AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ನೂತನ ಸಚಿವ ಸಂಪುಟದಲ್ಲಿ ಗಾಂಧಿ ಮತ್ತು ನೆಹರು ಹೆಸರು ಸೂಚಿಸಿದ ಎಂ.ಕೆ ಸ್ಟಾಲಿನ್

ಎಂ.ಕೆ ಸ್ಟಾಲಿನ್​ ಅವರು ಮುನ್ಸಿಪಲ್​ ಆಡಳಿತ ಸಚಿವರಾಗಿ ಹಾಗೂ ನಗರ ಮತ್ತು ನೀರು ಸರಬರಾಜಿನ ಉಸ್ತುವಾರಿ ಸಚಿವರಾಗಿ ಕೆ.ಎನ್​ ನೆಹರೂ ಅವರ ಹೆಸರನ್ನು ಸೂಚಿಸಿದ್ದಾರೆ. ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಗೆ ಮತ್ತೋರ್ವ ಮಂತ್ರಿ ಆರ್​. ಗಾಂಧಿ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ.

ತಮಿಳುನಾಡಿನ ನೂತನ ಸಚಿವ ಸಂಪುಟದಲ್ಲಿ ಗಾಂಧಿ ಮತ್ತು ನೆಹರು ಹೆಸರು ಸೂಚಿಸಿದ ಎಂ.ಕೆ ಸ್ಟಾಲಿನ್
ಎಂ.ಕೆ.ಸ್ಟಾಲಿನ್​
shruti hegde
| Edited By: |

Updated on:May 07, 2021 | 2:32 PM

Share

ದೆಹಲಿ: ಎಂ.ಕೆ ಸ್ಟಾಲಿನ್​ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಮೇ 7ರಂದು (ಶುಕ್ರವಾರ) ಪ್ರಮಾಣವಚನ ಸ್ವೀಕರಿಸಲು ಸಜ್ಜಾಗುತ್ತಿದ್ದಂತೆಯೇ, ಸಚಿವ ಸಂಪುಟದಲ್ಲಿ ಗಾಂಧಿ ಅವರ ಜೊತೆಗೆ ನೆಹರೂ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸ್ಟಾಲಿನ್​ ಘೋಷಿಸಿದ ನೂತನ ಕ್ಯಾಬಿನೇಟ್​ನ 34 ಸದಸ್ಯರಲ್ಲಿ ಇದೀಗ ಗಾಂಧಿ ಮತ್ತು ನೆಹರೂ ಅವರ ಹೆಸರೂ ಕೇಳಿ ಬಂದಿದೆ.

ಮುನ್ಸಿಪಲ್​ ಆಡಳಿತ ಸಚಿವರಾಗಿ ಹಾಗೂ ನಗರ ಮತ್ತು ನೀರು ಸರಬರಾಜಿನ ಉಸ್ತುವಾರಿ ಸಚಿವರಾಗಿ ಕೆ.ಎನ್​ ನೆಹರೂ ಅವರ ಹೆಸರನ್ನು ಸ್ಟಾಲಿನ್​ ಸೂಚಿಸಿದ್ದಾರೆ. ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಗೆ ಮತ್ತೋರ್ವ ಮಂತ್ರಿ ಆರ್​. ಗಾಂಧಿ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ.

ಆರ್. ಗಾಂಧಿ ಮತ್ತು ನೆಹರೂ ಅವರ ಮೇಲೆ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಆರೋಪಗಳಿದ್ದು, ಪ್ರಮಾಣವಚನ ಸ್ವೀಕಾರ ಮಾಡುವ ಮೊದಲು ನ್ಯಾಯಾಲಯ ಈ ಕುರಿತಂತೆ ಆರೋಪಗಳನ್ನು ರದ್ದುಗೊಳಿಸಿದೆ. ಆರ್​. ಗಾಂಧಿ ಅವರು ರಾಣಿಪೇಟೆ ಕ್ಷೇತ್ರದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಗೆ ನಾಲ್ಕು ಬಾರಿ ಶಾಸಕರಾಗಿರುತ್ತಾರೆ. ಪಕ್ಷದ ಹಿರಿಯ ನಾಯಕ ಕೆ.ಎನ್​ ನೆಹರೂ ಅವರು ತಿರುಚಿ ಪಶ್ಚಿಮ ಕ್ಚೇತ್ರದ ಶಾಸಕರಾಗಿದ್ದರು.

ಇದನ್ನೂ ಓದಿ: MK Stalin Oath taking: ತಮಿಳುನಾಡು ಮುಖ್ಯಮಂತ್ರಿಯಾಗಿ ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್​ ಪ್ರಮಾಣ ವಚನ ಸ್ವೀಕಾರ

Published On - 2:17 pm, Fri, 7 May 21

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ