AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AIIMS ಯೋಜನೆ ತಡವಾಗುತ್ತಿದೆ; ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಬೇಕು: ಎಮ್ ಕೆ ಸ್ಟಾಲಿನ್

ಏಮ್ಸ್ ಸ್ಥಾಪನೆಯಿಂದ ತಮಿಳುನಾಡಿನ ದಕ್ಷಿಣ ಭಾಗಗಳಿಗೆ ಹಾಗೂ ನೆರೆಯ ರಾಜ್ಯಗಳಿಗೂ ಅನುಕೂಲವಾಗಲಿದೆ. ವೈದ್ಯಕೀಯ ಸೌಲಭ್ಯ ಹೆಚ್ಚಲಿದೆ ಎಂದು ಸ್ಟಾಲಿನ್ ತಿಳಿಸಿದ್ದಾರೆ.

AIIMS ಯೋಜನೆ ತಡವಾಗುತ್ತಿದೆ; ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಬೇಕು: ಎಮ್ ಕೆ ಸ್ಟಾಲಿನ್
ಎಂ.ಕೆ. ಸ್ಟಾಲಿನ್​
TV9 Web
| Edited By: |

Updated on: Jun 05, 2021 | 11:12 PM

Share

ಚೆನ್ನೈ: ಆಲ್ ಇಂಡಿಯಾ ಇನ್​ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈಯನ್ಸಸ್ (ಏಮ್ಸ್- AIIMS) ನ್ನು ಮಧುರೈನಲ್ಲಿ ಸ್ಥಾಪಿಸಲು ತಡವಾಗುತ್ತಿರುವ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಎಮ್.ಕೆ. ಸ್ಟಾಲಿನ್ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಆ ಮೂಲಕ, ಯೋಜನೆ ಸಂಪೂರ್ಣವಾಗುವಲ್ಲಿ ಪ್ರಧಾನಿ ಮಧ್ಯಪ್ರವೇಶಿಸಬೇಕು ಎಂದು ಕೇಳಿದ್ದಾರೆ. ಏಮ್ಸ್ ಸ್ಥಾಪಿಸಲು ಬೇಕಾದ ಕ್ರಮಗಳನ್ನು ಕೂಡಲೇ ಕೈಗೊಳ್ಳಬೇಕು ಎಂದು ಕೇಂದ್ರಕ್ಕೆ ತಿಳಿಸಿದ್ದಾರೆ.

ತಮಿಳುನಾಡು ರಾಜ್ಯ ಸರ್ಕಾರ, ಯೋಜನೆ ಪೂರ್ಣಗೊಳ್ಳಲು ಬೇಕಾದಂತೆ ಎಲ್ಲಾ ರೀತಿಯ ಸಹಕಾರವನ್ನು ನೀಡಲು ಸಿದ್ಧವಿದೆ. ಆದರೆ, ಪ್ರಧಾನಿ ಮೋದಿ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಸೂಕ್ತ ನಿರ್ಣಯ ಕೈಗೊಳ್ಳಬೇಕು ಎಂದು ಸ್ಟಾಲಿನ್ ಹೇಳಿದ್ದಾರೆ. ಏಮ್ಸ್ ಸ್ಥಾಪಿಸಲು ಮಧುರೈನಲ್ಲಿ 2019, ಜನವರಿ 27ರಂದು ಭೂಮಿ ಪೂಜೆ ಮಾಡಲಾಗಿದೆ. ಆ ಸಂದರ್ಭದಲ್ಲಿ ಮರುಮಾತಿಲ್ಲದೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಭೂಮಿ ಹಸ್ತಾಂತರ ಮಾಡಿದೆ ಎಂಬುದನ್ನು ನೆನಪಿಸಿಕೊಂಡಿದ್ದಾರೆ.

ಆದರೆ, ಸದ್ಯ ಕಂಪೌಂಡ್ ವಾಲ್ ಕೆಲಸವೊಂದೇ ಸಂಪೂರ್ಣವಾಗಿದ್ದು, ಉಳಿದಂತೆ ಯಾವುದೇ ಬೆಳವಣಿಗೆ ಯೋಜನೆಯಲ್ಲಿ ಕಂಡುಬಂದಿಲ್ಲ. ಏಮ್ಸ್ ಸ್ಥಾಪನೆಯಿಂದ ತಮಿಳುನಾಡಿನ ದಕ್ಷಿಣ ಭಾಗಗಳಿಗೆ ಹಾಗೂ ನೆರೆಯ ರಾಜ್ಯಗಳಿಗೂ ಅನುಕೂಲವಾಗಲಿದೆ. ವೈದ್ಯಕೀಯ ಸೌಲಭ್ಯ ಹೆಚ್ಚಲಿದೆ ಎಂದು ಸ್ಟಾಲಿನ್ ತಿಳಿಸಿದ್ದಾರೆ.

ಯೋಜನೆಯ ಸಂಬಂಧ ಕೇಂದ್ರ ಕೆಲವು ಸಮಿತಿಯನ್ನು ರಚಿಸಿದೆ ಆದರೆ ಅದಕ್ಕೆ ಯೋಜನೆಯನ್ನು ಕಾರ್ಯರೂಪಕ್ಕೆ ತರುವಲ್ಲಿ ಕೆಲ ಸಮಸ್ಯೆ ಉಂಟಾಗುತ್ತಿದೆ ಎಂದು ಸ್ಟಾಲಿನ್ ವಿವರಿಸಿದ್ದಾರೆ. ಹೀಗಾಗಿ ಕಾರ್ಯದಲ್ಲಿ ಮೋದಿ ಖುದ್ದು ಮಧ್ಯಪ್ರವೇಶ ಮಾಡಬೇಕು. ಯೋಜನೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಸ್ಟಾಲಿನ್ ಪತ್ರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಕೇಂದ್ರದ ಕೃಷಿ ಕಾನೂನು ವಿರುದ್ಧ ನಿರ್ಣಯ ಅಂಗೀಕರಿಸಲಿದೆ ತಮಿಳುನಾಡು: ಸಿಎಂ ಸ್ಟಾಲಿನ್

ಪ್ರಧಾನಿ ಮೋದಿಯವರಿಗೆ ಬೆದರಿಕೆ ಹಾಕಿದ 22 ವರ್ಷದ ಯುವಕನ ಬಂಧನ

(Tamil Nadu CM MK Stalin writes to PM Narendra Modi flags delay in setting up AIIMS)

ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್