AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ವಿಜಯ್ ನೇತೃತ್ವದ ಟಿವಿಕೆ ಮೈತ್ರಿಕೂಟಕ್ಕೆ ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿ ಎಂಬ ಹೆಸರು

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ನಟ ವಿಜಯ್ ಅವರ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಮತ್ತು ಕಾಂಗ್ರೆಸ್ ಸೇರಿ ಇನ್ನಿತರೆ ಪಕ್ಷಗಳ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿ' ಎಂದು ನಾಮಕರಣ ಮಾಡಲಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಮೈತ್ರಿಕೂಟವು ರೂಪುಗೊಂಡಿದ್ದು, ರಾಜ್ಯದ ಪ್ರಮುಖ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಲು ಸಜ್ಜಾಗಿದೆ.

ತಮಿಳುನಾಡು ವಿಜಯ್ ನೇತೃತ್ವದ ಟಿವಿಕೆ ಮೈತ್ರಿಕೂಟಕ್ಕೆ ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿ ಎಂಬ ಹೆಸರು
ವಿಜಯ್ ನೇತೃತ್ವದ ಟಿವಿಕೆ ಮೈತ್ರಿImage Credit source: PTI
ಸುಷ್ಮಾ ಚಕ್ರೆ
|

Updated on: Sep 09, 2026 | 9:31 PM

Share

ಚೆನ್ನೈ, ಸೆಪ್ಟೆಂಬರ್ 9: ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ), ಕಾಂಗ್ರೆಸ್, ಐಯುಎಂಎಲ್, ವಿಸಿಕೆ ಮತ್ತು ಎಂಡಿಎಂಕೆ ಪಕ್ಷಗಳನ್ನೊಳಗೊಂಡ ಆಡಳಿತಾರೂಢ ಮೈತ್ರಿಕೂಟಕ್ಕೆ ‘ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿ’ (SSJVA) ಎಂದು ಅಧಿಕೃತವಾಗಿ ಹೆಸರಿಡಲಾಗಿದೆ. ಇಂದು ಚೆನ್ನೈನ ಪನೈಯೂರ್‌ನಲ್ಲಿರುವ ‘ಟಿವಿಕೆ’ ಪ್ರಧಾನ ಕಚೇರಿಯಲ್ಲಿ ನಡೆದ ಮೈತ್ರಿಕೂಟದ ನಾಯಕರ ಮಹತ್ವದ ಸಭೆಯಲ್ಲಿ ಈ ಹೆಸರನ್ನು ಅಂತಿಮಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಯಿತು.

ಈ ಹೊಸ ಮೈತ್ರಿಕೂಟವು ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಪ್ರಮುಖ ಸ್ಪರ್ಧಿಯಾಗಿ ಕಣಕ್ಕಿಳಿಯಲಿದ್ದು, ಸೀಟು ಹಂಚಿಕೆ ಮತ್ತು ಜಂಟಿ ಪ್ರಚಾರ ತಂತ್ರಗಳ ಕುರಿತು ಎರಡೂ ಪಕ್ಷಗಳ ಹಿರಿಯ ನಾಯಕರು ಶೀಘ್ರವೇ ಅಧಿಕೃತ ಘೋಷಣೆ ಮಾಡಲಿದ್ದಾರೆ.

ಇದನ್ನೂ ಓದಿ: ತಮಿಳುನಾಡಿನ 50ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ಮೊಬೈಲ್ ನಿಷೇಧ; ವಿಜಯ್ ಸರ್ಕಾರದಿಂದ ಹೊಸ ನಿಯಮ

ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಮಾಣಿಕ್ಕಂ ಟ್ಯಾಗೋರ್, ತಾರಾಗೈ ಕ್ಯಾಥ್‌ಬರ್ಟ್ ಮತ್ತು ಪ್ರವೀಣ್ ಚಕ್ರವರ್ತಿ, ವಿಸಿಕೆ ಪಕ್ಷದ ಮುಖ್ಯಸ್ಥ ತೋಲ್ ತಿರುಮಾವಳವನ್, ವನ್ನಿ ಅರಸು, ರವಿ ಕುಮಾರ್ ಮತ್ತು ಸಿಂಧನೈ ಸೆಲ್ವನ್, ಎಂಡಿಎಂಕೆ ಪಕ್ಷದ ವೈಕೋ ಹಾಗೂ ದುರೈ ವೈಕೋ, ಐಯುಎಂಎಲ್ ಪಕ್ಷದ ಕೆ. ಎಂ. ಖಾದರ್ ಮೊಹಿದ್ದೀನ್ ಮತ್ತು ಶಹಜಹಾನ್ ಭಾಗವಹಿಸಿದ್ದರು.

ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯದ ಸಿದ್ಧಾಂತವನ್ನು ಎತ್ತಿಹಿಡಿಯುವ ಪ್ರಮುಖ ಪಕ್ಷಗಳನ್ನು ಈ ಮೈತ್ರಿಕೂಟವು ಒಂದೇ ವೇದಿಕೆಗೆ ತಂದಿದ್ದು, ತಮಿಳುನಾಡು ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಿದೆ. ಸಿಪಿಐಎಂ ಮತ್ತು ಸಿಪಿಐ ಪಕ್ಷಗಳ ಪ್ರತಿನಿಧಿಗಳು ಈ ಸಭೆಗೆ ಗೈರುಹಾಜರಾಗಿದ್ದು ವಿಶೇಷವಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್