ಆನ್​ಲೈನ್​ನಲ್ಲಿ ರಮ್ಮಿ ಆಡಿದರೆ ಬೀಳತ್ತೆ ಭಾರೀ ದಂಡ, ಜೈಲು ಶಿಕ್ಷೆ!

ತಮಿಳುನಾಡಿನಲ್ಲಿ ಯಾರೂ ಕಂಪ್ಯೂಟರ್​ ಅಥವಾ ಮೊಬೈಲ್​ ಬಳಕೆ ಮಾಡಿಕೊಂಡು ರಮ್ಮಿಯಂಥ ಆಟ ಆಡಬಾರದು. ನಿಯಮ ಉಲ್ಲಂಘಿಸಿದವರಿಗೆ ಕಠಿಣ ಶಿಕ್ಷೆ ಅನುಭವಿಸಬೇಕಾಗುತ್ತದೆ

ಆನ್​ಲೈನ್​ನಲ್ಲಿ ರಮ್ಮಿ ಆಡಿದರೆ ಬೀಳತ್ತೆ ಭಾರೀ ದಂಡ, ಜೈಲು ಶಿಕ್ಷೆ!
ಸಾಂದರ್ಭಿಕ ಚಿತ್ರ
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 04, 2021 | 8:28 PM

ಚೆನ್ನೈ: ರಮ್ಮಿ ಹಾಗೂ ಪೋಕರ್​ನಂಥ ಆನ್​ಲೈನ್​ ಜೂಜಾಡಿದರೆ ಜೈಲು ಶಿಕ್ಷೆ ವಿಧಿಸುವ ಕಾನೂನನ್ನು ತಮಿಳುನಾಡು ರೂಪಿಸಿದೆ. ಹೊಸ ಕಾಯ್ದೆ ಅಡಿಯಲ್ಲಿ ಆನ್​ಲೈನ್ ಜೂಜುಗಳನ್ನು ಆಡಿದರೆ ಎರಡು ವರ್ಷ ಜೈಲು, 10 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ. ತಮಿಳುನಾಡಿನಲ್ಲಿ ಆನ್​ಲೈನ್​ ಜೂಜು ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ವರದಿಯಾಗಿತ್ತು. ಹೀಗಾಗಿ, ಈ ಕುರಿತು ತಿದ್ದುಪಡಿ ಕಾಯ್ದೆಯನ್ನು ತಮಿಳುನಾಡು ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ಇದರ ಅನ್ವಯ ತಮಿಳುನಾಡಿನಲ್ಲಿ ಯಾರೂ ಕಂಪ್ಯೂಟರ್​ ಅಥವಾ ಮೊಬೈಲ್​ ಬಳಕೆ ಮಾಡಿಕೊಂಡು ರಮ್ಮಿಯಂಥ ಆಟ ಆಡಬಾರದು. ನಿಯಮ ಉಲ್ಲಂಘಿಸಿದವರಿಗೆ ಕಠಿಣ ಶಿಕ್ಷೆ ಅನುಭವಿಸಬೇಕಾಗುತ್ತದೆ.

ಇತ್ತೀಚೆಗೆ ಕೇರಳದಲ್ಲಿ ಇದೇ ಮಾದರಿಯ ಪ್ರಕರಣವೊಂದು ಹೈಕೋರ್ಟ್​ನಲ್ಲಿ ವಿಚಾರಣೆಗೆ ಬಂದಿತ್ತು. ತಿರುವನಂತಪುರದ ಕುಟ್ಟಿಚಾಲ್​ನಲ್ಲಿ 27 ವರ್ಷದ ವಿನೀತ್​ ಎಂಬುವವರು ಆನ್​ಲೈನ್​ ರಮ್ಮಿಯಲ್ಲಿ ₹ 21 ಲಕ್ಷ ಕಳೆದುಕೊಂಡು, ಆತ್ಮಹತ್ಯೆ ಮಾಡಿಕೊಂಡಿದ್ದರು.

ಅರ್ಜಿದಾರರು ಈ ಪ್ರಕರಣವನ್ನು ಉಲ್ಲೇಖಿಸಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆನ್​ಲೈನ್​ ರಮ್ಮಿಯ ವ್ಯಸನಿಯಾಗಲು ಬ್ರ್ಯಾಂಡ್​ ಅಂಬಾಸಿಡರ್​ಗಳು ಕಾರಣ ಎಂದು ಅರ್ಜಿದಾರರು ಹೇಳಿದ್ದರು. ಅರ್ಜಿ ವಿಚಾರಣೆ ಮಾಡಿದ ನ್ಯಾಯಾಲಯ ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ನಟರಾದ ತಮನ್ನಾ ಭಾಟಿಯಾ ಮತ್ತು ಅಜು ವರ್ಗೀಸ್ ಅವರಿಗೆ ನೋಟಿಸ್​ ನೀಡಿದೆ. ಕೊಹ್ಲಿ, ತಮನ್ನಾ ಮತ್ತು ವರ್ಗೀಸ್ ಆನ್‌ಲೈನ್ ರಮ್ಮಿಯ ಬ್ರ್ಯಾಂಡ್ ಅಂಬಾಸಿಡರ್​ಗಳಾಗಿದ್ದಾರೆ.

ಇಂಗ್ಲೆಂಡ್​ ಸರಣಿಗೂ ಮುನ್ನವೇ ವಿರಾಟ್​ ಕೊಹ್ಲಿಗೆ ನೋಟಿಸ್​: ಸಂಕಷ್ಟದಲ್ಲಿ ಟೀಂ ಇಂಡಿಯಾ ನಾಯಕ

ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾಗೆ ಮಕ್ಕಳಿಂದ ಸಿಕ್ತು ಭರ್ಜರಿ ಸ್ವಾಗತ
ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾಗೆ ಮಕ್ಕಳಿಂದ ಸಿಕ್ತು ಭರ್ಜರಿ ಸ್ವಾಗತ
ಗೃಹಲಕ್ಷ್ಮಿ ಹಣದಲ್ಲಿ ದೇವಿಗೆ ಕಿರೀಟ: ಸಿದ್ದರಾಮಯ್ಯ ಹಾಡಿಹೊಗಳಿದ ಮಹಿಳೆ
ಗೃಹಲಕ್ಷ್ಮಿ ಹಣದಲ್ಲಿ ದೇವಿಗೆ ಕಿರೀಟ: ಸಿದ್ದರಾಮಯ್ಯ ಹಾಡಿಹೊಗಳಿದ ಮಹಿಳೆ
ರವಿ ಕೇಸ್ ಗುರಾಣಿಯಾಗಿ ಬಳಸಲು ವಾಪಸ್ಸು ಪಡೆದಿರುವ ಗುಮಾನಿ ದಟ್ಟವಾಗುತ್ತಿದೆ
ರವಿ ಕೇಸ್ ಗುರಾಣಿಯಾಗಿ ಬಳಸಲು ವಾಪಸ್ಸು ಪಡೆದಿರುವ ಗುಮಾನಿ ದಟ್ಟವಾಗುತ್ತಿದೆ
ಜಾತಿಗಣತಿ ಬಗ್ಗೆ ಮೊದಲು ಬಿಜೆಪಿ ತನ್ನ ನಿಲುವು ಪ್ರಕಟಿಸಲಿ: ಡಿಕೆ ಶಿವಕುಮಾರ್
ಜಾತಿಗಣತಿ ಬಗ್ಗೆ ಮೊದಲು ಬಿಜೆಪಿ ತನ್ನ ನಿಲುವು ಪ್ರಕಟಿಸಲಿ: ಡಿಕೆ ಶಿವಕುಮಾರ್
ತಾಯಿ ಜಗನ್ಮಾತೆಯ ಕೃಪೆಯಿಂದ ಬಳ್ಳಾರಿ ವಾಪಸ್ಸಾಗೋದು ಸಾಧ್ಯವಾಗಿದೆ: ರೆಡ್ಡಿ
ತಾಯಿ ಜಗನ್ಮಾತೆಯ ಕೃಪೆಯಿಂದ ಬಳ್ಳಾರಿ ವಾಪಸ್ಸಾಗೋದು ಸಾಧ್ಯವಾಗಿದೆ: ರೆಡ್ಡಿ
‘ಒಳ್ಳೆಯ ರಿಪೋರ್ಟ್ ಇದೆ’: ಮಾರ್ಟಿನ್​ ಬಿಡುಗಡೆ ಬಳಿಕ ಧ್ರುವ ಪ್ರತಿಕ್ರಿಯೆ
‘ಒಳ್ಳೆಯ ರಿಪೋರ್ಟ್ ಇದೆ’: ಮಾರ್ಟಿನ್​ ಬಿಡುಗಡೆ ಬಳಿಕ ಧ್ರುವ ಪ್ರತಿಕ್ರಿಯೆ
ಮುಡಾ ಹಗರಣ ಸಿದ್ದರಾಮಯ್ಯರನ್ನು ಹೆಚ್ಚು ಆಸ್ತಿಕರನ್ನಾಗಿ ಮಾಡಿರುವಂತಿದೆ!
ಮುಡಾ ಹಗರಣ ಸಿದ್ದರಾಮಯ್ಯರನ್ನು ಹೆಚ್ಚು ಆಸ್ತಿಕರನ್ನಾಗಿ ಮಾಡಿರುವಂತಿದೆ!
ಗೃಹಲಕ್ಷ್ಮಿ ಹಣದ ಉಪಯೋಗ ಹೇಗೆ? ಇಲ್ಲಿದೆ ಬಾಗವ್ವ ಸಣ್ಣಕ್ಕಿಯ ಉದಾಹರಣೆ
ಗೃಹಲಕ್ಷ್ಮಿ ಹಣದ ಉಪಯೋಗ ಹೇಗೆ? ಇಲ್ಲಿದೆ ಬಾಗವ್ವ ಸಣ್ಣಕ್ಕಿಯ ಉದಾಹರಣೆ
ನವರಾತ್ರಿ ಪೂಜಾವಿಧಿಗಳ 9 ನೇ ದಿನ ಜನಿಸಿದ ಮಗು ಶುಭದಾಯಯಕ: ಡಾ ಶೆಲ್ವಪಿಳ್ಳೆ
ನವರಾತ್ರಿ ಪೂಜಾವಿಧಿಗಳ 9 ನೇ ದಿನ ಜನಿಸಿದ ಮಗು ಶುಭದಾಯಯಕ: ಡಾ ಶೆಲ್ವಪಿಳ್ಳೆ
ಅಭಿಮಾನಿಗಳಿಂದ ಧ್ರುವ ಸರ್ಜಾಗೆ ಹೂಮಳೆ, ಸ್ಟೆಪ್ ಹಾಕಿದ ಧ್ರುವ
ಅಭಿಮಾನಿಗಳಿಂದ ಧ್ರುವ ಸರ್ಜಾಗೆ ಹೂಮಳೆ, ಸ್ಟೆಪ್ ಹಾಕಿದ ಧ್ರುವ