AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಲ್ಲಿ ಡಿ. 31ರವರೆಗೂ ಲಾಕ್​ಡೌನ್​; 15 ರಿಂದ ಮರೀನಾ ಬೀಚ್​ ಪ್ರವೇಶಕ್ಕೆ ಅನುಮತಿ, ಆದ್ರೆ ಷರತ್ತು ಅನ್ವಯ

ಡಿಸೆಂಬರ್​ 7ರಿಂದ ಪದವಿಪೂರ್ವ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಗತಿಗಳು ಪ್ರಾರಂಭವಾಗಲಿದೆ ಮತ್ತು ಡಿ.15ರ ನಂತರ ಪ್ರವಾಸಿ ತಾಣ ಮರೀನಾ ಬೀಚ್​ ಪ್ರವೇಶಕ್ಕೆ ಅನುಮತಿ ನೀಡಲಾಗುವುದು ಎಂದು ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ.

ತಮಿಳುನಾಡಲ್ಲಿ ಡಿ. 31ರವರೆಗೂ ಲಾಕ್​ಡೌನ್​; 15 ರಿಂದ ಮರೀನಾ ಬೀಚ್​ ಪ್ರವೇಶಕ್ಕೆ ಅನುಮತಿ, ಆದ್ರೆ ಷರತ್ತು ಅನ್ವಯ
ಮರೀನಾ ಬೀಚ್​ (ಸಾಂದರ್ಭಿಕ ಚಿತ್ರ)
Lakshmi Hegde
| Edited By: ಸಾಧು ಶ್ರೀನಾಥ್​|

Updated on: Nov 30, 2020 | 12:04 PM

Share

ಚೆನ್ನೈ: ಬಹುತೇಕ ರಾಜ್ಯ ಸರ್ಕಾರಗಳು ಲಾಕ್​ಡೌನ್ ತೆರವುಗೊಳಿಸಿ ಅನ್​ಲಾಕ್​ ಹಂತಗಳಲ್ಲಿ ಒಂದೊಂದೇ ಚಟುವಟಿಕೆಗಳನ್ನು ಪ್ರಾರಂಭಿಸಿವೆ. ಆದರೆ ಕಂಟೇನ್​ಮೆಂಟ್ ವಲಯಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸ್ಥಳೀಯ ಆಡಳಿತಗಳಿಗೆ ಸೂಚನೆ ನೀಡಿವೆ. ಈ ಮಧ್ಯೆ, ತಮಿಳುನಾಡು ಸರ್ಕಾರ ಸದ್ಯ ಲಾಕ್​ಡೌನ್ ನಿರ್ಬಂಧವನ್ನು ತೆಗೆಯುವುದಿಲ್ಲ ಎಂದು ಹೇಳಿದೆ.

ತಮಿಳುನಾಡಿನಲ್ಲಿ ಡಿ. 31ರವರೆಗೂ ಲಾಕ್​ಡೌನ್​ ವಿಸ್ತರಿಸಿ ಮುಖ್ಯಮಂತ್ರಿ ಇ.ಕೆ. ಪಳಿನಿಸ್ವಾಮಿ ಆದೇಶ ಹೊರಡಿಸಿದ್ದಾರೆ. ಹಾಗೇ ಡಿಸೆಂಬರ್​ 7ರಿಂದ ಪದವಿಪೂರ್ವ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಗತಿಗಳು ಪ್ರಾರಂಭವಾಗಲಿದೆ ಮತ್ತು ಡಿ. 15ರ ನಂತರ ಪ್ರವಾಸಿ ತಾಣ ಮರೀನಾ ಬೀಚ್​ ಪ್ರವೇಶಕ್ಕೆ ಅನುಮತಿ ನೀಡಲಾಗುವುದು.

ಆದರೆ ದಿನದಲ್ಲಿ 200 ಜನರಷ್ಟೇ ಅಲ್ಲಿ ಸೇರಬಹುದು. ಹಾಗೇ, ಕ್ರೀಡಾಪಟುಗಳ ತರಬೇತಿಗಾಗಿ ಈಜುಕೊಳಗಳನ್ನು ಪ್ರಾರಂಭಿಸಲಾಗುವುದು ಎಂದು ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಆದರೆ ಮಾಸ್ಕ್​, ಸಾಮಾಜಿಕ ಅಂತರ ನಿಯಮಪಾಲನೆಯಂತಹ ಷರತ್ತುಗಳು ಕಡ್ಡಾಯವಾಗಿ ಅನ್ವಯಿಸುತ್ತವೆ ಎಂದು ಹೇಳಿದೆ.

ಒಂದು ದಿನದಲ್ಲಿ 9 ಸೋಂಕಿತರು ಸಾವು ತಮಿಳುನಾಡಿನಲ್ಲಿ ಭಾನುವಾರ ಒಂದೇ ದಿನ 1,459 ಹೊಸ ಕರೊನಾ ಪ್ರಕರಣಗಳು ಪತ್ತೆಯಾಗಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,80,505ಕ್ಕೆ ಏರಿಕೆಯಾಗಿದೆ.

ಅನ್​ಲಾಕ್​ಗೆ ಅವಕಾಶ ಕೊಟ್ಟಿರುವ ಕೇಂದ್ರ ಸರ್ಕಾರ, ನಿರ್ಧಾರವನ್ನು ಆಯಾ ರಾಜ್ಯಸರ್ಕಾರ, ಕೇಂದ್ರಾಡಳಿತ ಪ್ರದೇಶಗಳಿಗೇ ಬಿಟ್ಟಿದೆ. ಕರೊನಾ ಸೋಂಕು ಇನ್ನೂ ಪ್ರಸರಣ ಆಗುತ್ತಿರುವ ಹಿನ್ನೆಲೆಯಲ್ಲಿ ಕಂಟೇನ್​ಮೆಂಟ್ ವಲಯಗಳಲ್ಲಿ ರಾತ್ರಿ ಕರ್ಪ್ಯೂ ಸೇರಿ ಮತ್ತಿತರ ನಿರ್ಬಂಧಗಳನ್ನು ಹೇರಬಹುದು.

ಆದರೆ ಕಂಟೇನ್​ಮೆಂಟ್ ಝೋನ್​ಗಳನ್ನು ಹೊರತುಪಡಿಸಿ ಬೇರೆಕಡೆಯಲ್ಲೂ ಲಾಕ್​ಡೌನ್​ ವಿಸ್ತರಣೆ ಮಾಡುವುದಿದ್ದರೆ ನಮ್ಮನ್ನು ಸಂಪರ್ಕಿಸಿ, ವಿವರಣೆ ನೀಡಬೇಕು ಎಂದು ಗೃಹ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಸೋಂಕಿನಿಂದ ಬಿಜೆಪಿ ಶಾಸಕಿ ಸಾವು; ಪ್ರಧಾನಿ ನರೇಂದ್ರ ಮೋದಿ, ಸ್ಪೀಕರ್​ ಓಂ ಬಿರ್ಲಾ ಸಂತಾಪ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ