AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಗೌರವದೊಂದಿಗೆ ಅಂಗಾಂಗ ದಾನಿಗಳ ಅಂತ್ಯಕ್ರಿಯೆ; ತಮಿಳುನಾಡು ಸರ್ಕಾರ ಘೋಷಣೆ

ಅಂಗಾಂಗ ದಾನಿಗಳು ಮತ್ತು ಅವರ ಕುಟುಂಬದವರ ತ್ಯಾಗವನ್ನು ಗೌರವಿಸುವ ಸಲುವಾಗಿ ಸರ್ಕಾರವು ಆ ದಾನಿಗಳ ಅಂತ್ಯಕ್ರಿಯೆಗೆ ಸರ್ಕಾರಿ ಗೌರವವನ್ನು ನೀಡಲು ನಿರ್ಧರಿಸಿದೆ ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ.

ಸರ್ಕಾರಿ ಗೌರವದೊಂದಿಗೆ ಅಂಗಾಂಗ ದಾನಿಗಳ ಅಂತ್ಯಕ್ರಿಯೆ; ತಮಿಳುನಾಡು ಸರ್ಕಾರ ಘೋಷಣೆ
ಎಂಕೆ ಸ್ಟಾಲಿನ್Image Credit source: Mint
ಸುಷ್ಮಾ ಚಕ್ರೆ
|

Updated on:Sep 23, 2023 | 3:52 PM

Share

ಚೆನ್ನೈ: ಅಂಗಾಂಗ ದಾನ ಮಾಡುವ ದಾನಿಗಳ ಗೌರವಾರ್ಥವಾಗಿ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಕ್ರಿಯೆ ನಡೆಸುವುದಾಗಿ ತಮಿಳುನಾಡು ಸರ್ಕಾರ ಇಂದು ಘೋಷಿಸಿದೆ. ತಮ್ಮ ಅಂಗಾಂಗಗಳನ್ನು ದಾನ ಮಾಡಿ ಅನೇಕ ಜೀವಗಳನ್ನು ಉಳಿಸಿದವರ ತ್ಯಾಗವನ್ನು ಗೌರವಿಸಲು ಆ ಅಂಗಾಂಗ ದಾನಿಗಳ ಅಂತ್ಯಕ್ರಿಯೆಯನ್ನು ಇನ್ನುಮುಂದೆ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ.

ಅಂಗಾಂಗ ದಾನದ ಮೂಲಕ ನೂರಾರು ರೋಗಿಗಳಿಗೆ ಜೀವ ನೀಡುವಲ್ಲಿ ತಮಿಳುನಾಡು ರಾಜ್ಯ ದೇಶದಲ್ಲೇ ಮುಂಚೂಣಿಯಲ್ಲಿದೆ. ಅಂಗಾಂಗ ದಾನ ಮಾಡಲು ಮುಂದೆ ಬರುವ ಕುಟುಂಬಗಳ ನಿಸ್ವಾರ್ಥ ತ್ಯಾಗದಿಂದ ಈ ಸಾಧನೆ ಸಾಧ್ಯವಾಗಿದೆ. ಮೆದುಳು ಡೆಡ್ ಆದ ಕುಟುಂಬದ ಸದಸ್ಯರ ದುರಂತ ಪರಿಸ್ಥಿತಿಯ ನಡುವೆಯೂ ಅವರು ನೀಡುವ ಅಂಗಗಳಿಂದ ಬೇರೆಯವರು ಮರುಜೀವ ಪಡೆಯುತ್ತಿದ್ದಾರೆ. ಹೀಗಾಗಿ, ಆ ದಾನಿಗಳನ್ನು ಗೌರವಿಸಲು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಸ್ಟಾಲಿನ್ ಹೇಳಿದ್ದಾರೆ.

ಇದನ್ನೂ ಓದಿ: ಹಾಸನ: ಮೆದುಳು ನಿಷ್ಕ್ರಿಯಗೊಂಡು ಸಾವಿನ ಸನಿಹಕ್ಕೆ ಹೋದವನ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

ದುರಂತ ಪರಿಸ್ಥಿತಿಯಲ್ಲಿ ತಮ್ಮ ಆತ್ಮೀಯರ ಅಂಗಾಂಗಗಳನ್ನು ದಾನ ಮಾಡಲು ಮುಂದೆ ಬರುವ ಕುಟುಂಬಗಳ ನಿಸ್ವಾರ್ಥ ತ್ಯಾಗಕ್ಕೆ ಬೆಲೆ ಕಟ್ಟಲಾಗದು. ಅಂಗಾಂಗ ದಾನಿಗಳು ಮತ್ತು ಅವರ ಕುಟುಂಬದವರ ತ್ಯಾಗವನ್ನು ಗೌರವಿಸುವ ಸಲುವಾಗಿ ಸರ್ಕಾರವು ಆ ದಾನಿಗಳ ಅಂತ್ಯಕ್ರಿಯೆಗೆ ಸರ್ಕಾರಿ ಗೌರವವನ್ನು ನೀಡಲು ನಿರ್ಧರಿಸಿದೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:51 pm, Sat, 23 September 23

Follow Us
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!