AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಹಿಳೆಯರು 8ರ ಶೇಪ್​ ಕಳೆದುಕೊಳ್ಳುತ್ತಿದ್ದಾರೆ.. ಸೊಂಟವೆಲ್ಲ ದೊಡ್ಡದಾಗುತ್ತಿದೆ’-ಅಸಭ್ಯ ಕೈಸನ್ನೆಯೊಂದಿಗೆ, ವಿವಾದಾತ್ಮಕ ಹೇಳಿಕೆ ನೀಡಿದ ರಾಜಕಾರಣಿ

ವಿಡಿಯೋವನ್ನು ಟ್ವಿಟರ್​​ನಲ್ಲಿ ಶೇರ್ ಮಾಡಿಕೊಂಡ ಬಿಜೆಪಿಯ ಕಲಾ ಮತ್ತು ಸಂಸ್ಕೃತಿ ಮೋರ್ಚಾದ ಅಧ್ಯಕ್ಷೆ ಗಾಯತ್ರಿ ರಘುರಾಮ್​, ಇಂಥ ಹೇಳಿಕೆ ನೀಡಲು ಲಿಯೋನಿಗೆ ನಾಚಿಕೆಯಾಗಬೇಕು. ಅದಿನ್ನೆಂತಾ ಕೆಟ್ಟ ಹಾಲನ್ನು ಅವರು ಕುಡಿದಿರಬಹುದು? ಎಂದು ಕಿಡಿಕಾರಿದ್ದಾರೆ.

‘ಮಹಿಳೆಯರು 8ರ ಶೇಪ್​ ಕಳೆದುಕೊಳ್ಳುತ್ತಿದ್ದಾರೆ.. ಸೊಂಟವೆಲ್ಲ ದೊಡ್ಡದಾಗುತ್ತಿದೆ’-ಅಸಭ್ಯ ಕೈಸನ್ನೆಯೊಂದಿಗೆ, ವಿವಾದಾತ್ಮಕ ಹೇಳಿಕೆ ನೀಡಿದ ರಾಜಕಾರಣಿ
ದಿಂಡಿಗಲ್ ಲಿಯೋನಿ
Lakshmi Hegde
|

Updated on: Mar 24, 2021 | 6:34 PM

Share

ಮೊನ್ನೆಮೊನ್ನೆಯಷ್ಟೇ ಮಹಿಳೆಯರು ಹರಿದ ಜೀನ್ಸ್​ ಪ್ಯಾಂಟ್​ ಧರಿಸುವ ಬಗ್ಗೆ ಕಾಮೆಂಟ್​ ಮಾಡಿ, ದೇಶಾದ್ಯಂತ ಮಹಿಳೆಯರಿಂದ ಟೀಕೆಗೆ ಒಳಗಾಗಿದ್ದಾರೆ ಉತ್ತರಾಖಂಡ ಮುಖ್ಯಮಂತ್ರಿ ತೀರಥ್​ ಸಿಂಗ್ ರಾವತ್​. ಅವರ ಹೇಳಿಕೆಗೆ ಇನ್ನೂ ವಿರೋಧಗಳು ವ್ಯಕ್ತವಾಗುತ್ತಿರುವಾಗಲೇ ತಮಿಳುನಾಡಿನ ರಾಜಕಾರಣಿಯೊಬ್ಬರು ಮಹಿಳೆಯರ ಬಗ್ಗೆ ಮಾತನಾಡಿ, ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಡಿಎಂಕೆ ಅಭ್ಯರ್ಥಿ ಪ್ರಚಾರದ ವೇಳೆ ಮಾಡಿದ ಎಡವಟ್ಟಿನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ.

ಡಿಎಂಕೆ ಅಭ್ಯರ್ಥಿ ದಿಂಡಿಗಲ್ ಲಿಯೋನಿ ಕೊಡಬಾರದ ಹೇಳಿಕೆ ಕೊಟ್ಟು ಟೀಕೆಗೆ ಗುರಿಯಾಗಿದ್ದಾರೆ. ಮಹಿಳೆಯರನ್ನು ಹಸುಗಳಿಗೆ ಹೋಲಿಸಿದ್ದಲ್ಲದೆ, ವಿದೇಶಿ ಹಸುಗಳ ಹಾಲು ಕುಡಿದು ತಮ್ಮ ಆಕಾರವನ್ನೇ ಕಳೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. ಪ್ರಚಾರಕ್ಕೆ ತೆರಳಿದ್ದ ವೇಳೆ, ಅವರು ಅಸಭ್ಯವಾಗಿ ಕೈಸನ್ನೆ ಮಾಡುತ್ತ, ಇತ್ತೀಚೆಗೆ ಮಹಿಳೆಯರು ವಿದೇಶಿ ಹಸುಗಳ ಹಾಲುಗಳನ್ನು ಕುಡಿಯುತ್ತಿರುವ ಕಾರಣ ಅವರ ತೂಕ ಹೆಚ್ಚಾಗುತ್ತಿದೆ. ಇದೇ ಕಾರಣದಿಂದ, ತೆಳುವಾಗಿ ಇರಬೇಕಿದ್ದ ಅವರ ಸೊಂಟ ದಪ್ಪವಾಗುತ್ತದೆ. ಮೊದಲೆಲ್ಲ ಮಹಿಳೆಯರ ಆಕಾರ ಎಂಟರ ಆಕೃತಿಯಲ್ಲಿ ಇರುತ್ತಿತ್ತು. ಅಂದರೆ ಸೊಂಟ ತೆಳುವಾಗಿ ಇರುತ್ತಿತ್ತು. ಮಕ್ಕಳನ್ನು ಎತ್ತಿಕೊಂಡರೆ ಆ ಮಗು ತಾಯಿಯ ಸೊಂಟದ ಮೇಲೆ ಸರಿಯಾಗಿ ಕುಳಿತುಕೊಳ್ಳಲು ಸಾಧ್ಯವಾಗುತ್ತಿತ್ತು. ಆದರೆ ಈಗೀಗ ಮಹಿಳೆಯ ಸೊಂಟ ಪೀಪಾಯಿಯಂತೆ ದೊಡ್ಡದಾಗಿ ಇರುತ್ತದೆ. ಹಾಗಾಗಿ ಮಕ್ಕಳನ್ನು ಸೊಂಟದ ಮೇಲೆ ಎತ್ತಿಕೊಳ್ಳಲೂ ಅವರಿಗೆ ಆಗುವುದಿಲ್ಲ. ಈಗಿನ ಮಹಿಳೆಯರು ವಿದೇಶಿ ಹಸುಗಳ ಹಾಲು ಕುಡಿದು ತಮ್ಮ ಶೇಪ್​ ಕಳೆದುಕೊಳ್ಳುತ್ತಿದ್ದಾರೆ ಎಂದು ಅಸಹ್ಯದ ಮಾತುಗಳನ್ನಾಡಿದ್ದಾರೆ.

ಪಕ್ಷದ ಇತರ ಕಾರ್ಯಕರ್ತರು ದಿಂಡಿಗಲ್ ಲಿಯೋನಿ ಅವರನ್ನು ತಡೆಯಲು ಯತ್ನಿಸಿದರೂ ಪ್ರಯೋಜನ ಆಗಲಿಲ್ಲ. ಒಂದೇ ಸಮ ಮಹಿಳೆಯರ ಬಗ್ಗೆ ಟೀಕೆ ಮಾಡುತ್ತಲೇ ಇದ್ದರು. ತುಂಬ ಆಸಕ್ತಿಯಿಂದ ಮಾತನಾಡುತ್ತಿದ್ದರು. ಆದರೆ ಲಿಯೋನಿ ಈ ಹೇಳಿಕೆ ಕೊಟ್ಟ ನಂತರ ಹಲವರು ಅವರ ವಿರುದ್ಧ ಕಿಡಿಕಾರಿದ್ದಾರೆ.

ವಿಡಿಯೋವನ್ನು ಟ್ವಿಟರ್​​ನಲ್ಲಿ ಶೇರ್ ಮಾಡಿಕೊಂಡ ಬಿಜೆಪಿಯ ಕಲಾ ಮತ್ತು ಸಂಸ್ಕೃತಿ ಮೋರ್ಚಾದ ಅಧ್ಯಕ್ಷೆ ಗಾಯತ್ರಿ ರಘುರಾಮ್​, ಇಂಥ ಹೇಳಿಕೆ ನೀಡಲು ಲಿಯೋನಿಗೆ ನಾಚಿಕೆಯಾಗಬೇಕು. ಅದಿನ್ನೆಂತಾ ಕೆಟ್ಟ ಹಾಲನ್ನು ಅವರು ಕುಡಿದಿರಬಹುದು? ಮಹಿಳೆಯರಿಗೆ ಹೆರಿಗೆ ನಂತರ ಅವರ ದೇಹದಲ್ಲಿ ಹಾರ್ಮೋನುಗಳ ಬದಲಾವಣೆ ಆಗುತ್ತದೆ ಎಂಬ ಬಗ್ಗೆ ಲಿಯೋನಿಗೆ ಗೊತ್ತಿಲ್ಲವಾ? ಎಂದು ಆಕ್ರೋರ ಹೊರಹಾಕಿದ್ದಾರೆ. ಅಲ್ಲದೆ, ಡಿಎಂಕೆ ಪಕ್ಷದ ಸಂಸದೆ ಕನಿಮೋಳಿಯವರನ್ನು ಟ್ಯಾಗ್​ ಮಾಡಿ, ಇದೇನಾ? ನಿಮ್ಮ ಪಕ್ಷದವರಿಗೆ ಮಹಿಳೆಯರ ಬಗ್ಗೆ ಇರುವ ಗೌರವ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಚುನಾವಣೆ ಹೊಸಿಲಲ್ಲೇ ‘ತಲೈವಿ’ ಟ್ರೇಲರ್ ಬಿಡುಗಡೆ: ಮತದಾರರಿಗೆ ನೆನಪಾಗ್ತಾರಾ ಜಯಲಲಿತಾ?

Ripped Jeans;ತಿರತ್​ ಸಿಂಗ್ ರಾವತ್ ಅವರಿಗೊಂದು ಪತ್ರ: ಹೆಣ್ಣುಮಕ್ಕಳ ಆರೋಗ್ಯ ಮತ್ತು ಶಿಕ್ಷಣ ಸಮಾನತೆಯ ಬಗ್ಗೆ ಯೋಚಿಸಬೇಕೆನ್ನಿಸುತ್ತಿಲ್ಲವೆ?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ