರಂ’ ಗೀತೆ ಉಲ್ಲೇಖಕ್ಕೆ ಸಂಬಂಧಿಸಿದ ವಿವಾದವನ್ನು ಪ್ರಧಾನಿ ಗಮನಕ್ಕೆ ತಂದಿದ್ದಾರೆ. ತಮಿಳುನಾಡಿನ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಅಥವಾ ಶೈಕ್ಷಣಿಕ ಸಂಸ್ಥೆಯೊಂದರಲ್ಲಿ ‘ವಂದೇ ಮಾತರಂ’ ಗೀತೆಯನ್ನು ಕಡ್ಡಾಯಗೊಳಿಸುವ ಅಥವಾ ಅದಕ್ಕೆ ಗೌರವ ನೀಡುವ ವಿಷಯದಲ್ಲಿ ವಿರೋಧ ಪಕ್ಷಗಳು ಮತ್ತು ಪ್ರಾದೇಶಿಕ ಸಂಘಟನೆಗಳ ನಡುವೆ ತೀವ್ರ ವಾಗ್ವಾದ ನಡೆದಿತ್ತು. ಭಾಷಾ ಮತ್ತು ಸಾಂಸ್ಕೃತಿಕ ಹಿತಾಸಕ್ತಿಗಳ ನಡುವೆ ಈ ವಿಷಯವು ರಾಜ್ಯದಲ್ಲಿ ದೊಡ್ಡ ರಾಜಕೀಯ ವಿವಾದವಾಗಿ ರೂಪಾಂತರಗೊಂಡಿತ್ತು.
#WATCH | Tamil Nadu Chief Minister C. Joesph Vijay leaves from Tamil Nadu House, in Delhi. pic.twitter.com/qLIzFmq4ML
— ANI (@ANI) May 27, 2026
ಇದನ್ನೂ ಓದಿ: ಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ಕ್ಯಾತೆ: ಪ್ರಧಾನಿ ಮೋದಿಗೆ ಪತ್ರ ಬರೆದ ವಿಜಯ್
ಹಾಗೇ, ಈ ಭೇಟಿ ವೇಳೆ ತಮಿಳುನಾಡಿಗೆ ಕೇಂದ್ರ ಸರ್ಕಾರದಿಂದ ಬರಬೇಕಾದ ವಿವಿಧ ಯೋಜನೆಗಳ ಅನುದಾನ ಹಾಗೂ ಜಿಎಸ್ಟಿ (GST) ಬಾಕಿ ಹಣವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ವಿಜಯ್ ಪ್ರಧಾನಿಗಳಿಗೆ ಮನವಿ ಮಾಡಿದರು ಎನ್ನಲಾಗಿದೆ. ಹಾಗೇ, ತಮಿಳುನಾಡಿನಲ್ಲಿ ಪ್ರಗತಿಯಲ್ಲಿರುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು, ಮೆಟ್ರೋ ರೈಲು ಯೋಜನೆಗಳ ವಿಸ್ತರಣೆ ಮತ್ತು ಬಂದರುಗಳ ಅಭಿವೃದ್ಧಿಗೆ ಹೆಚ್ಚಿನ ಬೆಂಬಲ ನೀಡುವಂತೆಯೂ ಕೋರಿದ್ದಾರೆ.
Tamil Nadu CM Vijay received a Guard of Honour in Delhi during his maiden official visit to the capital after TVK’s historic election victory
Vijay is set to meet PM Modi, HM Amit Shah and FM Nirmala Sitharaman, with discussions expected around financial assistance,… pic.twitter.com/08smX2RJmh
— Nabila Jamal (@nabilajamal_) May 27, 2026
ಶ್ರೀಲಂಕಾ ನೌಕಾಪಡೆಯಿಂದ ಪದೇ ಪದೇ ಬಂಧನಕ್ಕೊಳಗಾಗುತ್ತಿರುವ ತಮಿಳುನಾಡು ಮೀನುಗಾರರ ರಕ್ಷಣೆ ಮತ್ತು ಅವರ ಹಿತಾಸಕ್ತಿ ಕಾಯುವಂತೆ ಕೇಂದ್ರ ಸರ್ಕಾರಕ್ಕೆ ವಿನಂತಿಸಿಕೊಂಡರು. ತಮಿಳುನಾಡಿನ ಹಿಂದಿನ ಸರ್ಕಾರಗಳು ಕೇಂದ್ರದೊಂದಿಗೆ ಸಂಘರ್ಷದ ಹಾದಿ ತುಳಿದಿದ್ದವು. ಆದರೆ, ವಿಜಯ್ ಅವರು ಆರಂಭದಲ್ಲೇ ಪ್ರಧಾನಿ ಮೋದಿಯವರನ್ನು ಭೇಟಿಯಾಗುವ ಮೂಲಕ ರಾಜ್ಯದ ಅಭಿವೃದ್ಧಿಗಾಗಿ ಕೇಂದ್ರದೊಂದಿಗೆ ಸೌಹಾರ್ದಯುತ ಸಂಬಂಧವನ್ನು ಕಾಯ್ದುಕೊಳ್ಳುವ ಮುನ್ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಚಿತ್ರರಂಗದ ಕಷ್ಟಕ್ಕೆ ಸ್ಪಂದಿಸಿದ ದಳಪತಿ ವಿಜಯ್; ದೊಡ್ಡ ನಿರ್ಧಾರ ತೆಗೆದುಕೊಂಡ ಸಿಎಂ
ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂ ವಿಜಯ್ ಅವರೊಂದಿಗಿನ ಭೇಟಿಯ ಫೋಟೋಗಳನ್ನು ಹಂಚಿಕೊಂಡಿದ್ದು, “ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರೊಂದಿಗೆ ಉತ್ತಮ ಭೇಟಿ ನಡೆಸಲಾಯಿತು. ರಾಜ್ಯದ ಪ್ರಗತಿಗಾಗಿ ಕೇಂದ್ರ ಸರ್ಕಾರ ಸದಾ ಬದ್ಧವಾಗಿದೆ” ಎಂದು ಬರೆದುಕೊಂಡಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ





