Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಅಮಲಿನಲ್ಲಿದ್ದ ವ್ಯಕ್ತಿ ಪತ್ನಿ ಜತೆ ಜಗಳವಾಡಿ ಬಂದು ಟ್ರಾನ್ಸ್​ಫಾರ್ಮರ್ ಹತ್ತಿ ಹೈ-ಟೆನ್ಷನ್ ತಂತಿ ಕಚ್ಚಿದ

ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಪತ್ನಿ ಬಳಿ ಜಗಳವಾಡಿಕೊಂಡು ಬಂದು ಟ್ರಾನ್ಸ್​ಫಾರ್ಮರ್ ಹತ್ತಿ ಹೈ ಟೆನ್ಷನ್ ತಂತಿಯನ್ನು ಕಚ್ಚಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಕುಡಿದ ಅಮಲಿನಲ್ಲಿದ್ದ ವ್ಯಕ್ತಿ ಪತ್ನಿ ಜತೆ ಜಗಳವಾಡಿ ಬಂದು ಟ್ರಾನ್ಸ್​ಫಾರ್ಮರ್ ಹತ್ತಿ ಹೈ-ಟೆನ್ಷನ್ ತಂತಿ ಕಚ್ಚಿದ
ಟ್ರಾನ್ಸ್​ಫಾರ್ಮರ್ ಹತ್ತಿದ ವ್ಯಕ್ತಿImage Credit source: India TV
Follow us
ನಯನಾ ರಾಜೀವ್
|

Updated on: Apr 06, 2023 | 9:49 AM

ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಪತ್ನಿ ಬಳಿ ಜಗಳವಾಡಿಕೊಂಡು ಬಂದು ಟ್ರಾನ್ಸ್​ಫಾರ್ಮರ್ ಹತ್ತಿ ಹೈ ಟೆನ್ಷನ್ ತಂತಿಯನ್ನು ಕಚ್ಚಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಚಿನ್ನಮಂಗೋಡು ನಿವಾಸಿ 33 ವರ್ಷದ ಧರ್ಮದುರೈ ಎಂಬಾತ ತನ್ನ ಪತ್ನಿ ಜಗಳವಾಡಿಕೊಂಡು ಹುಟ್ಟೂರು ರೆಡ್ಡಿಪಾಳ್ಯಕ್ಕೆ ತೆರಳಿದ್ದರಿಂದ ಮನನೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಧರ್ಮದುರೈ ತನ್ನ ಹೆಂಡತಿಯನ್ನು ಮರಳಿ ಕರೆತರಲು ಮಾವನ ವಿರುದ್ಧ ದೂರು ನೀಡಲು ಹಲವು ಬಾರಿ ಅರಂಬಕ್ಕಂ ಪೊಲೀಸರನ್ನು ಸಂಪರ್ಕಿಸಿದ್ದ.

ಬುಧವಾರ ಧರ್ಮದುರೈ ಅವರು ಮದ್ಯದ ಅಮಲಿನಲ್ಲಿ ಪೊಲೀಸ್ ಠಾಣೆಗೆ ಬಂದಿದ್ದರು, ಅಲ್ಲಿ ಅವರನ್ನು ಕಾಯುವ ಕೊಠಡಿಯಲ್ಲಿ ಕುಳಿತುಕೊಳ್ಳುವಂತೆ ಕೇಳಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಅವರು ಏಕಾಏಕಿ ಪೊಲೀಸ್ ಠಾಣೆ ಆವರಣದಿಂದ ಹೊರಬಂದು ಕಟ್ಟಡದ ಎದುರಿನ ಟ್ರಾನ್ಸ್‌ಫಾರ್ಮರ್‌ ಹತ್ತಿ ಹೈ-ಟೆನ್ಷನ್ ತಂತಿಯನ್ನು ಕಚ್ಚಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

ಮತ್ತಷ್ಟು ಓದಿ: Video Viral: ಪುಟ್ಟ ಸಹಾಯದ ಮೂಲಕ ಟ್ರಾಫಿಕ್ ಪೊಲೀಸರ ಮುಖದಲ್ಲಿ ನಗು ಮೂಡಿಸಿದ ವ್ಯಕ್ತಿ

ಜನರು ಮತ್ತು ಪೊಲೀಸರು ಯಾವುದೇ ದುಡುಕಿನ ನಿರ್ಧಾರವನ್ನು ತೆಗೆದುಕೊಳ್ಳದಂತೆ ಒತ್ತಾಯಿಸಿದರೂ ಧರ್ಮದುರೈ ಹೈಟೆನ್ಷನ್ ತಂತಿಯನ್ನು ಕಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳು ಧರ್ಮದುರೈ ಅವರನ್ನು ಎಳವೂರ್ ಆಸ್ಪತ್ರೆಗೆ ಕರೆದೊಯ್ದು ನಂತರ ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...