AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಮಾಣವಚನದ ವೇಳೆ ರಾಹುಲ್ ಗಾಂಧಿ ಹೆಸರು ಹೇಳಿ ವಿವಾದಕ್ಕೀಡಾದ ತಮಿಳುನಾಡು ಕಾಂಗ್ರೆಸ್ ಶಾಸಕ

ಇಂದು ಚೆನ್ನೈನ ಗಿಂಡಿಯಲ್ಲಿರುವ ರಾಜ್ಯಪಾಲರ ಭವನದಲ್ಲಿ ತಮಿಳುನಾಡು ಸಚಿವ ಸಂಪುಟ ವಿಸ್ತರಣೆ ನಡೆಯಿತು. ಟಿಎಂಕೆ ಮುಖ್ಯಸ್ಥ ಹಾಗೂ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಅವರ ಸಂಪುಟಕ್ಕೆ ಇಂದು ಟಿವಿಕೆ ಮತ್ತು ಕಾಂಗ್ರೆಸ್ ಪಕ್ಷದ 23 ಸಚಿವರು ಹೊಸದಾಗಿ ಸೇರ್ಪಡೆಯಾದರು. ಈ ಮೂಲಕ ತಮಿಳುನಾಡು ಸಚಿವ ಸಂಪುಟದಲ್ಲಿ ಒಟ್ಟು 33 ಸಚಿವರು ಸೇರಿದಂತಾಗಿದೆ. ಈ ವೇಳೆ ತಮಿಳುನಾಡು ಕಾಂಗ್ರೆಸ್ ಶಾಸಕರೊಬ್ಬರು ಪ್ರಮಾಣವಚನ ಸ್ವೀಕರಿಸುವ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಸರನ್ನು ಪ್ರಸ್ತಾಪಿಸಿದ್ದಕ್ಕೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆಯಿತು.

ಪ್ರಮಾಣವಚನದ ವೇಳೆ ರಾಹುಲ್ ಗಾಂಧಿ ಹೆಸರು ಹೇಳಿ ವಿವಾದಕ್ಕೀಡಾದ ತಮಿಳುನಾಡು ಕಾಂಗ್ರೆಸ್ ಶಾಸಕ
Rajesh KumarImage Credit source: x
ಸುಷ್ಮಾ ಚಕ್ರೆ
|

Updated on: May 21, 2026 | 3:53 PM

Share

ಚೆನ್ನೈ, ಮೇ 21: ಇಂದು ತಮಿಳುನಾಡಿನಲ್ಲಿ ಸಚಿವ ಸಂಪುಟ (Tamil Nadu Cabinet) ವಿಸ್ತರಣೆ ನಡೆಯಿತು. ಇದರಲ್ಲಿ ತಮಿಳುನಾಡು ವಿಕ್ಟರಿ ಪಕ್ಷದ ಶಾಸಕರು ಮತ್ತು ಕಾಂಗ್ರೆಸ್ ಶಾಸಕರು ಸೇರಿದಂತೆ ಸುಮಾರು 23 ಶಾಸಕರು ಸಚಿವರಾಗಿ ಅಧಿಕಾರ ವಹಿಸಿಕೊಂಡರು. ಈ ಮೂಲಕ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅಧಿಕಾರ ವಹಿಸಿಕೊಂಡಾಗ ಸಚಿವರಾಗಿ ಅಧಿಕಾರ ವಹಿಸಿಕೊಂಡವರು ಸೇರಿದಂತೆ ಒಟ್ಟು 33 ಸಚಿವರು ತಮಿಳುನಾಡು ವಿಕ್ಟರಿ ಪಕ್ಷದ ಮೈತ್ರಿಕೂಟದಲ್ಲಿ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇದರ ನಡುವೆ, ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕಾಂಗ್ರೆಸ್ ಶಾಸಕರೊಬ್ಬರು ರಾಹುಲ್ ಗಾಂಧಿಯ ಹೆಸರನ್ನು ಪ್ರಸ್ತಾಪಿಸಿದ್ದಕ್ಕೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆಯಿತು. ಆ ಬಗ್ಗೆ ಮಾಹಿತಿ ಇಲ್ಲಿದೆ.

ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಶಾಸಕರೊಬ್ಬರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇತ್ತೀಚೆಗೆ ರಾಜಭವನದಲ್ಲಿ ನಡೆದಿತ್ತು. ಈ ವೇಳೆ ಕಾಂಗ್ರೆಸ್ ಶಾಸಕರು ಸಂವಿಧಾನಬದ್ಧವಾಗಿ ನಿಗದಿಪಡಿಸಿದ ಪ್ರಮಾಣ ವಚನದ ಪಠ್ಯವನ್ನು ಓದುವಾಗ, ಮಧ್ಯದಲ್ಲಿ ತಮ್ಮ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ ಹೆಸರನ್ನು ಸೇರಿಸಿ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೆ ತಮಿಳುನಾಡು ರಾಜ್ಯಪಾಲರು ತಕ್ಷಣವೇ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಇದನ್ನೂ ಓದಿ: Tamil Nadu Cabinet Expansion: ತಮಿಳುನಾಡು ಸರ್ಕಾರದ ಸಂಪುಟ ವಿಸ್ತರಣೆ, ವಿಜಯ್ ಸಂಪುಟ ಸೇರಿದ 23 ಶಾಸಕರು, ಕಾಂಗ್ರೆಸ್ ಶಾಸಕರಿಗೂ ಸಚಿವ ಸ್ಥಾನ

ಸಚಿವರಾಗಿ ಪ್ರಮಾಣವಚನದ ಪಠ್ಯವನ್ನು ಓದುತ್ತಿದ್ದಾಗ ಕಾಂಗ್ರೆಸ್ ಶಾಸಕ ರಾಜೇಶ್ ಕುಮಾರ್ ಅವರು ತಮ್ಮ ಪ್ರಮಾಣವಚನವನ್ನು ಪೂರ್ಣಗೊಳಿಸುತ್ತಿದ್ದಂತೆ ಇದ್ದಕ್ಕಿದ್ದಂತೆ ಕಾಂಗ್ರೆಸ್ ನಾಯಕರಾದ ಕಾಮರಾಜ್, ರಾಜೀವ್ ಗಾಂಧಿ ಮತ್ತು ರಾಹುಲ್ ಗಾಂಧಿಯವರನ್ನು ಶ್ಲಾಘಿಸಿದರು. ತಕ್ಷಣ ಪ್ರತಿಕ್ರಿಯಿಸಿದ ರಾಜ್ಯಪಾಲರು, “ಅದು ನಿಮ್ಮ ಪ್ರಮಾಣವಚನದ ಭಾಗವಲ್ಲ” ಎಂದರು. ಅದಕ್ಕೆ ಶಾಸಕ ರಾಜೇಶ್ ಕುಮಾರ್ ಮುಗುಳ್ನಕ್ಕು ತಮ್ಮ ಪ್ರಮಾಣವಚನದ ದಾಖಲೆಗೆ ಸಹಿ ಹಾಕಲು ಹೋದರು.

ಸಂವಿಧಾನದ ನಿಯಮಗಳ ಪ್ರಕಾರ, ಯಾವುದೇ ಶಾಸಕ ಅಥವಾ ಸಂಸದರು ಪ್ರಮಾಣ ವಚನ ಸ್ವೀಕರಿಸುವಾಗ ಸಂವಿಧಾನದಲ್ಲಿ ನಿಗದಿಪಡಿಸಿದ ಅಧಿಕೃತ ಪಠ್ಯವನ್ನು ಮಾತ್ರ ಓದಬೇಕು. ಅದರಲ್ಲಿ ಯಾವುದೇ ವ್ಯಕ್ತಿ ಅಥವಾ ರಾಜಕೀಯ ನಾಯಕರ ಹೆಸರನ್ನು ಸೇರಿಸುವಂತಿಲ್ಲ. ಹೀಗಾಗಿ, ರಾಜ್ಯಪಾಲರು ರಾಜೇಶ್ ಕುಮಾರ್ ಅವರಿಗೆ ಆಕ್ಷೇಪ ವ್ಯಕ್ತಪಡಿಸಿದರು. ಈ ಘಟನೆಯು ತಮಿಳುನಾಡು ರಾಜಕೀಯದಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ದೊಡ್ಡ ಚರ್ಚೆಗೆ ಕಾರಣವಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More