AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೊಮೆಟೊ ದರ ಏರಿಕೆ; ಎಫ್‌ಎಫ್‌ಒಗಳಲ್ಲಿ ಸಬ್ಸಿಡಿ ದರದಲ್ಲಿ ಮಾರಾಟ ಮಾಡಲು ನಿರ್ಧರಿಸಿದ ತಮಿಳುನಾಡು ಸರ್ಕಾರ

ಎಲ್ಲಾ ತರಕಾರಿಗಳ ಬೆಲೆ ಏರಿಕೆಯನ್ನು ನಿಯಂತ್ರಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಅಗತ್ಯಕ್ಕೆ ತಕ್ಕಂತೆ ಹೊರರಾಜ್ಯಗಳಿಂದ ಟೊಮೆಟೊ ಖರೀದಿಗೆ ಕ್ರಮಕೈಗೊಳ್ಳಲಾಗುವುದು. ತರಕಾರಿ ಬೆಲೆ ಏರಿಕೆ ಮುಂದುವರಿದರೆ ಪಡಿತರ ಅಂಗಡಿಗಳಲ್ಲೂ ಕಡಿಮೆ ಬೆಲೆಗೆ ತರಕಾರಿ ಮಾರಲು ಸಿದ್ಧ ಎಂದ ತಮಿಳುನಾಡು ಸಚಿವರು.

ಟೊಮೆಟೊ ದರ ಏರಿಕೆ; ಎಫ್‌ಎಫ್‌ಒಗಳಲ್ಲಿ ಸಬ್ಸಿಡಿ ದರದಲ್ಲಿ ಮಾರಾಟ ಮಾಡಲು ನಿರ್ಧರಿಸಿದ ತಮಿಳುನಾಡು ಸರ್ಕಾರ
ಟೊಮೆಟೊ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jun 28, 2023 | 4:04 PM

Share

ಚೆನ್ನೈ: ಹೆಚ್ಚುತ್ತಿರುವ ಬೆಲೆಯನ್ನು ನಿಯಂತ್ರಿಸುವುದಕ್ಕಾಗಿ ತಮಿಳುನಾಡಿನಾದ್ಯಂತ ರಾಜ್ಯ ಸರ್ಕಾರ ನಡೆಸುತ್ತಿರುವ ಫಾರ್ಮ್ ಫ್ರೆಶ್ ಔಟ್‌ಲೆಟ್‌ಗಳಲ್ಲಿ (FFO) ಟೊಮೆಟೊ (tomatoes) ಮಾರಾಟ ಮಾಡಲು ತಮಿಳುನಾಡು (Tamil Nadu) ಸರ್ಕಾರ ಕ್ರಮ ಕೈಗೊಂಡಿದೆ. ಬಡ ಮತ್ತು ಮಧ್ಯಮ ವರ್ಗದ ಜನರಿಗೆ ತೊಂದರೆಯುಂಟಾಗದಂತ ಟೊಮೆಟೊವನ್ನು ಎಫ್‌ಎಫ್‌ಒಗಳಲ್ಲಿ ಕೆಜಿಗೆ 60 ರೂ.ಗೆ ಮಾರಾಟ ಮಾಡಲಾಗುವುದು. ತಮಿಳುನಾಡಿನಲ್ಲಿ ಸಾಮಾನ್ಯ ಖರೀದಿಗಿಂತ ಶೇ.15ರಷ್ಟು ಹೆಚ್ಚು ಟೊಮೆಟೊ ಖರೀದಿಸಲಾಗಿದೆ ಎಂದು ತಮಿಳುನಾಡಿನ ಸಹಕಾರ, ಆಹಾರ ಮತ್ತು ಗ್ರಾಹಕ ರಕ್ಷಣಾ ಇಲಾಖೆ ಸಚಿವ ಪೆರಿಯಕರುಪ್ಪನ್ ಹೇಳಿದ್ದಾರೆ. ತಮಿಳುನಾಡಿನ 62 ಕೇಂದ್ರಗಳಲ್ಲಿ ಸಬ್ಸಿಡಿ ದರದಲ್ಲಿ ಟೊಮೆಟೊ ಮಾರಾಟವಾಗಲಿದೆ.

ಎಲ್ಲಾ ತರಕಾರಿಗಳ ಬೆಲೆ ಏರಿಕೆಯನ್ನು ನಿಯಂತ್ರಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದ ಸಚಿವರು ಅಗತ್ಯಕ್ಕೆ ತಕ್ಕಂತೆ ಹೊರರಾಜ್ಯಗಳಿಂದ ಟೊಮೆಟೊ ಖರೀದಿಗೆ ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ. ತರಕಾರಿ ಬೆಲೆ ಏರಿಕೆ ಮುಂದುವರಿದರೆ ಪಡಿತರ ಅಂಗಡಿಗಳಲ್ಲೂ ಕಡಿಮೆ ಬೆಲೆಗೆ ತರಕಾರಿ ಮಾರಲು ಸಿದ್ಧ. ಇನ್ನು 3ರಿಂದ 4 ದಿನಗಳಲ್ಲಿ ಟೊಮೆಟೊ ಬೆಲೆ ಸಂಪೂರ್ಣ ಇಳಿಕೆಯಾಗುವ ನಿರೀಕ್ಷೆ ಇದೆ ಎಂದು ಅವರು ಹೇಳಿದ್ದಾರೆ.

ಏತನ್ಮಧ್ಯೆ, ಕಳೆದ ಕೆಲವು ದಿನಗಳಿಂದ ಕೆಜಿಗೆ 100 ರೂ.ಗೆ ಮಾರಾಟವಾಗುತ್ತಿದ್ದ ಟೊಮೆಟೊ ಬೆಲೆ ಬುಧವಾರ ಚೆನ್ನೈನ ಕೊಯಂಬೆಡು ಮಾರುಕಟ್ಟೆ ಮತ್ತು ಇತರ ಚಿಲ್ಲರೆ ಅಂಗಡಿಗಳಲ್ಲಿ ಕೆಜಿಗೆ 10 ರೂ.ಇಳಿಕೆ ಆಗಿದೆ.

ಇದನ್ನೂ ಓದಿ: ಟೊಮೆಟೊ ಕೆಚಪ್ ತಿನ್ನುವುದನ್ನು ಇಂದೇ ನಿಲ್ಲಿಸಿ! ಪೌಷ್ಟಿಕ ತಜ್ಞರು ಏನು ಹೇಳುತ್ತಾರೆ ನೋಡಿ

ಟೊಮೆಟೊ ಬೆಲೆಯಲ್ಲಿ ಭಾರೀ ಏರಿಕೆ ಬಗ್ಗೆ ಮಾತನಾಡಿದ  ಸಗಟು ವ್ಯಾಪಾರಿಗಳು, ಮಳೆಯಿಂದಾಗಿ ಟೊಮೆಟೊ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಹೇಳಿದ್ದಾರೆ .ಆಂಧ್ರ ಮತ್ತು ಕರ್ನಾಟಕದಿಂದ ವಿಶೇಷವಾಗಿ ಆಂಧ್ರಪ್ರದೇಶದ ಮದನಪಲ್ಲಿ ಟೊಮೆಟೊ ಮಾರುಕಟ್ಟೆಯಿಂದ ಪೂರೈಕೆಯಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ. ಇದರಿಂದ ಶುಂಠಿ, ಬೇಳೆ ಸೇರಿದಂತೆ ಹಲವು ತರಕಾರಿಗಳ ಬೆಲೆ ದುಪ್ಪಟ್ಟಾಗಿದೆ. ಉದಾಹರಣೆಗೆ ಶುಂಠಿ ಕೆಜಿಗೆ 300 ರೂ.ಗೆ ಮಾರಾಟವಾಗುತ್ತಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಸಾಲು ಸಾಲು ರಜೆ: ಮೆಜೆಸ್ಟಿಕ್​​​​ನಲ್ಲಿ ಬಸ್​​​​ಗಳಿಗೆ ಡಿಮ್ಯಾಂಡ್​​
ಸಾಲು ಸಾಲು ರಜೆ: ಮೆಜೆಸ್ಟಿಕ್​​​​ನಲ್ಲಿ ಬಸ್​​​​ಗಳಿಗೆ ಡಿಮ್ಯಾಂಡ್​​
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ