AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AIIMS ಯೋಜನೆ ತಡವಾಗುತ್ತಿದೆ; ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಬೇಕು: ಎಮ್ ಕೆ ಸ್ಟಾಲಿನ್

ಏಮ್ಸ್ ಸ್ಥಾಪನೆಯಿಂದ ತಮಿಳುನಾಡಿನ ದಕ್ಷಿಣ ಭಾಗಗಳಿಗೆ ಹಾಗೂ ನೆರೆಯ ರಾಜ್ಯಗಳಿಗೂ ಅನುಕೂಲವಾಗಲಿದೆ. ವೈದ್ಯಕೀಯ ಸೌಲಭ್ಯ ಹೆಚ್ಚಲಿದೆ ಎಂದು ಸ್ಟಾಲಿನ್ ತಿಳಿಸಿದ್ದಾರೆ.

AIIMS ಯೋಜನೆ ತಡವಾಗುತ್ತಿದೆ; ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಬೇಕು: ಎಮ್ ಕೆ ಸ್ಟಾಲಿನ್
ಎಂ.ಕೆ. ಸ್ಟಾಲಿನ್​
Follow us
TV9 Web
| Updated By: ganapathi bhat

Updated on: Jun 05, 2021 | 11:12 PM

ಚೆನ್ನೈ: ಆಲ್ ಇಂಡಿಯಾ ಇನ್​ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈಯನ್ಸಸ್ (ಏಮ್ಸ್- AIIMS) ನ್ನು ಮಧುರೈನಲ್ಲಿ ಸ್ಥಾಪಿಸಲು ತಡವಾಗುತ್ತಿರುವ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಎಮ್.ಕೆ. ಸ್ಟಾಲಿನ್ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಆ ಮೂಲಕ, ಯೋಜನೆ ಸಂಪೂರ್ಣವಾಗುವಲ್ಲಿ ಪ್ರಧಾನಿ ಮಧ್ಯಪ್ರವೇಶಿಸಬೇಕು ಎಂದು ಕೇಳಿದ್ದಾರೆ. ಏಮ್ಸ್ ಸ್ಥಾಪಿಸಲು ಬೇಕಾದ ಕ್ರಮಗಳನ್ನು ಕೂಡಲೇ ಕೈಗೊಳ್ಳಬೇಕು ಎಂದು ಕೇಂದ್ರಕ್ಕೆ ತಿಳಿಸಿದ್ದಾರೆ.

ತಮಿಳುನಾಡು ರಾಜ್ಯ ಸರ್ಕಾರ, ಯೋಜನೆ ಪೂರ್ಣಗೊಳ್ಳಲು ಬೇಕಾದಂತೆ ಎಲ್ಲಾ ರೀತಿಯ ಸಹಕಾರವನ್ನು ನೀಡಲು ಸಿದ್ಧವಿದೆ. ಆದರೆ, ಪ್ರಧಾನಿ ಮೋದಿ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಸೂಕ್ತ ನಿರ್ಣಯ ಕೈಗೊಳ್ಳಬೇಕು ಎಂದು ಸ್ಟಾಲಿನ್ ಹೇಳಿದ್ದಾರೆ. ಏಮ್ಸ್ ಸ್ಥಾಪಿಸಲು ಮಧುರೈನಲ್ಲಿ 2019, ಜನವರಿ 27ರಂದು ಭೂಮಿ ಪೂಜೆ ಮಾಡಲಾಗಿದೆ. ಆ ಸಂದರ್ಭದಲ್ಲಿ ಮರುಮಾತಿಲ್ಲದೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಭೂಮಿ ಹಸ್ತಾಂತರ ಮಾಡಿದೆ ಎಂಬುದನ್ನು ನೆನಪಿಸಿಕೊಂಡಿದ್ದಾರೆ.

ಆದರೆ, ಸದ್ಯ ಕಂಪೌಂಡ್ ವಾಲ್ ಕೆಲಸವೊಂದೇ ಸಂಪೂರ್ಣವಾಗಿದ್ದು, ಉಳಿದಂತೆ ಯಾವುದೇ ಬೆಳವಣಿಗೆ ಯೋಜನೆಯಲ್ಲಿ ಕಂಡುಬಂದಿಲ್ಲ. ಏಮ್ಸ್ ಸ್ಥಾಪನೆಯಿಂದ ತಮಿಳುನಾಡಿನ ದಕ್ಷಿಣ ಭಾಗಗಳಿಗೆ ಹಾಗೂ ನೆರೆಯ ರಾಜ್ಯಗಳಿಗೂ ಅನುಕೂಲವಾಗಲಿದೆ. ವೈದ್ಯಕೀಯ ಸೌಲಭ್ಯ ಹೆಚ್ಚಲಿದೆ ಎಂದು ಸ್ಟಾಲಿನ್ ತಿಳಿಸಿದ್ದಾರೆ.

ಯೋಜನೆಯ ಸಂಬಂಧ ಕೇಂದ್ರ ಕೆಲವು ಸಮಿತಿಯನ್ನು ರಚಿಸಿದೆ ಆದರೆ ಅದಕ್ಕೆ ಯೋಜನೆಯನ್ನು ಕಾರ್ಯರೂಪಕ್ಕೆ ತರುವಲ್ಲಿ ಕೆಲ ಸಮಸ್ಯೆ ಉಂಟಾಗುತ್ತಿದೆ ಎಂದು ಸ್ಟಾಲಿನ್ ವಿವರಿಸಿದ್ದಾರೆ. ಹೀಗಾಗಿ ಕಾರ್ಯದಲ್ಲಿ ಮೋದಿ ಖುದ್ದು ಮಧ್ಯಪ್ರವೇಶ ಮಾಡಬೇಕು. ಯೋಜನೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಸ್ಟಾಲಿನ್ ಪತ್ರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಕೇಂದ್ರದ ಕೃಷಿ ಕಾನೂನು ವಿರುದ್ಧ ನಿರ್ಣಯ ಅಂಗೀಕರಿಸಲಿದೆ ತಮಿಳುನಾಡು: ಸಿಎಂ ಸ್ಟಾಲಿನ್

ಪ್ರಧಾನಿ ಮೋದಿಯವರಿಗೆ ಬೆದರಿಕೆ ಹಾಕಿದ 22 ವರ್ಷದ ಯುವಕನ ಬಂಧನ

(Tamil Nadu CM MK Stalin writes to PM Narendra Modi flags delay in setting up AIIMS)

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ