AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ಸಿಎಂ ಆಗುವುದು ಖಚಿತ; ಕೊನೆಗೂ ಟಿವಿಕೆಗೆ ವಿಸಿಕೆ, ಮುಸ್ಲಿಂ ಲೀಗ್ ಬೆಂಬಲ

ತಮಿಳುನಾಡಿನಲ್ಲಿ ಮೂರ್ನಾಲ್ಕು ದಿನಗಳಿಂದ ಉಂಟಾಗಿದ್ದ ಸರ್ಕಾರ ರಚನೆಯ ಬಿಕ್ಕಟ್ಟು ಕೊನೆಗೂ ಬಗೆಹರಿದಂತಾಗಿದೆ. ವಿಜಯ್ ನೇತೃತ್ವದ ಟಿವಿಕೆಗೆ ವಿಸಿಕೆ ಬೇಷರತ್ ಬೆಂಬಲ ಘೋಷಿಸಿದೆ. ಇದರ ಜೊತೆ ಐಯುಎಂಎಲ್ ಕೂಡ ಟಿವಿಕೆಗೆ ಬೆಂಬಲ ಘೋಷಿಸಿದೆ. ಇದರಿಂದಾಗಿ ತಮಿಳುನಾಡಿನಲ್ಲಿ ವಿಜಯ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಖಚಿತವಾಗಿದೆ. ಈಗಾಗಲೇ ಟಿವಿಕೆಗೆ ವಿಸಿಕೆ ತನ್ನ ಬೆಂಬಲದ ಪತ್ರವನ್ನು ನೀಡಿದ್ದು, ಇಂದು ಸಂಜೆ ಪತ್ರಿಕಾಗೋಷ್ಠಿ ನಡೆಸಿ ಅಧಿಕೃತವಾಗಿ ಮಾಹಿತಿ ನೀಡಲಿದೆ.

ವಿಜಯ್ ಸಿಎಂ ಆಗುವುದು ಖಚಿತ; ಕೊನೆಗೂ ಟಿವಿಕೆಗೆ ವಿಸಿಕೆ, ಮುಸ್ಲಿಂ ಲೀಗ್ ಬೆಂಬಲ
Tvk And Vck Leaders
ಸುಷ್ಮಾ ಚಕ್ರೆ
|

Updated on:May 09, 2026 | 5:22 PM

Share

ಚೆನ್ನೈ, ಮೇ 9: ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಸರ್ಕಸ್ ಬಗೆಹರಿದಂತಾಗಿದೆ. ಸರ್ಕಾರ ರಚಿಸಲು ಟಿವಿಕೆಗೆ (TVK) ವಿಸಿಕೆ ನಾಯಕ ತಿರುಮಾವಲವನ್ ಬೆಂಬಲ ಪತ್ರವನ್ನು ನೀಡಿದ್ದಾರೆ. ಹಾಗೇ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಕೂಡ ಬೇಷರತ್ತಾದ ಬೆಂಬಲ ನೀಡಿದೆ.ಇದರಿಂದ ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಹಾದಿ ಸುಗಮವಾದಂತಾಗಿದೆ.

ಬೆಳಗ್ಗೆಯಿಂದ ಟಿವಿಕೆ ಮತ್ತು ವಿಸಿಕೆ ನಾಯಕರು ಪ್ರತ್ಯೇಕವಾಗಿ ತಮ್ಮ ಶಾಸಕರ ಜೊತೆ ಸಭೆ ನಡೆಸಿದ್ದರು. ವಿಸಿಕೆ ಟಿವಿಕೆಗೆ ಬೆಂಬಲ ನೀಡಿರುವುದರಿಂದಾಗಿ ವಿಜಯ್ ಮುಖ್ಯಮಂತ್ರಿಯಾಗುವುದು ಖಚಿತವಾಗಿದೆ. ಇಂದು ಸಂಜೆ 6 ಗಂಟೆಗೆ ಪತ್ರಿಕಾ ಹೇಳಿಕೆ ಪ್ರಕಟಿಸಲಾಗುವುದು. ಈಗಾಗಲೇ ಟಿವಿಕೆ ಕಾರ್ಯಕರ್ತರು ಸಂಭ್ರಮಾಚರಣೆ ಶುರು ಮಾಡಿದ್ದಾರೆ.

ಟಿವಿಕೆ ನಾಯಕ ಅಧವ್ ಅರ್ಜುನ ಈ ಬಗ್ಗೆ ಮಾಹಿತಿ ನೀಡಿದ್ದು, ವಿಸಿಕೆ ವಿಜಯ್ ಅವರ ಪಕ್ಷವನ್ನು ಬೆಂಬಲಿಸಲು ನಿರ್ಧರಿಸಿದೆ ಎಂದು ಹೇಳಿದ್ದಾರೆ. ಸರ್ಕಾರ ರಚನೆ ಕುರಿತು ವಿಸಿಕೆ ಬೆಂಬಲ ನೀಡುವ ಪತ್ರವನ್ನೂ ಟಿವಿಕೆಗೆ ನೀಡಿದೆ. ಇದಕ್ಕಾಗಿ ಟಿವಿಕೆ ನಾಯಕ ಕಾಂಗ್ರೆಸ್ ಮತ್ತು ಎಡ ಪಕ್ಷಗಳ ಬೆಂಬಲಕ್ಕಾಗಿ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಟಿವಿಕೆ 234 ಸದಸ್ಯರ ಸದನದಲ್ಲಿ 108 ಸ್ಥಾನಗಳನ್ನು ಗೆದ್ದಿತು. ಡಿಎಂಕೆ 59 ಸ್ಥಾನಗಳನ್ನು, ಎಐಎಡಿಎಂಕೆ 47, ಪಿಎಂಕೆ 4, ಐಯುಎಂಎಲ್ 2, ಸಿಪಿಐ 2 ಮತ್ತು ಸಿಪಿಐ(ಎಂ) 2 ಸ್ಥಾನಗಳನ್ನು ಗೆದ್ದರೆ, ಬಿಜೆಪಿ, ಡಿಎಂಡಿಕೆ ಮತ್ತು ಎಎಂಎಂಕೆ ತಲಾ ಒಂದು ಸ್ಥಾನವನ್ನು ಗೆದ್ದವು. ಕಾಂಗ್ರೆಸ್ ನಂತರ ಟಿವಿಕೆಗೆ ಬೆಂಬಲ ನೀಡಿತು. ಇದೀಗ ಸಿಪಿಎಂ, ಸಿಪಿಐ, ವಿಸಿಕೆ ಹಾಗೂ ಮುಸ್ಲಿಂ ಲೀಗ್ ಕೂಡ ಟಿವಿಕೆಗೆ ಬೆಂಬಲ ಘೋಷಿಸಿರುವುದರಿಂದ ಸರ್ಕಾರ ರಚನೆಗೆ ಬೇಕಾದ ಬಹುಮತ ಸಿಕ್ಕಂತಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:17 pm, Sat, 9 May 26

Follow Us
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು