AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಕ್ತ ಪ್ರಮಾಣದ ಆಮ್ಲಜನಕ ಪೂರೈಕೆಗೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಸ್ಟಾಲಿನ್

ಕೊರೊನಾ ಪರಿಸ್ಥಿತಿ ನಿಯಂತ್ರಿಸಲು ಸೂಕ್ತ ಮತ್ತು ಸಂಪೂರ್ಣ ಸಹಕಾರ ನೀಡುವಂತೆ ಸ್ಟಾಲಿನ್ ಮೋದಿಗೆ ಪತ್ರದ ಮೂಲಕ ಕೇಳಿಕೊಂಡಿದ್ದಾರೆ. ಜೊತೆಗೆ, ಕನಿಷ್ಠ 20 ಐಎಸ್ಒ ಕ್ರೈಯೋಜೆನಿಕ್ ಕಂಟೈನರ್​ಗಳನ್ನು ಹಾಗೂ ಆಮ್ಲಜನಕ ಸರಬರಾಜಿಗೆ ರೈಲು ಸಂಪರ್ಕವನ್ನು ಕೂಡ ನೀಡುವಂತೆ ಕೇಳಿಕೊಂಡಿದ್ದಾರೆ.

ಸೂಕ್ತ ಪ್ರಮಾಣದ ಆಮ್ಲಜನಕ ಪೂರೈಕೆಗೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಸ್ಟಾಲಿನ್
ಎಂ.ಕೆ.ಸ್ಟಾಲಿನ್​
TV9 Web
| Updated By: ganapathi bhat|

Updated on:Aug 23, 2021 | 12:45 PM

Share

ಚೆನ್ನೈ: ತಮಿಳುನಾಡಿನಲ್ಲಿ ವೈದ್ಯಕೀಯ ಆಮ್ಲಜನಕ ಕೊರತೆಯ ಬಗ್ಗೆ ಮುಖ್ಯಮಂತ್ರಿ ಎಮ್.ಕೆ. ಸ್ಟಾಲಿನ್ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಗೆ ಮಾಹಿತಿ ನೀಡಿದ್ದಾರೆ. ಈ ಮೂಲಕ ರಾಜ್ಯಕ್ಕೆ ಸರಿಯಾದ ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆಯಾಗುವಂತೆ ನೋಡಿಕೊಳ್ಳಲು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಈ ವಾರ ಸಂಭವಿಸಿದ 13 ಮಂದಿಯ ಸಾವಿಗೆ ಆಮ್ಲಜನಕ ಪೂರೈಕೆಯ ಕೊರತೆಯೇ ಕಾರಣವಾಗಿತ್ತು ಎಂಬುದನ್ನು ಉಲ್ಲೇಖಿಸಿ ಸ್ಟಾಲಿನ್ ಮೋದಿ ಬಳಿ ವಿಚಾರ ಹಂಚಿಕೊಂಡಿದ್ದಾರೆ.

ಆಮ್ಲಜನಕ ಪೂರೈಕೆಯ ಸಮಸ್ಯೆ ಬಿಕ್ಕಟ್ಟಿನದ್ದಾಗಿದೆ ಎಂದು ಸ್ಟಾಲಿನ್, ತಾವು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕದ ತಮ್ಮ ಮೊದಲ ಅಧಿಕೃತ ಮಾತುಕತೆಯಲ್ಲಿ ಹೇಳಿದ್ದಾರೆ. ಕೊರೊನಾ ಸಾಂಕ್ರಾಮಿಕ ತಡೆಗಟ್ಟಲು ಬೇಕಾದ ಕ್ರಮಗಳನ್ನು ರಾಜ್ಯಸರ್ಕಾರ ತೆಗೆದುಕೊಳ್ಳಲಿದೆ. ಅದೇ ವಿಚಾರವಾಗಿ ತುರ್ತು ಅವಶ್ಯವಿರುವ ಆಮ್ಲಜನಕ ಪೂರೈಕೆಯ ಬಗ್ಗೆ ನಿಮ್ಮ ಗಮನ ಸೆಳೆಯಲು ಬಯಸುತ್ತೇನೆ ಎಂದು ಸ್ಟಾಲಿನ್ ಮೋದಿಗೆ ತಿಳಿಸಿದ್ದಾರೆ.

ತಮಿಳುನಾಡು ರಾಜ್ಯದ ಪ್ರತಿನಿತ್ಯದ ವೈದ್ಯಕೀಯ ಆಮ್ಲಜನಕ ಬಳಕೆಯ ಪ್ರಮಾಣ 440 ಮೆಟ್ರಿಕ್ ಟನ್​ಗಳಾಗಿದ್ದು, ಮುಂದಿನ ಎರಡು ವಾರಗಳಲ್ಲಿ ಆಮ್ಲಜನಕದ ಅವಶ್ಯಕತೆಯ ಪ್ರಮಾಣ 840 ಮೆಟ್ರಿಕ್ ಟನ್​ಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಸ್ಟಾಲಿನ್, ಮೋದಿಗೆ ಬರೆದ ಪತ್ರದಲ್ಲಿ ವಿವರಿಸಿದ್ದಾರೆ. ಆದರೆ, ಕೇಂದ್ರದ ಆಕ್ಸಿಜನ್ ಪ್ಲಾನ್ ಪ್ರಕಾರ, ತಮಿಳುನಾಡಿನ ಆಮ್ಲಜನಕ ಪೂರೈಕೆ ಪ್ರಮಾಣ 220 ಮೆಟ್ರಿಕ್ ಟನ್ ಆಗಿದೆ. ಈ ಮೊದಲು, ಅಂದರೆ ಮೇ 1 ಮತ್ತು 2ರಂದು ರಾಜ್ಯ ಉನ್ನತ ಅಧಿಕಾರಿಗಳು, ಕೈಗಾರಿಕೆ ಹಾಗೂ ಆಂತರಿಕ ವ್ಯಾಪಾರ ಅಭಿವೃದ್ಧಿ ವಿಭಾಗ (DPIIT) ಜೊತೆಗೆ ನಡೆಸಿದ ಸಭೆಯಂತೆ ಕನಿಷ್ಠ 476 ಮೆಟ್ರಿಕ್ ಟನ್ ಆಮ್ಲಜನಕ ಬೇಕಾಗಿದೆ.

ಕೊರೊನಾ ಪರಿಸ್ಥಿತಿ ನಿಯಂತ್ರಿಸಲು ಸೂಕ್ತ ಮತ್ತು ಸಂಪೂರ್ಣ ಸಹಕಾರ ನೀಡುವಂತೆ ಸ್ಟಾಲಿನ್ ಮೋದಿಗೆ ಪತ್ರದ ಮೂಲಕ ಕೇಳಿಕೊಂಡಿದ್ದಾರೆ. ಜೊತೆಗೆ, ಕನಿಷ್ಠ 20 ಐಎಸ್ಒ ಕ್ರೈಯೋಜೆನಿಕ್ ಕಂಟೈನರ್​ಗಳನ್ನು ಹಾಗೂ ಆಮ್ಲಜನಕ ಸರಬರಾಜಿಗೆ ರೈಲು ಸಂಪರ್ಕವನ್ನು ಕೂಡ ನೀಡುವಂತೆ ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: ಕೊವಿಡ್‌ ಸೋಂಕಿತರಿಗೆ ಆಕ್ಸಿಜನ್‌ ಹಾಗೂ ಬೆಡ್‌ ಕೊರತೆ ನೀಗಿಸಲು ಉಪಮುಖ್ಯಮಂತ್ರಿ ಪರಿಹಾರ ಸೂತ್ರ; ವಿವರಗಳನ್ನು ಓದಿ

ಆಮ್ಲಜನಕ ಸಾಂದ್ರಕಗಳಿಗೆಂದು ಬೈಕ್ ಮಾರಿದ ನಟ!

(Tamil Nadu CM Stalin writes letter on Severe Oxygen Crisis to PM Narendra Modi)

Published On - 11:11 pm, Fri, 7 May 21

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!