AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೊಮೆಟೊ ದರ ಏರಿಕೆ; ಎಫ್‌ಎಫ್‌ಒಗಳಲ್ಲಿ ಸಬ್ಸಿಡಿ ದರದಲ್ಲಿ ಮಾರಾಟ ಮಾಡಲು ನಿರ್ಧರಿಸಿದ ತಮಿಳುನಾಡು ಸರ್ಕಾರ

ಎಲ್ಲಾ ತರಕಾರಿಗಳ ಬೆಲೆ ಏರಿಕೆಯನ್ನು ನಿಯಂತ್ರಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಅಗತ್ಯಕ್ಕೆ ತಕ್ಕಂತೆ ಹೊರರಾಜ್ಯಗಳಿಂದ ಟೊಮೆಟೊ ಖರೀದಿಗೆ ಕ್ರಮಕೈಗೊಳ್ಳಲಾಗುವುದು. ತರಕಾರಿ ಬೆಲೆ ಏರಿಕೆ ಮುಂದುವರಿದರೆ ಪಡಿತರ ಅಂಗಡಿಗಳಲ್ಲೂ ಕಡಿಮೆ ಬೆಲೆಗೆ ತರಕಾರಿ ಮಾರಲು ಸಿದ್ಧ ಎಂದ ತಮಿಳುನಾಡು ಸಚಿವರು.

ಟೊಮೆಟೊ ದರ ಏರಿಕೆ; ಎಫ್‌ಎಫ್‌ಒಗಳಲ್ಲಿ ಸಬ್ಸಿಡಿ ದರದಲ್ಲಿ ಮಾರಾಟ ಮಾಡಲು ನಿರ್ಧರಿಸಿದ ತಮಿಳುನಾಡು ಸರ್ಕಾರ
ಟೊಮೆಟೊ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jun 28, 2023 | 4:04 PM

Share

ಚೆನ್ನೈ: ಹೆಚ್ಚುತ್ತಿರುವ ಬೆಲೆಯನ್ನು ನಿಯಂತ್ರಿಸುವುದಕ್ಕಾಗಿ ತಮಿಳುನಾಡಿನಾದ್ಯಂತ ರಾಜ್ಯ ಸರ್ಕಾರ ನಡೆಸುತ್ತಿರುವ ಫಾರ್ಮ್ ಫ್ರೆಶ್ ಔಟ್‌ಲೆಟ್‌ಗಳಲ್ಲಿ (FFO) ಟೊಮೆಟೊ (tomatoes) ಮಾರಾಟ ಮಾಡಲು ತಮಿಳುನಾಡು (Tamil Nadu) ಸರ್ಕಾರ ಕ್ರಮ ಕೈಗೊಂಡಿದೆ. ಬಡ ಮತ್ತು ಮಧ್ಯಮ ವರ್ಗದ ಜನರಿಗೆ ತೊಂದರೆಯುಂಟಾಗದಂತ ಟೊಮೆಟೊವನ್ನು ಎಫ್‌ಎಫ್‌ಒಗಳಲ್ಲಿ ಕೆಜಿಗೆ 60 ರೂ.ಗೆ ಮಾರಾಟ ಮಾಡಲಾಗುವುದು. ತಮಿಳುನಾಡಿನಲ್ಲಿ ಸಾಮಾನ್ಯ ಖರೀದಿಗಿಂತ ಶೇ.15ರಷ್ಟು ಹೆಚ್ಚು ಟೊಮೆಟೊ ಖರೀದಿಸಲಾಗಿದೆ ಎಂದು ತಮಿಳುನಾಡಿನ ಸಹಕಾರ, ಆಹಾರ ಮತ್ತು ಗ್ರಾಹಕ ರಕ್ಷಣಾ ಇಲಾಖೆ ಸಚಿವ ಪೆರಿಯಕರುಪ್ಪನ್ ಹೇಳಿದ್ದಾರೆ. ತಮಿಳುನಾಡಿನ 62 ಕೇಂದ್ರಗಳಲ್ಲಿ ಸಬ್ಸಿಡಿ ದರದಲ್ಲಿ ಟೊಮೆಟೊ ಮಾರಾಟವಾಗಲಿದೆ.

ಎಲ್ಲಾ ತರಕಾರಿಗಳ ಬೆಲೆ ಏರಿಕೆಯನ್ನು ನಿಯಂತ್ರಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದ ಸಚಿವರು ಅಗತ್ಯಕ್ಕೆ ತಕ್ಕಂತೆ ಹೊರರಾಜ್ಯಗಳಿಂದ ಟೊಮೆಟೊ ಖರೀದಿಗೆ ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ. ತರಕಾರಿ ಬೆಲೆ ಏರಿಕೆ ಮುಂದುವರಿದರೆ ಪಡಿತರ ಅಂಗಡಿಗಳಲ್ಲೂ ಕಡಿಮೆ ಬೆಲೆಗೆ ತರಕಾರಿ ಮಾರಲು ಸಿದ್ಧ. ಇನ್ನು 3ರಿಂದ 4 ದಿನಗಳಲ್ಲಿ ಟೊಮೆಟೊ ಬೆಲೆ ಸಂಪೂರ್ಣ ಇಳಿಕೆಯಾಗುವ ನಿರೀಕ್ಷೆ ಇದೆ ಎಂದು ಅವರು ಹೇಳಿದ್ದಾರೆ.

ಏತನ್ಮಧ್ಯೆ, ಕಳೆದ ಕೆಲವು ದಿನಗಳಿಂದ ಕೆಜಿಗೆ 100 ರೂ.ಗೆ ಮಾರಾಟವಾಗುತ್ತಿದ್ದ ಟೊಮೆಟೊ ಬೆಲೆ ಬುಧವಾರ ಚೆನ್ನೈನ ಕೊಯಂಬೆಡು ಮಾರುಕಟ್ಟೆ ಮತ್ತು ಇತರ ಚಿಲ್ಲರೆ ಅಂಗಡಿಗಳಲ್ಲಿ ಕೆಜಿಗೆ 10 ರೂ.ಇಳಿಕೆ ಆಗಿದೆ.

ಇದನ್ನೂ ಓದಿ: ಟೊಮೆಟೊ ಕೆಚಪ್ ತಿನ್ನುವುದನ್ನು ಇಂದೇ ನಿಲ್ಲಿಸಿ! ಪೌಷ್ಟಿಕ ತಜ್ಞರು ಏನು ಹೇಳುತ್ತಾರೆ ನೋಡಿ

ಟೊಮೆಟೊ ಬೆಲೆಯಲ್ಲಿ ಭಾರೀ ಏರಿಕೆ ಬಗ್ಗೆ ಮಾತನಾಡಿದ  ಸಗಟು ವ್ಯಾಪಾರಿಗಳು, ಮಳೆಯಿಂದಾಗಿ ಟೊಮೆಟೊ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಹೇಳಿದ್ದಾರೆ .ಆಂಧ್ರ ಮತ್ತು ಕರ್ನಾಟಕದಿಂದ ವಿಶೇಷವಾಗಿ ಆಂಧ್ರಪ್ರದೇಶದ ಮದನಪಲ್ಲಿ ಟೊಮೆಟೊ ಮಾರುಕಟ್ಟೆಯಿಂದ ಪೂರೈಕೆಯಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ. ಇದರಿಂದ ಶುಂಠಿ, ಬೇಳೆ ಸೇರಿದಂತೆ ಹಲವು ತರಕಾರಿಗಳ ಬೆಲೆ ದುಪ್ಪಟ್ಟಾಗಿದೆ. ಉದಾಹರಣೆಗೆ ಶುಂಠಿ ಕೆಜಿಗೆ 300 ರೂ.ಗೆ ಮಾರಾಟವಾಗುತ್ತಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ