AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ.ನಾಡು ಪೊಲೀಸರಿಗೆ ಏನಾಗಿದೆ? ಪೋಷಕರ ಎದುರೇ ಬಾಲಕನ ಥಳಿಸಿದ ಹಿರಿಯ ಅಧಿಕಾರಿ, ಬಿತ್ತು ಕೇಸು

ಚೆನ್ನೈ: ಇತ್ತೀಚೆಗೆ ಕಸ್ಟೋಡಿಯಲ್​ ಡೆತ್​ ಕೇಸ್​ನಿಂದ ಪೀಕಲಾಟಕ್ಕೆ ಇಟ್ಟುಕೊಂಡಿರುವ ತಮಿಳುನಾಡು ಪೊಲೀಸ್​ ಮಂದಿ ಇದೀಗ ಮತ್ತೊಂದು ಕೇಸ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ತಾಜಾ ಪ್ರಕರಣದಲ್ಲಿ ಅಮಾಯಕ ಪೋಷಕರ ಎದುರೇ ಅದೂ ನಡು ರಸ್ತೆಯಲ್ಲಿ ಮೊದಲು ಬಾಲಕನನ್ನು, ಬಳಿಕ ಆತನ ಜೊತೆಗಿದ್ದ ಪೋಷಕರನ್ನೂ ಗುಂಪುಗೂಡಿಕೊಂಡು ಥಳಿಸಿದ್ದಾರೆ. ಇದರ ವಿರುದ್ಧ ಸ್ವಯಂ ದೂರು ದಾಖಲಿಸಿಕೊಂಡಿರುವ ಮಾನವ ಹಕ್ಕು ಆಯೋಗ, ಆ ಪೊಲೀಸರ ವಿರುದ್ಧ ಕೇಸು ದಾಖಲಿಸಿಕೊಂಡು ತನಿಖೆ ಆದೇಶಿಸಿದೆ. ಕೊಯಮತ್ತೂರಿನ ರಥಿನಾಪುರಿಯಲ್ಲಿ ಜೂನ್ 17ರಂದು ಬಾಲಕನ ಮೇಲೆ ಹಲ್ಲೆ ನಡೆದಿದೆ. ರಾತ್ರಿ ಸುಮಾರು […]

ತ.ನಾಡು ಪೊಲೀಸರಿಗೆ ಏನಾಗಿದೆ? ಪೋಷಕರ ಎದುರೇ ಬಾಲಕನ ಥಳಿಸಿದ ಹಿರಿಯ ಅಧಿಕಾರಿ, ಬಿತ್ತು ಕೇಸು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 30, 2020 | 6:15 PM

Share

ಚೆನ್ನೈ: ಇತ್ತೀಚೆಗೆ ಕಸ್ಟೋಡಿಯಲ್​ ಡೆತ್​ ಕೇಸ್​ನಿಂದ ಪೀಕಲಾಟಕ್ಕೆ ಇಟ್ಟುಕೊಂಡಿರುವ ತಮಿಳುನಾಡು ಪೊಲೀಸ್​ ಮಂದಿ ಇದೀಗ ಮತ್ತೊಂದು ಕೇಸ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ತಾಜಾ ಪ್ರಕರಣದಲ್ಲಿ ಅಮಾಯಕ ಪೋಷಕರ ಎದುರೇ ಅದೂ ನಡು ರಸ್ತೆಯಲ್ಲಿ ಮೊದಲು ಬಾಲಕನನ್ನು, ಬಳಿಕ ಆತನ ಜೊತೆಗಿದ್ದ ಪೋಷಕರನ್ನೂ ಗುಂಪುಗೂಡಿಕೊಂಡು ಥಳಿಸಿದ್ದಾರೆ. ಇದರ ವಿರುದ್ಧ ಸ್ವಯಂ ದೂರು ದಾಖಲಿಸಿಕೊಂಡಿರುವ ಮಾನವ ಹಕ್ಕು ಆಯೋಗ, ಆ ಪೊಲೀಸರ ವಿರುದ್ಧ ಕೇಸು ದಾಖಲಿಸಿಕೊಂಡು ತನಿಖೆ ಆದೇಶಿಸಿದೆ.

ಕೊಯಮತ್ತೂರಿನ ರಥಿನಾಪುರಿಯಲ್ಲಿ ಜೂನ್ 17ರಂದು ಬಾಲಕನ ಮೇಲೆ ಹಲ್ಲೆ ನಡೆದಿದೆ. ರಾತ್ರಿ ಸುಮಾರು 9 ಗಂಟೆ ವೇಳೆಗೆ ಸಬ್​ಇನ್ಸ್​ಪೆಕ್ಟರ್ ಚೆಲ್ಲಮಣಿ ಮತ್ತು ಇಬ್ಬರು ಕಾನ್​ಸ್ಟೇಬಲ್​ಗಳು ಸಿಟಿ ರೌಂಡ್ಸ್​ ಬಂದಿದ್ದಾರೆ. ಈ ವೇಳೆ ಟಿಫನ್ ಸೆಂಟರ್​​ ಓಪನ್​ ಆಗಿರುವುದನ್ನು ಪೊಲೀಸರು ಪ್ರಶ್ನಿಸಿದ್ದಾರೆ. ಅಂಗಡಿಯನ್ನು ಮುಚ್ಚಲು ಸ್ವಲ್ಪ ಸಮಯ ಕೊಡಿ ಎಂದು ಪೋಷಕರು ತಿಳಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಪೊಲೀಸರು ಗುಂಪು ಸೇರಿಕೊಂಡು ಬಾಲಕ ಮತ್ತು ಪೋಷಕರ ಮೇಲೆ ಥಳಿಸಿದ್ದಾರೆ.

ಬಳಿಕ ಪೊಲೀಸ್ ವಾಹನದಲ್ಲಿ ಹುಡುಗ ಮತ್ತು ಆತನ ತಂದೆಯನ್ನು ಪೊಲೀಸರು ಕರೆದೊಯ್ದಿದ್ದಾರೆ. ಇದರ ವಿರುದ್ಧ ಮಾನವ ಹಕ್ಕು ಆಯೋಗ ಸ್ವಯಂ ದೂರು ದಾಖಲಿಸಿಕೊಂಡಿದೆ. ಹಾಗೂ ಪೊಲೀಸರ ವಿರುದ್ಧ ಕೇಸು ದಾಖಲಿಸಿ, ತನಿಖೆ ಆದೇಶಿಸಿದೆ.

Published On - 6:12 pm, Tue, 30 June 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್