AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ.ನಾಡು ಪೊಲೀಸರಿಗೆ ಏನಾಗಿದೆ? ಪೋಷಕರ ಎದುರೇ ಬಾಲಕನ ಥಳಿಸಿದ ಹಿರಿಯ ಅಧಿಕಾರಿ, ಬಿತ್ತು ಕೇಸು

ಚೆನ್ನೈ: ಇತ್ತೀಚೆಗೆ ಕಸ್ಟೋಡಿಯಲ್​ ಡೆತ್​ ಕೇಸ್​ನಿಂದ ಪೀಕಲಾಟಕ್ಕೆ ಇಟ್ಟುಕೊಂಡಿರುವ ತಮಿಳುನಾಡು ಪೊಲೀಸ್​ ಮಂದಿ ಇದೀಗ ಮತ್ತೊಂದು ಕೇಸ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ತಾಜಾ ಪ್ರಕರಣದಲ್ಲಿ ಅಮಾಯಕ ಪೋಷಕರ ಎದುರೇ ಅದೂ ನಡು ರಸ್ತೆಯಲ್ಲಿ ಮೊದಲು ಬಾಲಕನನ್ನು, ಬಳಿಕ ಆತನ ಜೊತೆಗಿದ್ದ ಪೋಷಕರನ್ನೂ ಗುಂಪುಗೂಡಿಕೊಂಡು ಥಳಿಸಿದ್ದಾರೆ. ಇದರ ವಿರುದ್ಧ ಸ್ವಯಂ ದೂರು ದಾಖಲಿಸಿಕೊಂಡಿರುವ ಮಾನವ ಹಕ್ಕು ಆಯೋಗ, ಆ ಪೊಲೀಸರ ವಿರುದ್ಧ ಕೇಸು ದಾಖಲಿಸಿಕೊಂಡು ತನಿಖೆ ಆದೇಶಿಸಿದೆ. ಕೊಯಮತ್ತೂರಿನ ರಥಿನಾಪುರಿಯಲ್ಲಿ ಜೂನ್ 17ರಂದು ಬಾಲಕನ ಮೇಲೆ ಹಲ್ಲೆ ನಡೆದಿದೆ. ರಾತ್ರಿ ಸುಮಾರು […]

ತ.ನಾಡು ಪೊಲೀಸರಿಗೆ ಏನಾಗಿದೆ? ಪೋಷಕರ ಎದುರೇ ಬಾಲಕನ ಥಳಿಸಿದ ಹಿರಿಯ ಅಧಿಕಾರಿ, ಬಿತ್ತು ಕೇಸು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 30, 2020 | 6:15 PM

Share

ಚೆನ್ನೈ: ಇತ್ತೀಚೆಗೆ ಕಸ್ಟೋಡಿಯಲ್​ ಡೆತ್​ ಕೇಸ್​ನಿಂದ ಪೀಕಲಾಟಕ್ಕೆ ಇಟ್ಟುಕೊಂಡಿರುವ ತಮಿಳುನಾಡು ಪೊಲೀಸ್​ ಮಂದಿ ಇದೀಗ ಮತ್ತೊಂದು ಕೇಸ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ತಾಜಾ ಪ್ರಕರಣದಲ್ಲಿ ಅಮಾಯಕ ಪೋಷಕರ ಎದುರೇ ಅದೂ ನಡು ರಸ್ತೆಯಲ್ಲಿ ಮೊದಲು ಬಾಲಕನನ್ನು, ಬಳಿಕ ಆತನ ಜೊತೆಗಿದ್ದ ಪೋಷಕರನ್ನೂ ಗುಂಪುಗೂಡಿಕೊಂಡು ಥಳಿಸಿದ್ದಾರೆ. ಇದರ ವಿರುದ್ಧ ಸ್ವಯಂ ದೂರು ದಾಖಲಿಸಿಕೊಂಡಿರುವ ಮಾನವ ಹಕ್ಕು ಆಯೋಗ, ಆ ಪೊಲೀಸರ ವಿರುದ್ಧ ಕೇಸು ದಾಖಲಿಸಿಕೊಂಡು ತನಿಖೆ ಆದೇಶಿಸಿದೆ.

ಕೊಯಮತ್ತೂರಿನ ರಥಿನಾಪುರಿಯಲ್ಲಿ ಜೂನ್ 17ರಂದು ಬಾಲಕನ ಮೇಲೆ ಹಲ್ಲೆ ನಡೆದಿದೆ. ರಾತ್ರಿ ಸುಮಾರು 9 ಗಂಟೆ ವೇಳೆಗೆ ಸಬ್​ಇನ್ಸ್​ಪೆಕ್ಟರ್ ಚೆಲ್ಲಮಣಿ ಮತ್ತು ಇಬ್ಬರು ಕಾನ್​ಸ್ಟೇಬಲ್​ಗಳು ಸಿಟಿ ರೌಂಡ್ಸ್​ ಬಂದಿದ್ದಾರೆ. ಈ ವೇಳೆ ಟಿಫನ್ ಸೆಂಟರ್​​ ಓಪನ್​ ಆಗಿರುವುದನ್ನು ಪೊಲೀಸರು ಪ್ರಶ್ನಿಸಿದ್ದಾರೆ. ಅಂಗಡಿಯನ್ನು ಮುಚ್ಚಲು ಸ್ವಲ್ಪ ಸಮಯ ಕೊಡಿ ಎಂದು ಪೋಷಕರು ತಿಳಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಪೊಲೀಸರು ಗುಂಪು ಸೇರಿಕೊಂಡು ಬಾಲಕ ಮತ್ತು ಪೋಷಕರ ಮೇಲೆ ಥಳಿಸಿದ್ದಾರೆ.

ಬಳಿಕ ಪೊಲೀಸ್ ವಾಹನದಲ್ಲಿ ಹುಡುಗ ಮತ್ತು ಆತನ ತಂದೆಯನ್ನು ಪೊಲೀಸರು ಕರೆದೊಯ್ದಿದ್ದಾರೆ. ಇದರ ವಿರುದ್ಧ ಮಾನವ ಹಕ್ಕು ಆಯೋಗ ಸ್ವಯಂ ದೂರು ದಾಖಲಿಸಿಕೊಂಡಿದೆ. ಹಾಗೂ ಪೊಲೀಸರ ವಿರುದ್ಧ ಕೇಸು ದಾಖಲಿಸಿ, ತನಿಖೆ ಆದೇಶಿಸಿದೆ.

Published On - 6:12 pm, Tue, 30 June 20

Follow Us
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ