AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಲ್ಲಿ ಡಿ. 31ರವರೆಗೂ ಲಾಕ್​ಡೌನ್​; 15 ರಿಂದ ಮರೀನಾ ಬೀಚ್​ ಪ್ರವೇಶಕ್ಕೆ ಅನುಮತಿ, ಆದ್ರೆ ಷರತ್ತು ಅನ್ವಯ

ಡಿಸೆಂಬರ್​ 7ರಿಂದ ಪದವಿಪೂರ್ವ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಗತಿಗಳು ಪ್ರಾರಂಭವಾಗಲಿದೆ ಮತ್ತು ಡಿ.15ರ ನಂತರ ಪ್ರವಾಸಿ ತಾಣ ಮರೀನಾ ಬೀಚ್​ ಪ್ರವೇಶಕ್ಕೆ ಅನುಮತಿ ನೀಡಲಾಗುವುದು ಎಂದು ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ.

ತಮಿಳುನಾಡಲ್ಲಿ ಡಿ. 31ರವರೆಗೂ ಲಾಕ್​ಡೌನ್​; 15 ರಿಂದ ಮರೀನಾ ಬೀಚ್​ ಪ್ರವೇಶಕ್ಕೆ ಅನುಮತಿ, ಆದ್ರೆ ಷರತ್ತು ಅನ್ವಯ
ಮರೀನಾ ಬೀಚ್​ (ಸಾಂದರ್ಭಿಕ ಚಿತ್ರ)
Lakshmi Hegde
| Edited By: |

Updated on: Nov 30, 2020 | 12:04 PM

Share

ಚೆನ್ನೈ: ಬಹುತೇಕ ರಾಜ್ಯ ಸರ್ಕಾರಗಳು ಲಾಕ್​ಡೌನ್ ತೆರವುಗೊಳಿಸಿ ಅನ್​ಲಾಕ್​ ಹಂತಗಳಲ್ಲಿ ಒಂದೊಂದೇ ಚಟುವಟಿಕೆಗಳನ್ನು ಪ್ರಾರಂಭಿಸಿವೆ. ಆದರೆ ಕಂಟೇನ್​ಮೆಂಟ್ ವಲಯಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸ್ಥಳೀಯ ಆಡಳಿತಗಳಿಗೆ ಸೂಚನೆ ನೀಡಿವೆ. ಈ ಮಧ್ಯೆ, ತಮಿಳುನಾಡು ಸರ್ಕಾರ ಸದ್ಯ ಲಾಕ್​ಡೌನ್ ನಿರ್ಬಂಧವನ್ನು ತೆಗೆಯುವುದಿಲ್ಲ ಎಂದು ಹೇಳಿದೆ.

ತಮಿಳುನಾಡಿನಲ್ಲಿ ಡಿ. 31ರವರೆಗೂ ಲಾಕ್​ಡೌನ್​ ವಿಸ್ತರಿಸಿ ಮುಖ್ಯಮಂತ್ರಿ ಇ.ಕೆ. ಪಳಿನಿಸ್ವಾಮಿ ಆದೇಶ ಹೊರಡಿಸಿದ್ದಾರೆ. ಹಾಗೇ ಡಿಸೆಂಬರ್​ 7ರಿಂದ ಪದವಿಪೂರ್ವ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಗತಿಗಳು ಪ್ರಾರಂಭವಾಗಲಿದೆ ಮತ್ತು ಡಿ. 15ರ ನಂತರ ಪ್ರವಾಸಿ ತಾಣ ಮರೀನಾ ಬೀಚ್​ ಪ್ರವೇಶಕ್ಕೆ ಅನುಮತಿ ನೀಡಲಾಗುವುದು.

ಆದರೆ ದಿನದಲ್ಲಿ 200 ಜನರಷ್ಟೇ ಅಲ್ಲಿ ಸೇರಬಹುದು. ಹಾಗೇ, ಕ್ರೀಡಾಪಟುಗಳ ತರಬೇತಿಗಾಗಿ ಈಜುಕೊಳಗಳನ್ನು ಪ್ರಾರಂಭಿಸಲಾಗುವುದು ಎಂದು ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಆದರೆ ಮಾಸ್ಕ್​, ಸಾಮಾಜಿಕ ಅಂತರ ನಿಯಮಪಾಲನೆಯಂತಹ ಷರತ್ತುಗಳು ಕಡ್ಡಾಯವಾಗಿ ಅನ್ವಯಿಸುತ್ತವೆ ಎಂದು ಹೇಳಿದೆ.

ಒಂದು ದಿನದಲ್ಲಿ 9 ಸೋಂಕಿತರು ಸಾವು ತಮಿಳುನಾಡಿನಲ್ಲಿ ಭಾನುವಾರ ಒಂದೇ ದಿನ 1,459 ಹೊಸ ಕರೊನಾ ಪ್ರಕರಣಗಳು ಪತ್ತೆಯಾಗಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,80,505ಕ್ಕೆ ಏರಿಕೆಯಾಗಿದೆ.

ಅನ್​ಲಾಕ್​ಗೆ ಅವಕಾಶ ಕೊಟ್ಟಿರುವ ಕೇಂದ್ರ ಸರ್ಕಾರ, ನಿರ್ಧಾರವನ್ನು ಆಯಾ ರಾಜ್ಯಸರ್ಕಾರ, ಕೇಂದ್ರಾಡಳಿತ ಪ್ರದೇಶಗಳಿಗೇ ಬಿಟ್ಟಿದೆ. ಕರೊನಾ ಸೋಂಕು ಇನ್ನೂ ಪ್ರಸರಣ ಆಗುತ್ತಿರುವ ಹಿನ್ನೆಲೆಯಲ್ಲಿ ಕಂಟೇನ್​ಮೆಂಟ್ ವಲಯಗಳಲ್ಲಿ ರಾತ್ರಿ ಕರ್ಪ್ಯೂ ಸೇರಿ ಮತ್ತಿತರ ನಿರ್ಬಂಧಗಳನ್ನು ಹೇರಬಹುದು.

ಆದರೆ ಕಂಟೇನ್​ಮೆಂಟ್ ಝೋನ್​ಗಳನ್ನು ಹೊರತುಪಡಿಸಿ ಬೇರೆಕಡೆಯಲ್ಲೂ ಲಾಕ್​ಡೌನ್​ ವಿಸ್ತರಣೆ ಮಾಡುವುದಿದ್ದರೆ ನಮ್ಮನ್ನು ಸಂಪರ್ಕಿಸಿ, ವಿವರಣೆ ನೀಡಬೇಕು ಎಂದು ಗೃಹ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಸೋಂಕಿನಿಂದ ಬಿಜೆಪಿ ಶಾಸಕಿ ಸಾವು; ಪ್ರಧಾನಿ ನರೇಂದ್ರ ಮೋದಿ, ಸ್ಪೀಕರ್​ ಓಂ ಬಿರ್ಲಾ ಸಂತಾಪ

Follow Us
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?