AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

130 ಮಾನಹಾನಿ ಪ್ರಕರಣಗಳನ್ನು ರದ್ದುಗೊಳಿಸಿದ ತಮಿಳುನಾಡು ಸಿಎಂ ಸ್ಟಾಲಿನ್

MK Stalin: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೈಗೊಂಡ ಈ ನಿರ್ಧಾರ ಕಾಂಗ್ರೆಸ್​ನ ಹಲವು ನಾಯಕರನ್ನೂ ಸೇರಿಸಿ ಡಿಎಂಕೆ ಪಕ್ಷದ ನಾಯಕರಿಗೆ ಲಾಭ ಸಹಾಯ ಮಾಡಲಿದೆ ಎಂಬ ಅಭಿಪ್ರಾಯ ಕೇಳಿಬಂದಿದೆ. ಜತೆಗೆ ಡಿಎಂಡಿಕೆಯ ವಿಜಯಕಾಂತ್ ಸಹ ಈ ಆದೇಶದ ಫಲಾನುಭವಿಯಾಗಲಿದ್ದಾರೆ.

130 ಮಾನಹಾನಿ ಪ್ರಕರಣಗಳನ್ನು ರದ್ದುಗೊಳಿಸಿದ ತಮಿಳುನಾಡು ಸಿಎಂ ಸ್ಟಾಲಿನ್
ಎಂ.ಕೆ. ಸ್ಟಾಲಿನ್​
TV9 Web
| Updated By: guruganesh bhat|

Updated on:Jul 30, 2021 | 10:40 PM

Share

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ 2012ರಿಂದ 2021ರವರೆಗೆ ಹಲವು ರಾಜಕಾರಣಿಗಳ ವಿರುದ್ಧ ದಾಖಲಿಸಲ್ಪಟ್ಟಿದ್ದ 130 ಮಾನಹಾನಿ ಪ್ರಕರಣಗಳನ್ನು ರದ್ದುಗೊಳಿಸಿ ಆದೇಶಿಸಿದ್ದಾರೆ.¬ ಎಐಎಡಿಎಂಕೆ ಆಡಳಿತದಲ್ಲಿ ಈ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಡಿಎಂಕೆ ನೇತೃತ್ವದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೈಗೊಂಡ ಈ ನಿರ್ಧಾರ ಕಾಂಗ್ರೆಸ್​ನ ಹಲವು ನಾಯಕರನ್ನೂ ಸೇರಿಸಿ ಡಿಎಂಕೆ ಪಕ್ಷದ ನಾಯಕರಿಗೆ ಲಾಭ ಸಹಾಯ ಮಾಡಲಿದೆ ಎಂಬ ಅಭಿಪ್ರಾಯ ಕೇಳಿಬಂದಿದೆ. ಜತೆಗೆ ಡಿಎಂಡಿಕೆಯ ವಿಜಯಕಾಂತ್ ಸಹ ಈ ಆದೇಶದ ಫಲಾನುಭವಿಯಾಗಲಿದ್ದಾರೆ.

ಡಿಎಂಡಿಕೆ ಪಕ್ಷದ ಮುಖ್ಯಸ್ಥ ವಿಜಯಕಾಂತ್, ಮತ್ತು ಅವರ ಪತ್ನಿ ಪ್ರೇಮಲತಾ, ಕಾಂಗ್ರೆಸ್ ಮುಖ್ಯಸ್ಥ ಎಲಂಗೊವನ್, ಡಿಎಂಕೆ ಸಂಸದೆ ಕನಿಮೋಳಿ ಮತ್ತು ದಯಾನಿಧಿ ಮಾರನ್ ಅವರು ಸಹ ಈ ಆದೇಶದ ಫಲಾನುಭವಿಗಳಾಗಿದ್ದಾರೆ. ಜತೆಗೆ ಈ ಮುನ್ನ ರಾಜ್ಯದ ಪತ್ರಕರ್ತರು ಮತ್ತು ವಿವಿಧ ಮಾಧ್ಯಮ ಸಂಸ್ಥೆಗಳ ವಿರುದ್ಧ ದಾಖಲಾಗಿದ್ದ ಮಾನಹಾನಿ ಪ್ರಕರಣಗಳನ್ನೂ ಸಹ ಎಂ.ಕೆ.ಸ್ಟಾಲಿನ್ ಸರ್ಕಾರ ರದ್ದುಗೊಳಿಸಿದೆ. ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಡಿಎಂಕೆ ನೀಡಿದ್ದ ಪ್ರಣಾಳಿಕೆಯಲ್ಲೂ ಡಿಎಂಕೆ ಪಕ್ಷ ಪತ್ರಕರ್ತರ ವಿರುದ್ಧ ದಾಖಲಾಗಿದ್ದ ಮಾನಹಾನಿ ಪ್ರಕರಣಗಳನ್ನು ರದ್ದುಗೊಳಿಸುವುದಾಗಿ ಆಶ್ವಾಸನೆ ನೀಡಿದ್ದರು.

ತಮಿಳುನಾಡಿನಲ್ಲೂ ಹೆಚ್ಚುತ್ತಿದೆ ಕೊವಿಡ್ ಕೊವಿಡ್ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ತಮಿಳುನಾಡು ಸರ್ಕಾರ ಕೊವಿಡ್ ಲಾಕ್​ಡೌನ್​ನ್ನು ಆಗಸ್ಟ್ 9ರವರೆಗೆ ವಿಸ್ತರಿಸಿದೆ. ಈಮುಂಚೆ ವಿಧಿಸಿದ್ದ ಕೊವಿಡ್ ಲಾಕ್​ಡೌನ್ ನಿಯಮಗಳೇ ಅನ್ವಯವಾಗಲಿದ್ದು, ನಿಯಮಾವಳಿಗಳಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕೊವಿಡ್ ಮೂರನೇ ಅಲೆ ಬಂದೆರಗುವ ಸಂಭವ ಇರುವುದರಿಂದ ಕೊವಿಡ್ ತಡೆ ನಿಯಮಗಳನ್ನು ಕಠಿಣವಾಗಿ ಜಾರಿಗೊಳಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸ್ಥಳೀಯ ಆಡಳಿತಗಳಿಗೆ ಸೂಚನೆ ನೀಡಿದ್ದಾರೆ.

ತಮಿಳುನಾಡು ರಾಜ್ಯದಲ್ಲಿ 1,947 ಜನರಿಗೆ ಕೊರೊನಾ ದೃಢಪಟ್ಟಿದ್ದು, ತಮಿಳುನಾಡಿನಲ್ಲಿ ಸೋಂಕಿತರ ಸಂಖ್ಯೆ 25,57,611ಕ್ಕೆ ಏರಿಕೆಯಾಗಿದೆ. 25,57,611 ಸೋಂಕಿತರ ಪೈಕಿ 25,02,627 ಜನರು ಗುಣಮುಖರಾಗಿದ್ದಾರೆ. ತಮಿಳುನಾಡಿನಲ್ಲಿ ಇಂದು 2,193 ಸೋಂಕಿತರು ಗುಣಮುಖರಾಗಿದ್ದಾರೆ. ಇಂದು ಕೊರೊನಾ ಸೋಂಕಿಗೆ 27 ಜನರ ಬಲಿಯಾಗಿದ್ದಾರೆ. ತಮಿಳುನಾಡಿನಲ್ಲಿ ಈವರೆಗೆ ಕೊರೊನಾಗೆ 34,050 ಜನರು ನಿಧನರಾಗಿದ್ದಾರೆ. ಸದ್ಯ 20,934 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಇದನ್ನೂ ಓದಿ:

 International Flights: ಭಾರತದಲ್ಲಿ ಆ. 31ರವರೆಗೂ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ನಿಷೇಧ

ಕೇರಳದಲ್ಲಿ ಕೊವಿಡ್ ಪ್ರಕರಣ ಹೆಚ್ಚಳ; ಪರಿಸ್ಥಿತಿ ಪರಿಶೀಲಿಸಲು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ ಸದಸ್ಯರ ತಂಡ ಕಳುಹಿಸಿದ ಕೇಂದ್ರ ಸರ್ಕಾರ

(Tamil Nadu CM MK Stalin cancels 130 defamation cases )

Published On - 10:32 pm, Fri, 30 July 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ