AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ಕೊರೊನಾ ಪ್ಯಾಕೇಜ್ ಘೋಷಣೆ; ಎಲ್ಲಾ ಖಾಸಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಕೊವಿಡ್​ಗೆ ಉಚಿತ ಚಿಕಿತ್ಸೆ

ಕೊರೊನಾ ಪ್ಯಾಕೇಜ್​ನ ಅನುಸಾರ ತಮಿಳುನಾಡಿನ ಎಲ್ಲಾ ಖಾಸಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾಗೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಬಡ ಕುಟುಂಬಗಳಿಗೆ 4 ಸಾವಿರ ಪರಿಹಾರ ನಿಧಿ ಘೋಷಣೆ ಮಾಡಲಾಗಿದೆ.

ತಮಿಳುನಾಡಿನಲ್ಲಿ ಕೊರೊನಾ ಪ್ಯಾಕೇಜ್ ಘೋಷಣೆ; ಎಲ್ಲಾ ಖಾಸಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಕೊವಿಡ್​ಗೆ ಉಚಿತ ಚಿಕಿತ್ಸೆ
ಎಂ.ಕೆ.ಸ್ಟಾಲಿನ್​
TV9 Web
| Updated By: ganapathi bhat|

Updated on:Aug 23, 2021 | 12:30 PM

Share

ಚೆನ್ನೈ: ಕೊರೊನಾ ಎರಡನೇ ಅಲೆಯಿಂದ ಇಡೀ ದೇಶ ಸಂಕಷ್ಟಕ್ಕೆ ಈಡಾಗಿದೆ. ವಿವಿಧ ರಾಜ್ಯ ಸರ್ಕಾರಗಳು ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ತಮ್ಮದೇ ರೀತಿಯಲ್ಲಿ ಕೆಲಸ ಮಾಡುತ್ತಿವೆ. ತಮಿಳುನಾಡು ಸರ್ಕಾರವೀಗ ಕೊರೊನಾ ಪ್ಯಾಕೇಜ್ ಘೋಷಿಸಿದೆ. ಕೊವಿಡ್ ವಿರುದ್ಧ ಹೋರಾಡಲು ಹಲವು ಮಹತ್ತರ ನಿರ್ಧಾರಗಳನ್ನು ಕೈಗೊಂಡಿದೆ.

ಕೊರೊನಾ ಪ್ಯಾಕೇಜ್​ನ ಅನುಸಾರ ತಮಿಳುನಾಡಿನ ಎಲ್ಲಾ ಖಾಸಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾಗೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಬಡ ಕುಟುಂಬಗಳಿಗೆ 4 ಸಾವಿರ ಪರಿಹಾರ ನಿಧಿ ಘೋಷಣೆ ಮಾಡಲಾಗಿದೆ. ಪರಿಹಾರ ನಿಧಿಯ ಮೊದಲನೆ ಕಂತು, 2 ಸಾವಿರ ರೂಪಾಯಿಯನ್ನು ಇಂದಿನಿಂದ ವಿತರಣೆ ಮಾಡಲಾಗುತ್ತದೆ. ಜೊತೆಗೆ, ಇಂದಿನಿಂದ 1 ಲೀಟರ್ ಆವಿನ್ ಹಾಲಿಗೆ 3ರೂ. ಕಡಿತ ಮಾಡಲಾಗಿದೆ. ಬಟ್ಟೆ ಸೋಪು, ಮೈ ಸೋಪು ಸೇರಿ 13 ಆಹಾರ ಪದಾರ್ಥ ವಿತರಣೆ ಮಾಡಲಾಗುತ್ತದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,11,170 ಹೊಸ ಪ್ರಕರಣಗಳನ್ನು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 2.46 ಕೋಟಿಗೆ ತಲಪಿದ. ದೇಶಾದ್ಯಂತ 4,077 ಸಾವುಗಳು ವರದಿಯಾಗಿವೆ. ಈಗ ಸಾವಿನ ಸಂಖ್ಯೆ 2,70,284 ಆಗಿದ್ದು ಸಕ್ರಿಯ ಪ್ರಕರಣಗಳು 26.18 ಲಕ್ಷದಷ್ಟಿವೆ. ಏತನ್ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶದ ಕೊವಿಡ್ -19 ಪರಿಸ್ಥಿತಿಯನ್ನು ನಿಭಾಯಿಸಲು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವೆಂಟಿಲೇಟರ್‌ಗಳು ಬಳಕೆಯಾಗದೆ ಇರುವ ವರದಿಗಳ ನಂತರ, ಕೇಂದ್ರ ಸರ್ಕಾರವು ರಾಜ್ಯಗಳಿಗೆ ಒದಗಿಸಿದವರ ಬಗ್ಗೆ ತಕ್ಷಣ ಆಡಿಟ್ ಮಾಡಬೇಕೆಂದು ಮೋದಿ ಕರೆ ನೀಡಿದರು. ರಾಜ್ಯಗಳು ತಮ್ಮ ಪ್ರಕರಣಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ವರದಿ ಮಾಡುವಾಗ ಪಾರದರ್ಶಕವಾಗಿರಬೇಕು ಎಂದು ಅವರು ಹೇಳಿದ್ದಾರೆ.

ತಮಿಳುನಾಡಿನಲ್ಲಿ 33,658 ಹೊಸ ಪ್ರಕರಣ, 303 ಸಾವು ತಮಿಳುನಾಡಿನಲ್ಲಿ ಶನಿವಾರ 33,658 ಹೊಸ ಪ್ರಕರಣಗಳು ವರದಿ ಆಗಿದ್ದು 303 ಸಾವು ಸಂಭವಿಸಿದೆ. ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಒಟ್ಟು ಸೋಂಕಿತರ ಸಂಖ್ಯೆ 15,65,035 ಆಗಿದೆ. 20,905 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ 4,32,344 ಮಂದಿ ಸಾವಿಗೀಡಾಗಿದ್ದಾರೆ.

ಗರಿಷ್ಠ ಪ್ರಕರಣಗಳನ್ನು ದಾಖಲಿಸಿದ ಅಗ್ರ ಐದು ರಾಜ್ಯಗಳು ಕರ್ನಾಟಕ- 41,664 ಪ್ರಕರಣಗಳು, ಮಹಾರಾಷ್ಟ್ರ -34,848 ಪ್ರಕರಣಗಳು, ತಮಿಳುನಾಡು -33,658 ಪ್ರಕರಣಗಳು, ಕೇರಳ – 32,680 ಪ್ರಕರಣಗಳು ಮತ್ತು ಆಂಧ್ರಪ್ರದೇಶ 22,517 ಪ್ರಕರಣಗಳನ್ನು ದಾಖಲಿಸಿದೆ. ಈ ಐದು ರಾಜ್ಯಗಳಿಂದ 53.15% ಹೊಸ ಪ್ರಕರಣಗಳು ವರದಿಯಾಗಿವೆ. ಕರ್ನಾಟಕದಲ್ಲಿ ಮಾತ್ರ ಶೇ 13.39 ಹೊಸ ಪ್ರಕರಣಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ಲಾಕ್​ಡೌನ್ ಪ್ಯಾಕೇಜ್​ನ ಕಾರ್ಯ ಯೋಜನೆ ರೂಪಿಸಲು ಮೌಖಿಕ ಸೂಚನೆ ನೀಡಿದ ಸಿಎಂ ಯಡಿಯೂರಪ್ಪ

Karnataka Lockdown Package: ಲಾಕ್​ಡೌನ್ ಪ್ಯಾಕೇಜ್ ಘೋಷಣೆ ಬಗ್ಗೆ ಸುಳಿವು ನೀಡಿದ ಕಂದಾಯ ಸಚಿವ ಆರ್.ಅಶೋಕ್

Published On - 3:27 pm, Sun, 16 May 21