AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್​ 17ನ್ನು ಸಾಮಾಜಿಕ ನ್ಯಾಯ ದಿನವನ್ನಾಗಿ ಆಚರಿಸಲು ತಮಿಳುನಾಡು ಸಿಎಂ ಸ್ಟಾಲಿನ್​ ನಿರ್ಧಾರ; ಅಣ್ಣಾಮಲೈರಿಂದ ವಿರೋಧ

ಸಿಎಂ ಎಂ.ಕೆ. ಸ್ಟಾಲಿನ್ ನಿರ್ಧಾರದ ಬಗ್ಗೆ ತಮಿಳುನಾಡು ವಿಧಾನಸಭೆಯಲ್ಲಿ ಮಾತನಾಡಿದ್ದ ಬಿಜೆಪಿ ನಾಯಕ ನೈನಾರ್​ ನಾಗೇಂದ್ರನ್ ಸಮ್ಮತ ವ್ಯಕ್ತಪಡಿಸಿದ್ದಾರೆ.

ಸೆಪ್ಟೆಂಬರ್​ 17ನ್ನು ಸಾಮಾಜಿಕ ನ್ಯಾಯ ದಿನವನ್ನಾಗಿ ಆಚರಿಸಲು ತಮಿಳುನಾಡು ಸಿಎಂ ಸ್ಟಾಲಿನ್​ ನಿರ್ಧಾರ; ಅಣ್ಣಾಮಲೈರಿಂದ ವಿರೋಧ
ಎಂ.ಕೆ.ಸ್ಟಾಲಿನ್​ ಮತ್ತು ಕೆ.ಅಣ್ಣಾಮಲೈ
TV9 Web
| Edited By: |

Updated on: Sep 17, 2021 | 1:46 PM

Share

ಚೆನ್ನೈ: ಇಂದು (ಸೆಪ್ಟೆಂಬರ್ 17) ದ್ರಾವಿಡಿಯನ್​ ಚಳವಳಿ ನಾಯಕನಾದ ಪೆರಿಯಾರ್​ ಇ.ವಿ.ರಾಮಸ್ವಾಮಿ ಅವರ ಹುಟ್ಟುಹಬ್ಬದ ನಿಮಿತ್ತ ಸಾಮಾಜಿಕ ನ್ಯಾಯ ದಿನವನ್ನಾಗಿ ಆಚರಿಸಲು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನಿರ್ಧರಿಸಿದ್ದಾರೆ. ಆದರೆ ಈ ನಿರ್ಧಾರ ಇದೀಗ ವಿವಾದಕ್ಕೆ ಕಾರಣವಾಗಿದೆ. ಪೆರಿಯಾರ್​ ಅವರ ಜನ್ಮದಿನವನ್ನು ಸಾಮಾಜಿಕ ನ್ಯಾಯದ ದಿನವನ್ನಾಗಿ ಆಚರಿಸಲು ಒಪ್ಪಿಗೆ ಇದೆ, ಆದರೆ ಡಿಎಂಕೆ ಸರ್ಕಾರ ಉಳಿದ ಸಮಾಜ ಸುಧಾಕರನ್ನು ನಿರ್ಲಕ್ಷಿಸುವುದನ್ನು ಖಂಡಿಸುತ್ತೇವೆ ಎಂದು ಬಿಜೆಪಿ ಹೇಳಿಕೊಂಡಿದೆ.

1879ರ ಸೆಪ್ಟೆಂಬರ್​ 17ರಂದು ಜನಿಸಿದ್ದ ಪೆರಿಯಾರ್ ಇ.ವಿ.ರಾಮಸ್ವಾಮಿಯವರನ್ನು ದ್ರಾವಿಡ ಚಳವಳಿಯ ಜನಕ ಎಂದೇ ಕರೆಯಲಾಗುತ್ತದೆ. ಜಾತಿ, ಲಿಂಗತಾರತಮ್ಯವನ್ನು ಬಲವಾಗಿ ವಿರೋಧಿಸಿದ್ದ ಇವರು, ಅಂಥ ಅಸಮಾನತೆ ವಿರುದ್ಧ ಹಲವು ಚಳವಳಿಗಳನ್ನು ಹಮ್ಮಿಕೊಂಡಿದ್ದವರು. ಹಾಗಾಗಿ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಈ ವರ್ಷದಿಂದ,  ಇನ್ನುಮುಂದೆ ಸೆಪ್ಟೆಂಬರ್​ 17ನ್ನು ಸಾಮಾಜಿಕ ನ್ಯಾಯದ ದಿನವನ್ನಾಗಿ ಆಚರಿಸುವುದಾಗಿ ಎಂ.ಕೆ.ಸ್ಟಾಲಿನ್​ ಹೇಳಿದ್ದಾರೆ. ಅಷ್ಟೇ ಅಲ್ಲ,  ಪೆರಿಯಾರ್​ ಸಿದ್ಧಾಂತವು ಸಾಮಾಜಿಕ ನ್ಯಾಯ, ಆತ್ಮಗೌರವ, ಸಮಾನತೆ, ಭ್ರಾತೃತ್ ಮತ್ತು ವೈಚಾರಿಕತೆಯ ಪ್ರತಿಬಿಂಬವಾಗಿದೆ ಎಂದು ಹೇಳಿದ್ದರು.

ಸ್ಟಾಲಿನ್ ನಿರ್ಧಾರದ ಬಗ್ಗೆ ತಮಿಳುನಾಡು ವಿಧಾನಸಭೆಯಲ್ಲಿ ಮಾತನಾಡಿದ್ದ ಬಿಜೆಪಿ ನಾಯಕ ನೈನಾರ್​ ನಾಗೇಂದ್ರನ್​, ಸಾಮಾಜಿಕ ನ್ಯಾಯ ಎಂಬುದು ಬಿಜೆಪಿಯ ತತ್ವಗಳ ಪರಿಕಲ್ಪನೆಯಾಗಿದೆ. ಹಾಗಾಗಿ ನಮ್ಮ ಪಕ್ಷ ಈ ನಿರ್ಧಾರವನ್ನು ಸ್ವಾಗತಿಸುತ್ತದೆ ಎಂದು ಹೇಳಿದ್ದರು.  ಆದರೆ ಬಿಜೆಪಿ ತಮಿಳುನಾಡು ಮುಖ್ಯಸ್ಥ ಅಣ್ಣಾಮಲೈ ಎಂ.ಕೆ.ಸ್ಟಾಲಿನ್ ನಿರ್ಧಾರವನ್ನು ವಿರೋಧಿಸಿದ್ದಾರೆ. ಡಿಎಂಕೆ ಸರ್ಕಾರ ಉಳಿದ ಸಮಾಜ ಸುಧಾಕರನ್ನು ಕಡೆಗಣಿಸುತ್ತಿದೆ. ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ಮಹಾಕವಿ ಭಾರತಿಯಾರ್​ರಂಥವರಿಗೂ ಸರ್ಕಾರ ಮನ್ನಣೆ ನೀಡಬೇಕು ಎಂದಿದ್ದಾರೆ.

ಇದನ್ನೂ ಓದಿ: Shocking News: ಯುವತಿ ಆರ್ಡರ್ ಮಾಡಿದ ಬರ್ಗರ್​ನಲ್ಲಿ ಸಿಕ್ತು ಮನುಷ್ಯನ ಬೆರಳು; ಬೆಚ್ಚಿಬೀಳಿಸಿದ ಘಟನೆಯ ತನಿಖೆ ಶುರು

ಆಕ್ಸಿಡೆಂಟ್​ ಝೋನ್​ ಆದರೂ ಸಿಲಿಕಾನ್ ಸಿಟಿ ಫ್ಲೈ ಓವರ್ ಮೇಲೆ ಮುಂದುವರಿದಿದೆ ಯುವಕ-ಯುವತಿಯರ ಹುಚ್ಚಾಟ

Follow Us
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!