AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ.ನಾಡು ಪೊಲೀಸರಿಗೆ ಏನಾಗಿದೆ? ಪೋಷಕರ ಎದುರೇ ಬಾಲಕನ ಥಳಿಸಿದ ಹಿರಿಯ ಅಧಿಕಾರಿ, ಬಿತ್ತು ಕೇಸು

ಚೆನ್ನೈ: ಇತ್ತೀಚೆಗೆ ಕಸ್ಟೋಡಿಯಲ್​ ಡೆತ್​ ಕೇಸ್​ನಿಂದ ಪೀಕಲಾಟಕ್ಕೆ ಇಟ್ಟುಕೊಂಡಿರುವ ತಮಿಳುನಾಡು ಪೊಲೀಸ್​ ಮಂದಿ ಇದೀಗ ಮತ್ತೊಂದು ಕೇಸ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ತಾಜಾ ಪ್ರಕರಣದಲ್ಲಿ ಅಮಾಯಕ ಪೋಷಕರ ಎದುರೇ ಅದೂ ನಡು ರಸ್ತೆಯಲ್ಲಿ ಮೊದಲು ಬಾಲಕನನ್ನು, ಬಳಿಕ ಆತನ ಜೊತೆಗಿದ್ದ ಪೋಷಕರನ್ನೂ ಗುಂಪುಗೂಡಿಕೊಂಡು ಥಳಿಸಿದ್ದಾರೆ. ಇದರ ವಿರುದ್ಧ ಸ್ವಯಂ ದೂರು ದಾಖಲಿಸಿಕೊಂಡಿರುವ ಮಾನವ ಹಕ್ಕು ಆಯೋಗ, ಆ ಪೊಲೀಸರ ವಿರುದ್ಧ ಕೇಸು ದಾಖಲಿಸಿಕೊಂಡು ತನಿಖೆ ಆದೇಶಿಸಿದೆ. ಕೊಯಮತ್ತೂರಿನ ರಥಿನಾಪುರಿಯಲ್ಲಿ ಜೂನ್ 17ರಂದು ಬಾಲಕನ ಮೇಲೆ ಹಲ್ಲೆ ನಡೆದಿದೆ. ರಾತ್ರಿ ಸುಮಾರು […]

ತ.ನಾಡು ಪೊಲೀಸರಿಗೆ ಏನಾಗಿದೆ? ಪೋಷಕರ ಎದುರೇ ಬಾಲಕನ ಥಳಿಸಿದ ಹಿರಿಯ ಅಧಿಕಾರಿ, ಬಿತ್ತು ಕೇಸು
ಸಾಧು ಶ್ರೀನಾಥ್​
|

Updated on:Jun 30, 2020 | 6:15 PM

Share

ಚೆನ್ನೈ: ಇತ್ತೀಚೆಗೆ ಕಸ್ಟೋಡಿಯಲ್​ ಡೆತ್​ ಕೇಸ್​ನಿಂದ ಪೀಕಲಾಟಕ್ಕೆ ಇಟ್ಟುಕೊಂಡಿರುವ ತಮಿಳುನಾಡು ಪೊಲೀಸ್​ ಮಂದಿ ಇದೀಗ ಮತ್ತೊಂದು ಕೇಸ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ತಾಜಾ ಪ್ರಕರಣದಲ್ಲಿ ಅಮಾಯಕ ಪೋಷಕರ ಎದುರೇ ಅದೂ ನಡು ರಸ್ತೆಯಲ್ಲಿ ಮೊದಲು ಬಾಲಕನನ್ನು, ಬಳಿಕ ಆತನ ಜೊತೆಗಿದ್ದ ಪೋಷಕರನ್ನೂ ಗುಂಪುಗೂಡಿಕೊಂಡು ಥಳಿಸಿದ್ದಾರೆ. ಇದರ ವಿರುದ್ಧ ಸ್ವಯಂ ದೂರು ದಾಖಲಿಸಿಕೊಂಡಿರುವ ಮಾನವ ಹಕ್ಕು ಆಯೋಗ, ಆ ಪೊಲೀಸರ ವಿರುದ್ಧ ಕೇಸು ದಾಖಲಿಸಿಕೊಂಡು ತನಿಖೆ ಆದೇಶಿಸಿದೆ.

ಕೊಯಮತ್ತೂರಿನ ರಥಿನಾಪುರಿಯಲ್ಲಿ ಜೂನ್ 17ರಂದು ಬಾಲಕನ ಮೇಲೆ ಹಲ್ಲೆ ನಡೆದಿದೆ. ರಾತ್ರಿ ಸುಮಾರು 9 ಗಂಟೆ ವೇಳೆಗೆ ಸಬ್​ಇನ್ಸ್​ಪೆಕ್ಟರ್ ಚೆಲ್ಲಮಣಿ ಮತ್ತು ಇಬ್ಬರು ಕಾನ್​ಸ್ಟೇಬಲ್​ಗಳು ಸಿಟಿ ರೌಂಡ್ಸ್​ ಬಂದಿದ್ದಾರೆ. ಈ ವೇಳೆ ಟಿಫನ್ ಸೆಂಟರ್​​ ಓಪನ್​ ಆಗಿರುವುದನ್ನು ಪೊಲೀಸರು ಪ್ರಶ್ನಿಸಿದ್ದಾರೆ. ಅಂಗಡಿಯನ್ನು ಮುಚ್ಚಲು ಸ್ವಲ್ಪ ಸಮಯ ಕೊಡಿ ಎಂದು ಪೋಷಕರು ತಿಳಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಪೊಲೀಸರು ಗುಂಪು ಸೇರಿಕೊಂಡು ಬಾಲಕ ಮತ್ತು ಪೋಷಕರ ಮೇಲೆ ಥಳಿಸಿದ್ದಾರೆ.

ಬಳಿಕ ಪೊಲೀಸ್ ವಾಹನದಲ್ಲಿ ಹುಡುಗ ಮತ್ತು ಆತನ ತಂದೆಯನ್ನು ಪೊಲೀಸರು ಕರೆದೊಯ್ದಿದ್ದಾರೆ. ಇದರ ವಿರುದ್ಧ ಮಾನವ ಹಕ್ಕು ಆಯೋಗ ಸ್ವಯಂ ದೂರು ದಾಖಲಿಸಿಕೊಂಡಿದೆ. ಹಾಗೂ ಪೊಲೀಸರ ವಿರುದ್ಧ ಕೇಸು ದಾಖಲಿಸಿ, ತನಿಖೆ ಆದೇಶಿಸಿದೆ.

Published On - 6:12 pm, Tue, 30 June 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್