AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu Lockdown: ತಮಿಳುನಾಡಿನಲ್ಲಿ ಭಾನುವಾರ ಸಂಪೂರ್ಣ ಲಾಕ್​ಡೌನ್ ಘೋಷಿಸಿದ ಸಿಎಂ ಸ್ಟಾಲಿನ್

ಕೊವಿಡ್-19 ಪ್ರಕರಣಗಳ ಉಲ್ಬಣದ ಮಧ್ಯೆ ತಮಿಳುನಾಡು ಸರ್ಕಾರವು ಭಾನುವಾರ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ವಿಧಿಸಿದೆ. ಲಾಕ್‌ಡೌನ್ ಶನಿವಾರ ರಾತ್ರಿ 10 ಗಂಟೆಗೆ ಪ್ರಾರಂಭವಾಗುತ್ತದೆ. ಸೋಮವಾರ ಬೆಳಿಗ್ಗೆ 5ರವರೆಗೆ ಲಾಕ್​ಡೌನ್ ಜಾರಿಯಲ್ಲಿರುತ್ತದೆ.

Tamil Nadu Lockdown: ತಮಿಳುನಾಡಿನಲ್ಲಿ ಭಾನುವಾರ ಸಂಪೂರ್ಣ ಲಾಕ್​ಡೌನ್ ಘೋಷಿಸಿದ ಸಿಎಂ ಸ್ಟಾಲಿನ್
ಎಂಕೆ ಸ್ಟಾಲಿನ್
TV9 Web
| Updated By: ಸುಷ್ಮಾ ಚಕ್ರೆ|

Updated on: Jan 21, 2022 | 4:55 PM

Share

ಚೆನ್ನೈ: ಕೊವಿಡ್ ಪ್ರಕರಣಗಳು (Covid Cases) ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಈ ಭಾನುವಾರ ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಸ್ಟಾಲಿನ್ (MK Stalin) ತಿಳಿಸಿದ್ದಾರೆ. ಆಟೋಗಳು ಮತ್ತು ಟ್ಯಾಕ್ಸಿಗಳಲ್ಲಿ ವಿಮಾನ ನಿಲ್ದಾಣ, ಬಸ್ ಮತ್ತು ರೈಲು ನಿಲ್ದಾಣಗಳಿಗೆ ಹೋಗಲು ಅನುಮತಿ ನೀಡಲಾಗುವುದು. ಈ ತಿಂಗಳ ಆರಂಭದಲ್ಲಿ ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾವೈರಸ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ತಮಿಳುನಾಡು ಸರ್ಕಾರವು ಜನವರಿ 9ರಿಂದ ಭಾನುವಾರದಂದು ಸಂಪೂರ್ಣ ಲಾಕ್‌ಡೌನ್ ಘೋಷಿಸಿತ್ತು. ತಮಿಳುನಾಡಿನಲ್ಲಿ ಉಳಿದ ಎಲ್ಲಾ ದಿನಗಳಲ್ಲಿ ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ (Night Curfew) ಇರಲಿದೆ.

ಈ ತಿಂಗಳಾಂತ್ಯದೊಳಗೆ 10 ಲಕ್ಷ ಜನರಿಗೆ ‘ಮುನ್ನೆಚ್ಚರಿಕೆ ಬೂಸ್ಟರ್ ಡೋಸ್’ ನೀಡಲು ಆರೋಗ್ಯ ಇಲಾಖೆ ಸಿದ್ಧತೆ ನಡೆಸಿದೆ ಎಂದು ವೈದ್ಯಕೀಯ ಮತ್ತು ಕುಟುಂಬ ಕಲ್ಯಾಣ ಸಚಿವ ಸುಬ್ರಮಣ್ಯನ್ ಹೇಳಿದ್ದಾರೆ. ಕೊವಿಡ್-19 ಪ್ರಕರಣಗಳ ಉಲ್ಬಣದ ಮಧ್ಯೆ ತಮಿಳುನಾಡು ಸರ್ಕಾರವು ಭಾನುವಾರ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ವಿಧಿಸಿದೆ. ಲಾಕ್‌ಡೌನ್ ಶನಿವಾರ ರಾತ್ರಿ 10 ಗಂಟೆಗೆ ಪ್ರಾರಂಭವಾಗುತ್ತದೆ. ಸೋಮವಾರ ಬೆಳಿಗ್ಗೆ 5ರವರೆಗೆ ಲಾಕ್​ಡೌನ್ ಜಾರಿಯಲ್ಲಿರುತ್ತದೆ.

ಭಾನುವಾರ ಹಾಲಿನ ಅಂಗಡಿಗಳು, ಎಟಿಎಂ ಕೇಂದ್ರಗಳು, ಆಸ್ಪತ್ರೆಗಳು, ಆಸ್ಪತ್ರೆಗೆ ಸಂಬಂಧಿಸಿದ ಕೆಲಸಗಳು, ಸರಕು ಸಾಗಣೆ ಮತ್ತು ಪೆಟ್ರೋಲ್ ಬಂಕ್‌ಗಳನ್ನು ಒಳಗೊಂಡಿರುವ ಕಾರ್ಯಾಚರಣೆಯ ಅಗತ್ಯ ಸೇವೆಗಳನ್ನು ಅನುಮತಿಸಲಾಗಿದೆ. ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳು ಬೆಳಿಗ್ಗೆ 7 ರಿಂದ ರಾತ್ರಿ 10ರವರೆಗೆ ಪಾರ್ಸಲ್ ಸೇವೆಗಳನ್ನು ನೀಡಬಹುದು.

ಗುರುವಾರ ತಮಿಳುನಾಡಿನಲ್ಲಿ 28,561 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಈ ಮೂಲಕ ರಾಜ್ಯದ ಸೋಂಕಿತರ ಸಂಖ್ಯೆ 30,42,796ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 19,978 ಜನರು ಡಿಸ್ಚಾರ್ಜ್ ಆಗುವುದರೊಂದಿಗೆ 1,79,205 ಸಕ್ರಿಯ ಸೋಂಕನ್ನು ಬಿಟ್ಟು ಚೇತರಿಸಿಕೊಂಡವರ ಸಂಖ್ಯೆ 28,26,479ಕ್ಕೆ ಏರಿದೆ.

ಇದನ್ನೂ ಓದಿ: Omicron: ಭಾರತದ ಮೆಟ್ರೋ ಸಿಟಿಗಳಲ್ಲಿ ಶೇ. 90ಕ್ಕಿಂತ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಪತ್ತೆ

ಕೊರೊನಾ ಹರಡಿ ಸೂಪರ್ ಸ್ಪ್ರೆಡ್ಡರ್ ಆದರಾ ಶಿಕ್ಷಕಿ; 15 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ