AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ವಿಧಾನಸಭೆಯಲ್ಲಿ ಹೈಡ್ರಾಮಾ; ಕಲಾಪ ಬಿಟ್ಟು ಹೊರನಡೆದ ರಾಜ್ಯಪಾಲ ಆರ್​ಎನ್​ ರವಿ

ಜಾತ್ಯತೀತತೆ ಮತ್ತು ಪೆರಿಯಾರ್, ಬಿಆರ್ ಅಂಬೇಡ್ಕರ್, ಕೆ ಕಾಮರಾಜ್, ಸಿಎನ್ ಅಣ್ಣಾದೊರೈ ಮತ್ತು ಕರುಣಾನಿಧಿ ಅವರಂತಹ ನಾಯಕರ ಉಲ್ಲೇಖಗಳನ್ನು ಹೊಂದಿರುವ ರಾಜ್ಯ ಸರ್ಕಾರವು ಸಿದ್ಧಪಡಿಸಿದ ಭಾಷಣದ ಭಾಗಗಳನ್ನು ರಾಜ್ಯಪಾಲರು ಕೈಬಿಟ್ಟು, ತಮ್ಮದೇ ಭಾಷಣವನ್ನು ಆರಂಭಿಸಿದರು.

ತಮಿಳುನಾಡು ವಿಧಾನಸಭೆಯಲ್ಲಿ ಹೈಡ್ರಾಮಾ; ಕಲಾಪ ಬಿಟ್ಟು ಹೊರನಡೆದ ರಾಜ್ಯಪಾಲ ಆರ್​ಎನ್​ ರವಿ
ತಮಿಳುನಾಡು ರಾಜ್ಯಪಾಲ ಆರ್​ಎನ್​ ರವಿImage Credit source: Twitter
TV9 Web
| Edited By: |

Updated on: Jan 09, 2023 | 12:55 PM

Share

ಚೆನ್ನೈ: ತಮಿಳುನಾಡು ವಿಧಾನಸಭೆ ಅಧಿವೇಶನದ (Tamil Nadu Assembly Session) ಮೊದಲ ದಿನವಾದ ಇಂದು ನಾಟಕೀಯ ಬೆಳವಣಿಗೆ ನಡೆದಿದೆ. ತಮಿಳುನಾಡು ರಾಜ್ಯಪಾಲ ಆರ್​.ಎನ್​ ರವಿ (RN Ravi) ವಿಧಾನಸಭೆಯಲ್ಲಿ ಭಾಷಣ ಶುರು ಮಾಡುತ್ತಿದ್ದಂತೆ ಡಿಎಂಕೆ (DMK) ಶಾಸಕರು ಇಂದು ಘೋಷಣೆ ಕೂಗುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (CM MK Stalin) ಅವರು ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಮಾತ್ರ ರೆಕಾರ್ಡ್​ಗೆ ಸೇರಿಸುವಂತೆ ನಿರ್ಣಯ ಮಂಡಿಸಿದರು. ಅಲ್ಲದೆ, ರಾಜ್ಯಪಾಲರ ಭಾಷಣದ ಭಾಗವನ್ನು ತೆಗೆದುಹಾಕುವಂತೆ ಸೂಚಿಸಿದರು. ಇದರಿಂದ ರಾಜ್ಯಪಾಲ ಆರ್​.ಎನ್. ರವಿ ಕಲಾಪದಿಂದ ಹೊರನಡೆದರು.

ತಮಿಳುನಾಡಿನ ರಾಜ್ಯಪಾಲರ ಸಾಂಪ್ರದಾಯಿಕ ಭಾಷಣದ ಭಾಗವನ್ನು ತೆಗೆದುಹಾಕಲು ಸೂಚಿಸಲಾಯಿತು. ರಾಜ್ಯ ಸರ್ಕಾರವು ಸಿದ್ಧಪಡಿಸಿದ ರಾಜ್ಯಪಾಲರ ಮೂಲ ಭಾಷಣವನ್ನು ಮಾತ್ರ ದಾಖಲಿಸಲು ವಿಧಾನಸಭೆ ನಿರ್ಣಯವನ್ನು ಅಂಗೀಕರಿಸಿತು.

ಇದನ್ನೂ ಓದಿ: Tamil Nadu Rain: ಕನ್ಯಾಕುಮಾರಿ ಸೇರಿ ತಮಿಳುನಾಡಿನ 4 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ

ಜಾತ್ಯತೀತತೆ ಮತ್ತು ಪೆರಿಯಾರ್, ಬಿಆರ್ ಅಂಬೇಡ್ಕರ್, ಕೆ ಕಾಮರಾಜ್, ಸಿಎನ್ ಅಣ್ಣಾದೊರೈ ಮತ್ತು ಕರುಣಾನಿಧಿ ಅವರಂತಹ ನಾಯಕರ ಉಲ್ಲೇಖಗಳನ್ನು ಹೊಂದಿರುವ ರಾಜ್ಯ ಸರ್ಕಾರವು ಸಿದ್ಧಪಡಿಸಿದ ಭಾಷಣದ ಭಾಗಗಳನ್ನು ರಾಜ್ಯಪಾಲರು ಕೈಬಿಟ್ಟು, ತಮ್ಮದೇ ಭಾಷಣವನ್ನು ಆರಂಭಿಸಿದರು. ಇದಾದ ನಂತರ ಮುಖ್ಯಮಂತ್ರಿ ಸ್ಟಾಲಿನ್ ನಿರ್ಣಯವನ್ನು ಮಂಡಿಸಿದರು. ರಾಜ್ಯಪಾಲರ ಕ್ರಮ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ನಿರ್ಣಯದಲ್ಲಿ ಎಂಕೆ ಸ್ಟಾಲಿನ್ ಹೇಳಿದ್ದಾರೆ.

ಅಂದಹಾಗೆ, ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ಮತ್ತು ತಮಿಳುನಾಡಿನ ರಾಜ್ಯಪಾಲ ಆರ್.ಎನ್. ರವಿ ನಡುವೆ ಹಲವು ವಿಚಾರಗಳಲ್ಲಿ ಜಗಳ ನಡೆಯುತ್ತಲೇ ಇದೆ. ಇತ್ತೀಚೆಗಷ್ಟೇ ದ್ರಾವಿಡ ರಾಜಕೀಯವನ್ನು ‘ಪ್ರತಿಗಾಮಿ ರಾಜಕೀಯ’ ಎಂದು ಕರೆದಿದ್ದ ರಾಜ್ಯಪಾಲ ರವಿ ಅವರ ಹೇಳಿಕೆಗೆ ಡಿಎಂಕೆ ಬಲವಾದ ವಿರೋಧ ವ್ಯಕ್ತಪಡಿಸಿತ್ತು. ತಮಿಳುನಾಡು ರಾಜ್ಯದ ಹೆಸರನ್ನು ‘ತಮಿಳಗಂ’ ಎಂದು ಬದಲಾಯಿಸಲು ರಾಜ್ಯಪಾಲರು ಸೂಚಿಸಿದ್ದರು.

ಇದನ್ನೂ ಓದಿ: ತಮಿಳುನಾಡು: ಪರಿಶಿಷ್ಟ ಜಾತಿಯವರು ವಾಸಿಸುತ್ತಿದ್ದ ಗ್ರಾಮದಲ್ಲಿನ ನೀರಿನ ಟ್ಯಾಂಕ್​​ಗೆ ಮಲ ಸುರಿದ ಜನರು; ಮಕ್ಕಳು ಅಸ್ವಸ್ಥ, ಕೇಸು ದಾಖಲು

ಜನವರಿ 4ರಂದು ಚೆನ್ನೈನ ರಾಜಭವನದಲ್ಲಿ ನಡೆದ ಕಾಶಿ ತಮಿಳು ಸಂಗಮದ ಸಂಘಟಕರು ಮತ್ತು ಸ್ವಯಂಸೇವಕರನ್ನು ಸನ್ಮಾನಿಸುವ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಆರ್.ಎನ್.ರವಿ ತಮಿಳುನಾಡಿಗೆ ‘ತಮಿಳಗಂ’ ಪದವು ಹೆಚ್ಚು ಸೂಕ್ತವಾದ ಪದವಾಗಿದೆ ಎಂದು ಟೀಕಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ