AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu Fire Accident: ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ; ಮೃತರ ಸಂಖ್ಯೆ 20ಕ್ಕೆ ಏರಿಕೆ

ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಇಡೀ ಕಾರ್ಖಾನೆಯೇ ಹೊತ್ತಿ ಉರಿದಿದೆ. ಸ್ಥಳದಲ್ಲೆ ಕೆಲ ಕಾರ್ಮಿಕರು ಮೃತಪಟ್ಟಿದ್ದರು. ಇನ್ನು ಕೆಲವರನ್ನು ಆಸ್ಪತ್ರೆ ದಾಖಲು ಮಾಡಲಾಗಿತ್ತು. ಇದೀಗ ಮೃತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

Tamil Nadu Fire Accident: ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ; ಮೃತರ ಸಂಖ್ಯೆ 20ಕ್ಕೆ ಏರಿಕೆ
ತಮಿಳುನಾಡು ಪಟಾಕಿ ಕಾರ್ಖಾನೆ ಸ್ಫೋಟದ ದೃಶ್ಯ
shruti hegde
| Edited By: ಸಾಧು ಶ್ರೀನಾಥ್​|

Updated on: Feb 15, 2021 | 12:36 PM

Share

ತಮಿಳುನಾಡು: ವಿರುಧು​ನಗರದಲ್ಲಿರುವ ಫೆ.12 ರಂದು ಪಟಾಕಿ ಫ್ಯಾಕ್ಟರಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಸ್ಥಳದಲ್ಲೇ ಅನೇಕ ಕಾರ್ಮಿಕರು ಸಜೀವ ದಹನವಾಗಿದ್ದರು. ಅನೇಕರು ಗಾಯಗೊಂಡಿದ್ದರು. ಇದೀಗ ಮೃತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಮೃತರ ಕುಟುಂಬಸ್ಥರು ಹಾಗೂ ಗಾಯಾಳುಗಳಿಗೆ ಪರಿಹಾರ ಘೋಷಣೆ ಮಾಡಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಪರಿಹಾರವಾಗಿ ಹಣ ನೀಡಲು ಮುಂದಾಗಿದೆ. ಮೃತರ ಕುಟುಂಬಸ್ಥರಿಗೆ ಪರಿಹಾರವಾಗಿ, ಪಿಎಂ ಫಂಡ್​ನಿಂದ ತಲಾ ₹2 ಲಕ್ಷ, ತಮಿಳುನಾಡು ಸರ್ಕಾರದಿಂದ ₹3 ಲಕ್ಷ, ಗಾಯಾಳುಗಳಿಗೆ ಪಿಎಂ ಫಂಡ್‌ನಿಂದ ₹50 ಸಾವಿರ ಪರಿಹಾರ ಹಾಗೂ ತಮಿಳು ನಾಡು ಸರ್ಕಾರ ₹1 ಲಕ್ಷ ನೀಡಿದೆ.

ಇದನ್ನೂ ಓದಿ: ತಮಿಳುನಾಡು ಪಟಾಕಿ ಕಾರ್ಖಾನೆ ಸ್ಫೋಟ: ಮೃತರ ಸಂಖ್ಯೆ 15ಕ್ಕೆ ಏರಿಕೆ, ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆ ಆಗಿತ್ತು. ಈ ಘಟನೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್​ ಮಾಡಿ ಸಂತಾಪ ಸೂಚಿಸಿದ್ದರು. ಚೆನ್ನೈನಿಂದ 500 ಕಿ.ಮೀ. ದೂರದಲ್ಲಿರುವ ವಿರುಧು​ನಗರದಲ್ಲಿ ಮಧ್ಯಾಹ್ನ 1:30ರ ಸುಮಾರಿಗೆ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿತ್ತು.

ಸ್ಫೋಟದ ರಭಸಕ್ಕೆ ಸ್ಥಳದಲ್ಲೇ 6 ಜನರು ಸಜೀವ ದಹನವಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಹೆಚ್ಚುವರಿಯಾಗಿ 9 ಜನರು ಮೃತಪಟ್ಟಿದ್ದರು. ಇದೀಗ ಮೃತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ