AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ನಲ್ಲಿ ರಮ್ಮಿ ಆಡಿದರೆ ಬೀಳತ್ತೆ ಭಾರೀ ದಂಡ, ಜೈಲು ಶಿಕ್ಷೆ!

ತಮಿಳುನಾಡಿನಲ್ಲಿ ಯಾರೂ ಕಂಪ್ಯೂಟರ್​ ಅಥವಾ ಮೊಬೈಲ್​ ಬಳಕೆ ಮಾಡಿಕೊಂಡು ರಮ್ಮಿಯಂಥ ಆಟ ಆಡಬಾರದು. ನಿಯಮ ಉಲ್ಲಂಘಿಸಿದವರಿಗೆ ಕಠಿಣ ಶಿಕ್ಷೆ ಅನುಭವಿಸಬೇಕಾಗುತ್ತದೆ

ಆನ್​ಲೈನ್​ನಲ್ಲಿ ರಮ್ಮಿ ಆಡಿದರೆ ಬೀಳತ್ತೆ ಭಾರೀ ದಂಡ, ಜೈಲು ಶಿಕ್ಷೆ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Feb 04, 2021 | 8:28 PM

Share

ಚೆನ್ನೈ: ರಮ್ಮಿ ಹಾಗೂ ಪೋಕರ್​ನಂಥ ಆನ್​ಲೈನ್​ ಜೂಜಾಡಿದರೆ ಜೈಲು ಶಿಕ್ಷೆ ವಿಧಿಸುವ ಕಾನೂನನ್ನು ತಮಿಳುನಾಡು ರೂಪಿಸಿದೆ. ಹೊಸ ಕಾಯ್ದೆ ಅಡಿಯಲ್ಲಿ ಆನ್​ಲೈನ್ ಜೂಜುಗಳನ್ನು ಆಡಿದರೆ ಎರಡು ವರ್ಷ ಜೈಲು, 10 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ. ತಮಿಳುನಾಡಿನಲ್ಲಿ ಆನ್​ಲೈನ್​ ಜೂಜು ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ವರದಿಯಾಗಿತ್ತು. ಹೀಗಾಗಿ, ಈ ಕುರಿತು ತಿದ್ದುಪಡಿ ಕಾಯ್ದೆಯನ್ನು ತಮಿಳುನಾಡು ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ಇದರ ಅನ್ವಯ ತಮಿಳುನಾಡಿನಲ್ಲಿ ಯಾರೂ ಕಂಪ್ಯೂಟರ್​ ಅಥವಾ ಮೊಬೈಲ್​ ಬಳಕೆ ಮಾಡಿಕೊಂಡು ರಮ್ಮಿಯಂಥ ಆಟ ಆಡಬಾರದು. ನಿಯಮ ಉಲ್ಲಂಘಿಸಿದವರಿಗೆ ಕಠಿಣ ಶಿಕ್ಷೆ ಅನುಭವಿಸಬೇಕಾಗುತ್ತದೆ.

ಇತ್ತೀಚೆಗೆ ಕೇರಳದಲ್ಲಿ ಇದೇ ಮಾದರಿಯ ಪ್ರಕರಣವೊಂದು ಹೈಕೋರ್ಟ್​ನಲ್ಲಿ ವಿಚಾರಣೆಗೆ ಬಂದಿತ್ತು. ತಿರುವನಂತಪುರದ ಕುಟ್ಟಿಚಾಲ್​ನಲ್ಲಿ 27 ವರ್ಷದ ವಿನೀತ್​ ಎಂಬುವವರು ಆನ್​ಲೈನ್​ ರಮ್ಮಿಯಲ್ಲಿ ₹ 21 ಲಕ್ಷ ಕಳೆದುಕೊಂಡು, ಆತ್ಮಹತ್ಯೆ ಮಾಡಿಕೊಂಡಿದ್ದರು.

ಅರ್ಜಿದಾರರು ಈ ಪ್ರಕರಣವನ್ನು ಉಲ್ಲೇಖಿಸಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆನ್​ಲೈನ್​ ರಮ್ಮಿಯ ವ್ಯಸನಿಯಾಗಲು ಬ್ರ್ಯಾಂಡ್​ ಅಂಬಾಸಿಡರ್​ಗಳು ಕಾರಣ ಎಂದು ಅರ್ಜಿದಾರರು ಹೇಳಿದ್ದರು. ಅರ್ಜಿ ವಿಚಾರಣೆ ಮಾಡಿದ ನ್ಯಾಯಾಲಯ ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ನಟರಾದ ತಮನ್ನಾ ಭಾಟಿಯಾ ಮತ್ತು ಅಜು ವರ್ಗೀಸ್ ಅವರಿಗೆ ನೋಟಿಸ್​ ನೀಡಿದೆ. ಕೊಹ್ಲಿ, ತಮನ್ನಾ ಮತ್ತು ವರ್ಗೀಸ್ ಆನ್‌ಲೈನ್ ರಮ್ಮಿಯ ಬ್ರ್ಯಾಂಡ್ ಅಂಬಾಸಿಡರ್​ಗಳಾಗಿದ್ದಾರೆ.

ಇಂಗ್ಲೆಂಡ್​ ಸರಣಿಗೂ ಮುನ್ನವೇ ವಿರಾಟ್​ ಕೊಹ್ಲಿಗೆ ನೋಟಿಸ್​: ಸಂಕಷ್ಟದಲ್ಲಿ ಟೀಂ ಇಂಡಿಯಾ ನಾಯಕ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ