AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನಾತನ ಧರ್ಮವನ್ನು ಎಚ್‌ಐವಿ ಮತ್ತು ಕುಷ್ಠರೋಗಕ್ಕೆ ಹೋಲಿಸಿದ ಡಿಎಂಕೆ ನಾಯಕ ಎ ರಾಜಾ

ಚೆನ್ನೈನಲ್ಲಿ ದ್ರಾವಿಡರ್ ಕಳಗಂ ಆಯೋಜಿಸಿದ್ದ ವಿಶ್ವಕರ್ಮ ಯೋಜನೆ ವಿರುದ್ಧದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜಾ, ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಕುರಿತು ಉದಯನಿಧಿ ಅವರ ಹೇಳಿಕೆಯು ತುಲನಾತ್ಮಕವಾಗಿ ಸೌಮ್ಯವಾಗಿದೆ. ಸನಾತನ ಮತ್ತು ವಿಶ್ವಕರ್ಮ ಯೋಜನೆಗಳು ಭಿನ್ನವಾಗಿಲ್ಲ. ಮಲೇರಿಯಾ, ಡೆಂಗ್ಯೂನಂತೆ ಸನಾತನ ಧರ್ಮ ತೊಲಗಬೇಕು ಎಂದು ಉದಯನಿಧಿ ಹೇಳಿದ್ದು ಸೌಮ್ಯವಾಗಿದೆ ಎಂದಿದ್ದಾರೆ.

ಸನಾತನ ಧರ್ಮವನ್ನು ಎಚ್‌ಐವಿ ಮತ್ತು ಕುಷ್ಠರೋಗಕ್ಕೆ ಹೋಲಿಸಿದ ಡಿಎಂಕೆ ನಾಯಕ ಎ ರಾಜಾ
ಎ ರಾಜಾ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Sep 08, 2023 | 12:07 PM

Share

ಚೆನ್ನೈ ಸೆಪ್ಟೆಂಬರ್ 07: ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ (Udhayanidhi Stalin) ಅವರು ಸನಾತನ ಧರ್ಮದ (Sanatan Dharma) ಬಗ್ಗೆ ನೀಡಿದ ಹೇಳಿಕೆ ವಿವಾದ ತಣ್ಣಗಾಗುವ ಮೊದಲೇ ಡಿಎಂಕೆ ಸಂಸದ ಎ ರಾಜಾ (A Raja), ಸನಾತನ ಧರ್ಮವನ್ನು ಎಚ್‌ಐವಿ ಮತ್ತು ಕುಷ್ಠರೋಗಕ್ಕೆ ಹೋಲಿಸಿ ಸುದ್ದಿಯಾಗಿದ್ದಾರೆ. ಚೆನ್ನೈನಲ್ಲಿ ದ್ರಾವಿಡರ್ ಕಳಗಂ ಆಯೋಜಿಸಿದ್ದ ವಿಶ್ವಕರ್ಮ ಯೋಜನೆ ವಿರುದ್ಧದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜಾ, ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಕುರಿತು ಉದಯನಿಧಿ ಅವರ ಹೇಳಿಕೆಯು ತುಲನಾತ್ಮಕವಾಗಿ ಸೌಮ್ಯವಾಗಿದೆ.ಸನಾತನ ಮತ್ತು ವಿಶ್ವಕರ್ಮ ಯೋಜನೆಗಳು ಭಿನ್ನವಾಗಿಲ್ಲ. ಮಲೇರಿಯಾ, ಡೆಂಗ್ಯೂನಂತೆ ಸನಾತನ ಧರ್ಮ ತೊಲಗಬೇಕು ಎಂದು ಉದಯನಿಧಿ ಹೇಳಿದ್ದು ಸೌಮ್ಯವಾಗಿದೆ. ಈ ರೋಗಗಳು ಸಾಮಾಜಿಕ ಕಳಂಕವನ್ನು ಹೊಂದಿಲ್ಲ. ಎಚ್ಐವಿ ಮತ್ತು ಕುಷ್ಠರೋಗದಂತಹ ಸಾಮಾಜಿಕ ಪಿಡುಗುಗಳನ್ನು ಸನಾತನ ಧರ್ಮದೊಂದಿಗೆ ಹೋಲಿಸಬೇಕು ಎಂದು ರಾಜಾ ಹೇಳಿದರು.

ಮಾಧ್ಯಮಗಳ ವರದಿಗಳ ಪ್ರಕಾರ, 60 ವರ್ಷದ ನಾಯಕ ರಾಜಾ ಅವರು , ಮಲೇರಿಯಾ ಮತ್ತು ಡೆಂಗ್ಯೂಗೆ ಸಂಬಂಧಿಸಿದ ಅಸಹ್ಯತೆಯ ಭಾವನೆ ಇಲ್ಲ ಅಥವಾ ಅವುಗಳನ್ನು ಸಾಮಾಜಿಕ ಪಿಡುಗು ಎಂದು ಪರಿಗಣಿಸಲಾಗಿಲ್ಲ. ಸನಾತನ ಧರ್ಮವನ್ನು ಒಂದು ರೋಗಕ್ಕೆ ಸಮಾನವಾದ ಸಾಮಾಜಿಕ ಅವಮಾನ ಎಂದು ಪರಿಗಣಿಸಬೇಕು ಎಂದು ಹೇಳಿರುವುದಾಗಿ  ವರದಿಗಳು ಉಲ್ಲೇಖಿಸಿವೆ.

ಪ್ರಧಾನಿ ಸಭೆ ಕರೆದು ನನಗೆ ಅನುಮತಿ ನೀಡಿದರೆ ಸಂಪುಟದ ಎಲ್ಲ ಸಚಿವರಿಗೆ ಉತ್ತರ ನೀಡಲು ನಾನು ಸಿದ್ಧನಿದ್ದೇನೆ. ನೀವು ನಿರ್ಧರಿಸಿದ ನಂತರ ‘ಸನಾತನ ಧರ್ಮ’ ಯಾವುದು ಎಂದು ನಾನು ವಿವರಿಸುತ್ತೇನೆ ಎಂದು ಎಎನ್ಐ ಸುದ್ದಿಸಂಸ್ಥೆ ಜತೆ ಮಾತನಾಡಿದ ರಾಜಾ ಹೇಳಿದ್ದಾರೆ.

ಉದಯನಿಧಿ ಸ್ಟಾಲಿನ್ ಹೇಳಿದ್ದೇನು?

ಕಳೆದ ಶನಿವಾರ ತಮಿಳುನಾಡಿನಲ್ಲಿ ಸಚಿವ ಉದಯನಿಧಿ ಸ್ಟಾಲಿನ್  ಸಮಾನತೆಯನ್ನು ಸ್ಥಾಪಿಸಲು ಸನಾತನ ಧರ್ಮವನ್ನು (ಹಿಂದೂ ಧರ್ಮದಲ್ಲಿ ನಿಷೇಧಿಸಲಾಗಿರುವ ಕರ್ತವ್ಯಗಳು ಮತ್ತು ಜೀವನ ವಿಧಾನ) ನಿರ್ಮೂಲನೆಗೆ ಕರೆ ನೀಡಿದ ವಿಡಿಯೊ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ, ರಾಜಕೀಯ ವಲಯದಲ್ಲಿ ಭಾರೀ ವಾದ- ವಿವಾದಗಳು ನಡೆದಿವೆ.

ಇದನ್ನೂ ಓದಿ:ಉದಯನಿಧಿ ಅವರ ‘ಸನಾತನ ಧರ್ಮ’ ಹೇಳಿಕೆಯನ್ನು ಸಮರ್ಥಿಸಿಕೊಂಡ ತಮಿಳುನಾಡು ಸಿಎಂ ಸ್ಟಾಲಿನ್

ಚೆನ್ನೈನಲ್ಲಿ ತಮಿಳುನಾಡು ಪ್ರಗತಿಪರ ಲೇಖಕರು ಮತ್ತು ಕಲಾವಿದರ ಸಂಘದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಉದಯನಿಧಿ ಸ್ಟಾಲಿನ್ ತಮಿಳಿನಲ್ಲಿ ಹೇಳಿದ್ದು ಹೀಗೆ: “ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ, ಅವುಗಳನ್ನು ರದ್ದುಗೊಳಿಸಬೇಕು. ನಾವು ಡೆಂಗ್ಯೂ, ಸೊಳ್ಳೆಗಳು ಅಥವಾ ಕೊರೊನಾವನ್ನು(ಕೋವಿಡ್-19) ತಡೆಯಲು ಸಾಧ್ಯವಿಲ್ಲ. ನಾವು ಅವುಗಳನ್ನು ನಿರ್ಮೂಲನೆ ಮಾಡಬೇಕು. ಅದೇ ರೀತಿ ಸನಾತನ (ಧರ್ಮ)ವನ್ನು ನಿರ್ಮೂಲನೆ ಮಾಡಬೇಕು. ಕೇವಲ ಸನಾತನವನ್ನು ವಿರೋಧಿಸುವ ಬದಲು ಅದನ್ನು ನಿರ್ಮೂಲನೆ ಮಾಡಬೇಕು. ಉದಯನಿಧಿ ಅವರ ಭಾಷಣದ ವಿಡಿಯೊ ಪ್ರಸಾರವಾಗುತ್ತಿದ್ದಂತೆ ಅವರ ವಿರುದ್ಧ ಟೀಕಾ ಪ್ರಹಾರ ನಡೆಸಿದ ಬಿಜೆಪಿ, ಡಿಎಂಕೆ ನಾಯಕ ನರಮೇಧಕ್ಕೆ ಕರೆ ನೀಡುತ್ತಿದ್ದಾರೆ ಎಂದು ಆರೋಪಿಸಿತು. ಇದಕ್ಕೆ ಉದಯನಿಧಿ, ಬಿಜೆಪಿಯದ್ದು “ಸುಳ್ಳು ನಿರೂಪಣೆ” ಎಂದು ತಳ್ಳಿಹಾಕಿದ್ದರು.

ಆದಾಗ್ಯೂ, ಬುಧವಾರ ನಡೆದ ಮಂತ್ರಿಮಂಡಲದ ಸಭೆಯಲ್ಲಿ ಮೋದಿ,ತಮ್ಮ ಸಚಿವರಲ್ಲಿ ಉದಯನಿಥಿ ಹೇಳಿಕೆಗೆ ತಕ್ಕ ಉತ್ತರ ನೀಡಬೇಕು ಎಂದು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:43 pm, Thu, 7 September 23

Follow Us
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ