AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ.ನಾಡು ಪೊಲೀಸರಿಗೆ ಏನಾಗಿದೆ? ಪೋಷಕರ ಎದುರೇ ಬಾಲಕನ ಥಳಿಸಿದ ಹಿರಿಯ ಅಧಿಕಾರಿ, ಬಿತ್ತು ಕೇಸು

ಚೆನ್ನೈ: ಇತ್ತೀಚೆಗೆ ಕಸ್ಟೋಡಿಯಲ್​ ಡೆತ್​ ಕೇಸ್​ನಿಂದ ಪೀಕಲಾಟಕ್ಕೆ ಇಟ್ಟುಕೊಂಡಿರುವ ತಮಿಳುನಾಡು ಪೊಲೀಸ್​ ಮಂದಿ ಇದೀಗ ಮತ್ತೊಂದು ಕೇಸ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ತಾಜಾ ಪ್ರಕರಣದಲ್ಲಿ ಅಮಾಯಕ ಪೋಷಕರ ಎದುರೇ ಅದೂ ನಡು ರಸ್ತೆಯಲ್ಲಿ ಮೊದಲು ಬಾಲಕನನ್ನು, ಬಳಿಕ ಆತನ ಜೊತೆಗಿದ್ದ ಪೋಷಕರನ್ನೂ ಗುಂಪುಗೂಡಿಕೊಂಡು ಥಳಿಸಿದ್ದಾರೆ. ಇದರ ವಿರುದ್ಧ ಸ್ವಯಂ ದೂರು ದಾಖಲಿಸಿಕೊಂಡಿರುವ ಮಾನವ ಹಕ್ಕು ಆಯೋಗ, ಆ ಪೊಲೀಸರ ವಿರುದ್ಧ ಕೇಸು ದಾಖಲಿಸಿಕೊಂಡು ತನಿಖೆ ಆದೇಶಿಸಿದೆ. ಕೊಯಮತ್ತೂರಿನ ರಥಿನಾಪುರಿಯಲ್ಲಿ ಜೂನ್ 17ರಂದು ಬಾಲಕನ ಮೇಲೆ ಹಲ್ಲೆ ನಡೆದಿದೆ. ರಾತ್ರಿ ಸುಮಾರು […]

ತ.ನಾಡು ಪೊಲೀಸರಿಗೆ ಏನಾಗಿದೆ? ಪೋಷಕರ ಎದುರೇ ಬಾಲಕನ ಥಳಿಸಿದ ಹಿರಿಯ ಅಧಿಕಾರಿ, ಬಿತ್ತು ಕೇಸು
ಸಾಧು ಶ್ರೀನಾಥ್​
|

Updated on:Jun 30, 2020 | 6:15 PM

Share

ಚೆನ್ನೈ: ಇತ್ತೀಚೆಗೆ ಕಸ್ಟೋಡಿಯಲ್​ ಡೆತ್​ ಕೇಸ್​ನಿಂದ ಪೀಕಲಾಟಕ್ಕೆ ಇಟ್ಟುಕೊಂಡಿರುವ ತಮಿಳುನಾಡು ಪೊಲೀಸ್​ ಮಂದಿ ಇದೀಗ ಮತ್ತೊಂದು ಕೇಸ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ತಾಜಾ ಪ್ರಕರಣದಲ್ಲಿ ಅಮಾಯಕ ಪೋಷಕರ ಎದುರೇ ಅದೂ ನಡು ರಸ್ತೆಯಲ್ಲಿ ಮೊದಲು ಬಾಲಕನನ್ನು, ಬಳಿಕ ಆತನ ಜೊತೆಗಿದ್ದ ಪೋಷಕರನ್ನೂ ಗುಂಪುಗೂಡಿಕೊಂಡು ಥಳಿಸಿದ್ದಾರೆ. ಇದರ ವಿರುದ್ಧ ಸ್ವಯಂ ದೂರು ದಾಖಲಿಸಿಕೊಂಡಿರುವ ಮಾನವ ಹಕ್ಕು ಆಯೋಗ, ಆ ಪೊಲೀಸರ ವಿರುದ್ಧ ಕೇಸು ದಾಖಲಿಸಿಕೊಂಡು ತನಿಖೆ ಆದೇಶಿಸಿದೆ.

ಕೊಯಮತ್ತೂರಿನ ರಥಿನಾಪುರಿಯಲ್ಲಿ ಜೂನ್ 17ರಂದು ಬಾಲಕನ ಮೇಲೆ ಹಲ್ಲೆ ನಡೆದಿದೆ. ರಾತ್ರಿ ಸುಮಾರು 9 ಗಂಟೆ ವೇಳೆಗೆ ಸಬ್​ಇನ್ಸ್​ಪೆಕ್ಟರ್ ಚೆಲ್ಲಮಣಿ ಮತ್ತು ಇಬ್ಬರು ಕಾನ್​ಸ್ಟೇಬಲ್​ಗಳು ಸಿಟಿ ರೌಂಡ್ಸ್​ ಬಂದಿದ್ದಾರೆ. ಈ ವೇಳೆ ಟಿಫನ್ ಸೆಂಟರ್​​ ಓಪನ್​ ಆಗಿರುವುದನ್ನು ಪೊಲೀಸರು ಪ್ರಶ್ನಿಸಿದ್ದಾರೆ. ಅಂಗಡಿಯನ್ನು ಮುಚ್ಚಲು ಸ್ವಲ್ಪ ಸಮಯ ಕೊಡಿ ಎಂದು ಪೋಷಕರು ತಿಳಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಪೊಲೀಸರು ಗುಂಪು ಸೇರಿಕೊಂಡು ಬಾಲಕ ಮತ್ತು ಪೋಷಕರ ಮೇಲೆ ಥಳಿಸಿದ್ದಾರೆ.

ಬಳಿಕ ಪೊಲೀಸ್ ವಾಹನದಲ್ಲಿ ಹುಡುಗ ಮತ್ತು ಆತನ ತಂದೆಯನ್ನು ಪೊಲೀಸರು ಕರೆದೊಯ್ದಿದ್ದಾರೆ. ಇದರ ವಿರುದ್ಧ ಮಾನವ ಹಕ್ಕು ಆಯೋಗ ಸ್ವಯಂ ದೂರು ದಾಖಲಿಸಿಕೊಂಡಿದೆ. ಹಾಗೂ ಪೊಲೀಸರ ವಿರುದ್ಧ ಕೇಸು ದಾಖಲಿಸಿ, ತನಿಖೆ ಆದೇಶಿಸಿದೆ.

Published On - 6:12 pm, Tue, 30 June 20

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?