AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ನಲ್ಲಿ ರಮ್ಮಿ ಆಡಿದರೆ ಬೀಳತ್ತೆ ಭಾರೀ ದಂಡ, ಜೈಲು ಶಿಕ್ಷೆ!

ತಮಿಳುನಾಡಿನಲ್ಲಿ ಯಾರೂ ಕಂಪ್ಯೂಟರ್​ ಅಥವಾ ಮೊಬೈಲ್​ ಬಳಕೆ ಮಾಡಿಕೊಂಡು ರಮ್ಮಿಯಂಥ ಆಟ ಆಡಬಾರದು. ನಿಯಮ ಉಲ್ಲಂಘಿಸಿದವರಿಗೆ ಕಠಿಣ ಶಿಕ್ಷೆ ಅನುಭವಿಸಬೇಕಾಗುತ್ತದೆ

ಆನ್​ಲೈನ್​ನಲ್ಲಿ ರಮ್ಮಿ ಆಡಿದರೆ ಬೀಳತ್ತೆ ಭಾರೀ ದಂಡ, ಜೈಲು ಶಿಕ್ಷೆ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Feb 04, 2021 | 8:28 PM

Share

ಚೆನ್ನೈ: ರಮ್ಮಿ ಹಾಗೂ ಪೋಕರ್​ನಂಥ ಆನ್​ಲೈನ್​ ಜೂಜಾಡಿದರೆ ಜೈಲು ಶಿಕ್ಷೆ ವಿಧಿಸುವ ಕಾನೂನನ್ನು ತಮಿಳುನಾಡು ರೂಪಿಸಿದೆ. ಹೊಸ ಕಾಯ್ದೆ ಅಡಿಯಲ್ಲಿ ಆನ್​ಲೈನ್ ಜೂಜುಗಳನ್ನು ಆಡಿದರೆ ಎರಡು ವರ್ಷ ಜೈಲು, 10 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ. ತಮಿಳುನಾಡಿನಲ್ಲಿ ಆನ್​ಲೈನ್​ ಜೂಜು ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ವರದಿಯಾಗಿತ್ತು. ಹೀಗಾಗಿ, ಈ ಕುರಿತು ತಿದ್ದುಪಡಿ ಕಾಯ್ದೆಯನ್ನು ತಮಿಳುನಾಡು ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ಇದರ ಅನ್ವಯ ತಮಿಳುನಾಡಿನಲ್ಲಿ ಯಾರೂ ಕಂಪ್ಯೂಟರ್​ ಅಥವಾ ಮೊಬೈಲ್​ ಬಳಕೆ ಮಾಡಿಕೊಂಡು ರಮ್ಮಿಯಂಥ ಆಟ ಆಡಬಾರದು. ನಿಯಮ ಉಲ್ಲಂಘಿಸಿದವರಿಗೆ ಕಠಿಣ ಶಿಕ್ಷೆ ಅನುಭವಿಸಬೇಕಾಗುತ್ತದೆ.

ಇತ್ತೀಚೆಗೆ ಕೇರಳದಲ್ಲಿ ಇದೇ ಮಾದರಿಯ ಪ್ರಕರಣವೊಂದು ಹೈಕೋರ್ಟ್​ನಲ್ಲಿ ವಿಚಾರಣೆಗೆ ಬಂದಿತ್ತು. ತಿರುವನಂತಪುರದ ಕುಟ್ಟಿಚಾಲ್​ನಲ್ಲಿ 27 ವರ್ಷದ ವಿನೀತ್​ ಎಂಬುವವರು ಆನ್​ಲೈನ್​ ರಮ್ಮಿಯಲ್ಲಿ ₹ 21 ಲಕ್ಷ ಕಳೆದುಕೊಂಡು, ಆತ್ಮಹತ್ಯೆ ಮಾಡಿಕೊಂಡಿದ್ದರು.

ಅರ್ಜಿದಾರರು ಈ ಪ್ರಕರಣವನ್ನು ಉಲ್ಲೇಖಿಸಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆನ್​ಲೈನ್​ ರಮ್ಮಿಯ ವ್ಯಸನಿಯಾಗಲು ಬ್ರ್ಯಾಂಡ್​ ಅಂಬಾಸಿಡರ್​ಗಳು ಕಾರಣ ಎಂದು ಅರ್ಜಿದಾರರು ಹೇಳಿದ್ದರು. ಅರ್ಜಿ ವಿಚಾರಣೆ ಮಾಡಿದ ನ್ಯಾಯಾಲಯ ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ನಟರಾದ ತಮನ್ನಾ ಭಾಟಿಯಾ ಮತ್ತು ಅಜು ವರ್ಗೀಸ್ ಅವರಿಗೆ ನೋಟಿಸ್​ ನೀಡಿದೆ. ಕೊಹ್ಲಿ, ತಮನ್ನಾ ಮತ್ತು ವರ್ಗೀಸ್ ಆನ್‌ಲೈನ್ ರಮ್ಮಿಯ ಬ್ರ್ಯಾಂಡ್ ಅಂಬಾಸಿಡರ್​ಗಳಾಗಿದ್ದಾರೆ.

ಇಂಗ್ಲೆಂಡ್​ ಸರಣಿಗೂ ಮುನ್ನವೇ ವಿರಾಟ್​ ಕೊಹ್ಲಿಗೆ ನೋಟಿಸ್​: ಸಂಕಷ್ಟದಲ್ಲಿ ಟೀಂ ಇಂಡಿಯಾ ನಾಯಕ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ