AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಗೌರವದೊಂದಿಗೆ ಅಂಗಾಂಗ ದಾನಿಗಳ ಅಂತ್ಯಕ್ರಿಯೆ; ತಮಿಳುನಾಡು ಸರ್ಕಾರ ಘೋಷಣೆ

ಅಂಗಾಂಗ ದಾನಿಗಳು ಮತ್ತು ಅವರ ಕುಟುಂಬದವರ ತ್ಯಾಗವನ್ನು ಗೌರವಿಸುವ ಸಲುವಾಗಿ ಸರ್ಕಾರವು ಆ ದಾನಿಗಳ ಅಂತ್ಯಕ್ರಿಯೆಗೆ ಸರ್ಕಾರಿ ಗೌರವವನ್ನು ನೀಡಲು ನಿರ್ಧರಿಸಿದೆ ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ.

ಸರ್ಕಾರಿ ಗೌರವದೊಂದಿಗೆ ಅಂಗಾಂಗ ದಾನಿಗಳ ಅಂತ್ಯಕ್ರಿಯೆ; ತಮಿಳುನಾಡು ಸರ್ಕಾರ ಘೋಷಣೆ
ಎಂಕೆ ಸ್ಟಾಲಿನ್Image Credit source: Mint
ಸುಷ್ಮಾ ಚಕ್ರೆ
|

Updated on:Sep 23, 2023 | 3:52 PM

Share

ಚೆನ್ನೈ: ಅಂಗಾಂಗ ದಾನ ಮಾಡುವ ದಾನಿಗಳ ಗೌರವಾರ್ಥವಾಗಿ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಕ್ರಿಯೆ ನಡೆಸುವುದಾಗಿ ತಮಿಳುನಾಡು ಸರ್ಕಾರ ಇಂದು ಘೋಷಿಸಿದೆ. ತಮ್ಮ ಅಂಗಾಂಗಗಳನ್ನು ದಾನ ಮಾಡಿ ಅನೇಕ ಜೀವಗಳನ್ನು ಉಳಿಸಿದವರ ತ್ಯಾಗವನ್ನು ಗೌರವಿಸಲು ಆ ಅಂಗಾಂಗ ದಾನಿಗಳ ಅಂತ್ಯಕ್ರಿಯೆಯನ್ನು ಇನ್ನುಮುಂದೆ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ.

ಅಂಗಾಂಗ ದಾನದ ಮೂಲಕ ನೂರಾರು ರೋಗಿಗಳಿಗೆ ಜೀವ ನೀಡುವಲ್ಲಿ ತಮಿಳುನಾಡು ರಾಜ್ಯ ದೇಶದಲ್ಲೇ ಮುಂಚೂಣಿಯಲ್ಲಿದೆ. ಅಂಗಾಂಗ ದಾನ ಮಾಡಲು ಮುಂದೆ ಬರುವ ಕುಟುಂಬಗಳ ನಿಸ್ವಾರ್ಥ ತ್ಯಾಗದಿಂದ ಈ ಸಾಧನೆ ಸಾಧ್ಯವಾಗಿದೆ. ಮೆದುಳು ಡೆಡ್ ಆದ ಕುಟುಂಬದ ಸದಸ್ಯರ ದುರಂತ ಪರಿಸ್ಥಿತಿಯ ನಡುವೆಯೂ ಅವರು ನೀಡುವ ಅಂಗಗಳಿಂದ ಬೇರೆಯವರು ಮರುಜೀವ ಪಡೆಯುತ್ತಿದ್ದಾರೆ. ಹೀಗಾಗಿ, ಆ ದಾನಿಗಳನ್ನು ಗೌರವಿಸಲು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಸ್ಟಾಲಿನ್ ಹೇಳಿದ್ದಾರೆ.

ಇದನ್ನೂ ಓದಿ: ಹಾಸನ: ಮೆದುಳು ನಿಷ್ಕ್ರಿಯಗೊಂಡು ಸಾವಿನ ಸನಿಹಕ್ಕೆ ಹೋದವನ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

ದುರಂತ ಪರಿಸ್ಥಿತಿಯಲ್ಲಿ ತಮ್ಮ ಆತ್ಮೀಯರ ಅಂಗಾಂಗಗಳನ್ನು ದಾನ ಮಾಡಲು ಮುಂದೆ ಬರುವ ಕುಟುಂಬಗಳ ನಿಸ್ವಾರ್ಥ ತ್ಯಾಗಕ್ಕೆ ಬೆಲೆ ಕಟ್ಟಲಾಗದು. ಅಂಗಾಂಗ ದಾನಿಗಳು ಮತ್ತು ಅವರ ಕುಟುಂಬದವರ ತ್ಯಾಗವನ್ನು ಗೌರವಿಸುವ ಸಲುವಾಗಿ ಸರ್ಕಾರವು ಆ ದಾನಿಗಳ ಅಂತ್ಯಕ್ರಿಯೆಗೆ ಸರ್ಕಾರಿ ಗೌರವವನ್ನು ನೀಡಲು ನಿರ್ಧರಿಸಿದೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:51 pm, Sat, 23 September 23

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!