AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

AIIMS ಯೋಜನೆ ತಡವಾಗುತ್ತಿದೆ; ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಬೇಕು: ಎಮ್ ಕೆ ಸ್ಟಾಲಿನ್

ಏಮ್ಸ್ ಸ್ಥಾಪನೆಯಿಂದ ತಮಿಳುನಾಡಿನ ದಕ್ಷಿಣ ಭಾಗಗಳಿಗೆ ಹಾಗೂ ನೆರೆಯ ರಾಜ್ಯಗಳಿಗೂ ಅನುಕೂಲವಾಗಲಿದೆ. ವೈದ್ಯಕೀಯ ಸೌಲಭ್ಯ ಹೆಚ್ಚಲಿದೆ ಎಂದು ಸ್ಟಾಲಿನ್ ತಿಳಿಸಿದ್ದಾರೆ.

AIIMS ಯೋಜನೆ ತಡವಾಗುತ್ತಿದೆ; ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಬೇಕು: ಎಮ್ ಕೆ ಸ್ಟಾಲಿನ್
ಎಂ.ಕೆ. ಸ್ಟಾಲಿನ್​
TV9 Web
| Edited By: |

Updated on: Jun 05, 2021 | 11:12 PM

Share

ಚೆನ್ನೈ: ಆಲ್ ಇಂಡಿಯಾ ಇನ್​ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈಯನ್ಸಸ್ (ಏಮ್ಸ್- AIIMS) ನ್ನು ಮಧುರೈನಲ್ಲಿ ಸ್ಥಾಪಿಸಲು ತಡವಾಗುತ್ತಿರುವ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಎಮ್.ಕೆ. ಸ್ಟಾಲಿನ್ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಆ ಮೂಲಕ, ಯೋಜನೆ ಸಂಪೂರ್ಣವಾಗುವಲ್ಲಿ ಪ್ರಧಾನಿ ಮಧ್ಯಪ್ರವೇಶಿಸಬೇಕು ಎಂದು ಕೇಳಿದ್ದಾರೆ. ಏಮ್ಸ್ ಸ್ಥಾಪಿಸಲು ಬೇಕಾದ ಕ್ರಮಗಳನ್ನು ಕೂಡಲೇ ಕೈಗೊಳ್ಳಬೇಕು ಎಂದು ಕೇಂದ್ರಕ್ಕೆ ತಿಳಿಸಿದ್ದಾರೆ.

ತಮಿಳುನಾಡು ರಾಜ್ಯ ಸರ್ಕಾರ, ಯೋಜನೆ ಪೂರ್ಣಗೊಳ್ಳಲು ಬೇಕಾದಂತೆ ಎಲ್ಲಾ ರೀತಿಯ ಸಹಕಾರವನ್ನು ನೀಡಲು ಸಿದ್ಧವಿದೆ. ಆದರೆ, ಪ್ರಧಾನಿ ಮೋದಿ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಸೂಕ್ತ ನಿರ್ಣಯ ಕೈಗೊಳ್ಳಬೇಕು ಎಂದು ಸ್ಟಾಲಿನ್ ಹೇಳಿದ್ದಾರೆ. ಏಮ್ಸ್ ಸ್ಥಾಪಿಸಲು ಮಧುರೈನಲ್ಲಿ 2019, ಜನವರಿ 27ರಂದು ಭೂಮಿ ಪೂಜೆ ಮಾಡಲಾಗಿದೆ. ಆ ಸಂದರ್ಭದಲ್ಲಿ ಮರುಮಾತಿಲ್ಲದೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಭೂಮಿ ಹಸ್ತಾಂತರ ಮಾಡಿದೆ ಎಂಬುದನ್ನು ನೆನಪಿಸಿಕೊಂಡಿದ್ದಾರೆ.

ಆದರೆ, ಸದ್ಯ ಕಂಪೌಂಡ್ ವಾಲ್ ಕೆಲಸವೊಂದೇ ಸಂಪೂರ್ಣವಾಗಿದ್ದು, ಉಳಿದಂತೆ ಯಾವುದೇ ಬೆಳವಣಿಗೆ ಯೋಜನೆಯಲ್ಲಿ ಕಂಡುಬಂದಿಲ್ಲ. ಏಮ್ಸ್ ಸ್ಥಾಪನೆಯಿಂದ ತಮಿಳುನಾಡಿನ ದಕ್ಷಿಣ ಭಾಗಗಳಿಗೆ ಹಾಗೂ ನೆರೆಯ ರಾಜ್ಯಗಳಿಗೂ ಅನುಕೂಲವಾಗಲಿದೆ. ವೈದ್ಯಕೀಯ ಸೌಲಭ್ಯ ಹೆಚ್ಚಲಿದೆ ಎಂದು ಸ್ಟಾಲಿನ್ ತಿಳಿಸಿದ್ದಾರೆ.

ಯೋಜನೆಯ ಸಂಬಂಧ ಕೇಂದ್ರ ಕೆಲವು ಸಮಿತಿಯನ್ನು ರಚಿಸಿದೆ ಆದರೆ ಅದಕ್ಕೆ ಯೋಜನೆಯನ್ನು ಕಾರ್ಯರೂಪಕ್ಕೆ ತರುವಲ್ಲಿ ಕೆಲ ಸಮಸ್ಯೆ ಉಂಟಾಗುತ್ತಿದೆ ಎಂದು ಸ್ಟಾಲಿನ್ ವಿವರಿಸಿದ್ದಾರೆ. ಹೀಗಾಗಿ ಕಾರ್ಯದಲ್ಲಿ ಮೋದಿ ಖುದ್ದು ಮಧ್ಯಪ್ರವೇಶ ಮಾಡಬೇಕು. ಯೋಜನೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಸ್ಟಾಲಿನ್ ಪತ್ರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಕೇಂದ್ರದ ಕೃಷಿ ಕಾನೂನು ವಿರುದ್ಧ ನಿರ್ಣಯ ಅಂಗೀಕರಿಸಲಿದೆ ತಮಿಳುನಾಡು: ಸಿಎಂ ಸ್ಟಾಲಿನ್

ಪ್ರಧಾನಿ ಮೋದಿಯವರಿಗೆ ಬೆದರಿಕೆ ಹಾಕಿದ 22 ವರ್ಷದ ಯುವಕನ ಬಂಧನ

(Tamil Nadu CM MK Stalin writes to PM Narendra Modi flags delay in setting up AIIMS)

Follow Us
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ