AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಎಂಕೆಯಲ್ಲಿ ಅಪ್ಪ-ಮಗನ ದರ್ಬಾರ್? ಉದಯನಿಧಿ ಸ್ಟಾಲಿನ್​ಗೆ ಉಪಮುಖ್ಯಮಂತ್ರಿ ಎಂದು ಕರೆದ ಸಚಿವರು

ಉದಯನಿಧಿ ಸ್ಟಾಲಿನ್ ಅವರನ್ನು ಉಪಮುಖ್ಯಮಂತ್ರಿ ಎಂದು ಕರೆದ ಸಚಿವರು ನಂತರ ತಮ್ಮನ್ನು ತಾವು ಸರಿಪಡಿಸಿಕೊಂಡರು. ಆಗಸ್ಟ್ 19ರ ನಂತರವೇ ಉದಯನಿಧಿ ಸ್ಟಾಲಿನ್ ಅವರನ್ನು ಉಪಮುಖ್ಯಮಂತ್ರಿ ಎಂದು ಉಲ್ಲೇಖಿಸಬಹುದು ಎಂದು ಸಮಜಾಯಿಷಿ ನೀಡಿದರು.

ಡಿಎಂಕೆಯಲ್ಲಿ ಅಪ್ಪ-ಮಗನ ದರ್ಬಾರ್? ಉದಯನಿಧಿ ಸ್ಟಾಲಿನ್​ಗೆ ಉಪಮುಖ್ಯಮಂತ್ರಿ ಎಂದು ಕರೆದ ಸಚಿವರು
ಸ್ಟಾಲಿನ್
ಸುಷ್ಮಾ ಚಕ್ರೆ
|

Updated on: Aug 09, 2024 | 9:44 PM

Share

ಚೆನ್ನೈ: ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ರಾಜಾ ಕಣ್ಣಪ್ಪನ್ ಅವರು ಸಾರ್ವಜನಿಕ ಸಮಾರಂಭದಲ್ಲಿ ಸ್ಟಾಲಿನ್ ಕುಟುಂಬದ ಕುಡಿ ಉದಯನಿಧಿ ಸ್ಟಾಲಿನ್ ಅವರನ್ನು ಉಪಮುಖ್ಯಮಂತ್ರಿ ಎಂದು ಉಲ್ಲೇಖಿಸಿದ ನಂತರ ತಮಿಳುನಾಡು ರಾಜಕೀಯದಲ್ಲಿ ರಾಜ್ಯ ಯುವ ಕಲ್ಯಾಣ ಮತ್ತು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಶೀಘ್ರದಲ್ಲೇ ಉಪಮುಖ್ಯಮಂತ್ರಿ ಹುದ್ದೆಗೆ ಏರಿಸಬಹುದು ಎಂಬ ಊಹಾಪೋಹಗಳು ತುಂಬಿದೆ. ಆದರೆ, ತಕ್ಷಣವೇ ತಮ್ಮನ್ನು ತಾವು ಸರಿಪಡಿಸಿಕೊಂಡ ಅವರು, ಆಗಸ್ಟ್ 19ರ ನಂತರವೇ ಉದಯನಿಧಿ ಅವರನ್ನು ಉಪಮುಖ್ಯಮಂತ್ರಿ ಎಂದು ಉಲ್ಲೇಖಿಸಬಹುದು ಎಂದು ಸಲಹೆ ನೀಡಿದರು.

ಈ ಮೂಲಕ ಉದಯನಿಧಿ ಅವರನ್ನು ಶೀಘ್ರದಲ್ಲೇ ಉಪಮುಖ್ಯಮಂತ್ರಿಯಾಗಿ ಉನ್ನತೀಕರಿಸುವ ಸಾಧ್ಯತೆ ಇದೆ ಎಂಬ ಸ್ಪಷ್ಟ ಸೂಚನೆ ಸಿಕ್ಕಿದೆ.

ಇದನ್ನೂ ಓದಿ: ತಮಿಳುನಾಡನ್ನು ನಿರ್ಲಕ್ಷಿಸಲಾಗಿದೆ ಎಂಬ ಎಂಕೆ ಸ್ಟಾಲಿನ್ ಆರೋಪ ‘ಸತ್ಯಕ್ಕೆ ದೂರ’ವಾದುದು: ಕೇಂದ್ರ

ಮುಖ್ಯಮಂತ್ರಿ ಸ್ಟಾಲಿನ್ ಅಮೆರಿಕ ಪ್ರವಾಸ ಕೈಗೊಳ್ಳುವ ಮುನ್ನ ಅವರ ಪುತ್ರ ಉದಯನಿಧಿ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಲಾಗುವುದು ಎಂದು ಐಎಎನ್‌ಎಸ್ ಈ ಹಿಂದೆ ವರದಿ ಮಾಡಿತ್ತು. ಸ್ಟಾಲಿನ್ ಅವರು ಆಗಸ್ಟ್ 22ರಂದು ತಮ್ಮ ಯುಎಸ್ ಪ್ರವಾಸವನ್ನು ಪ್ರಾರಂಭಿಸುತ್ತಾರೆ.

ಉದಯನಿಧಿ ಅವರ ಬಗ್ಗೆ ಸ್ಟಾಲಿನ್ ಬಳಿ ಕೇಳಿದಾಗ ಸ್ಟಾಲಿನ್ ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಮ್ಮ ಮಗನನ್ನು ಉಪಮುಖ್ಯಮಂತ್ರಿ ಮಾಡುವ ಸಮಯ ಪಕ್ವವಾಗಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: ಪ್ರಧಾನಿಯವರೇ, ನಿಮ್ಮನ್ನು ಸೋಲಿಸಿದವರ ಮೇಲೆ ಸೇಡು ತೀರಿಸಿಕೊಳ್ಳಬೇಡಿ: ಸ್ಟಾಲಿನ್

2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ವರ್ಷಗಳಿಗಿಂತ ಕಡಿಮೆ ಸಮಯ ಉಳಿದಿರುವಾಗ, ಉದಯನಿಧಿ ಅವರನ್ನು ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡುವ ಬಗ್ಗೆ ಚರ್ಚೆ ಹೆಚ್ಚಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ