AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇರೆ ರಾಜ್ಯಗಳಿಗಿಂತ ತಮಿಳುನಾಡಿನಲ್ಲಿ ಸಾಮಾಜಿಕ ತಾರತಮ್ಯ ಹೆಚ್ಚು: ರಾಜ್ಯಪಾಲ ಆರ್‌ಎನ್ ರವಿ

ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಜಾತಿ ಪಟ್ಟಿ ಧರಿಸಿರುವುದು, ದಲಿತರು ಬಳಸುವ ನೀರಿನ ತೊಟ್ಟಿಯಲ್ಲಿ ಮಾನವ ಮಲವಿಸರ್ಜನೆ, ದೇವಸ್ಥಾನಗಳಿಗೆ ಒಂದು ವರ್ಗದವರಿಗೆ ಅನುಮತಿ ನಿರಾಕರಿಸುವುದು ಮುಂತಾದ ವರದಿಗಳನ್ನು ಓದಿದ್ದೇನೆ, ಅಂಥಾ ವರದಿಗಳು ನನಗೆ ಸಿಕ್ಕಿದೆ. ಇದೆಲ್ಲವೂ ರಾಜ್ಯದಲ್ಲಿ ಅಸ್ಪೃಶ್ಯತೆ ಆಚರಣೆಯನ್ನು ಪ್ರತಿಬಿಂಬಿಸುತ್ತದೆ. ಈ ಅನಿಷ್ಟ ಪದ್ಧತಿಯನ್ನು ಸಮಾಜ ಸುಧಾರಣೆಯಿಂದ ಮಾತ್ರ ನಿರ್ಮೂಲನೆ ಮಾಡಲು ಸಾಧ್ಯವೇ ಹೊರತು ಮತ ಬ್ಯಾಂಕ್ ರಾಜಕಾರಣದಿಂದಲ್ಲ ಎಂದ ತಮಿಳುನಾಡು ರಾಜ್ಯಪಾಲ.

ಬೇರೆ ರಾಜ್ಯಗಳಿಗಿಂತ ತಮಿಳುನಾಡಿನಲ್ಲಿ ಸಾಮಾಜಿಕ ತಾರತಮ್ಯ ಹೆಚ್ಚು: ರಾಜ್ಯಪಾಲ ಆರ್‌ಎನ್ ರವಿ
ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ
Follow us
ರಶ್ಮಿ ಕಲ್ಲಕಟ್ಟ
|

Updated on: Sep 18, 2023 | 6:50 PM

ತಂಜಾವೂರು: ಸಾಮಾಜಿಕ ತಾರತಮ್ಯದ ಕುರಿತು ತಮಿಳುನಾಡು (Tamil Nadu) ರಾಜ್ಯಪಾಲ ಆರ್‌ಎನ್ ರವಿ (Governor RN Ravi) ಸೋಮವಾರ ನೀಡಿರುವ ಹೇಳಿಕೆ ಡಿಎಂಕೆ (DMK) ನೇತೃತ್ವದ ರಾಜ್ಯ ಸರ್ಕಾರದೊಂದಿಗೆ ಹೊಸ ವಾಗ್ವಾದಕ್ಕೆ ಕಾರಣವಾಗಿದೆ.ರಾಜ್ಯದ ವಿವಿಧೆಡೆ ಸಾಮಾಜಿಕ ತಾರತಮ್ಯ ಇನ್ನೂ ಚಾಲ್ತಿಯಲ್ಲಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ. ಜಾತಿ ತಾರತಮ್ಯವು ದೇಶದ ಎಲ್ಲಕ್ಕಿಂತ ಹೆಚ್ಚಾಗಿ ತಮಿಳುನಾಡಿನಲ್ಲಿ ಅತಿರೇಕವಾಗಿದೆ ಎಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರ ವಿರುದ್ಧ ರವಿ ಹೇಳಿಕೆ ನೀಡಿದ್ದಾರೆ

ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಜಾತಿ ಪಟ್ಟಿ ಧರಿಸಿರುವುದು, ದಲಿತರು ಬಳಸುವ ನೀರಿನ ತೊಟ್ಟಿಯಲ್ಲಿ ಮಾನವ ಮಲವಿಸರ್ಜನೆ, ದೇವಸ್ಥಾನಗಳಿಗೆ ಒಂದು ವರ್ಗದವರಿಗೆ ಅನುಮತಿ ನಿರಾಕರಿಸುವುದು ಮುಂತಾದ ವರದಿಗಳನ್ನು ಓದಿದ್ದೇನೆ, ಅಂಥಾ ವರದಿಗಳು ನನಗೆ ಸಿಕ್ಕಿದೆ. ಇದೆಲ್ಲವೂ ರಾಜ್ಯದಲ್ಲಿ ಅಸ್ಪೃಶ್ಯತೆ ಆಚರಣೆಯನ್ನು ಪ್ರತಿಬಿಂಬಿಸುತ್ತದೆ. ಈ ಅನಿಷ್ಟ ಪದ್ಧತಿಯನ್ನು ಸಮಾಜ ಸುಧಾರಣೆಯಿಂದ ಮಾತ್ರ ನಿರ್ಮೂಲನೆ ಮಾಡಲು ಸಾಧ್ಯವೇ ಹೊರತು ಮತ ಬ್ಯಾಂಕ್ ರಾಜಕಾರಣದಿಂದಲ್ಲ ಎಂದು ಅವರು ಹೇಳಿದ್ದಾರೆ.

ರವಿ ಅವರು ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮದ ನಿರ್ಮೂಲನದ ಕರೆಯನ್ನು ಪರೋಕ್ಷವಾಗಿ ಟೀಕಿಸಿದ್ದಾರೆ. ಹಿಂದೂ ಧರ್ಮ, ಅಸಮಾನತೆಯ ಬಗ್ಗೆ ಮಾತನಾಡುವುದಿಲ್ಲ. ನಾವೆಲ್ಲರೂ ಒಂದೇ ದೈವಿಕತೆಯ ಅಭಿವ್ಯಕ್ತಿಗಳು, ಸಾಮಾಜಿಕ ಅನಿಷ್ಟಗಳನ್ನು ನಿರ್ಮೂಲನೆ ಮಾಡಲು ಅದರೊಳಗೆ ಹಲವಾರು ಚಳುವಳಿಗಳನ್ನು ಹೊಂದಿದ್ದೇವೆ. ಆದರೆ ಸನಾತನ ಧರ್ಮದ ನಿರ್ಮೂಲನೆಗೆ ಕೆಲವು ವರ್ಗದ ಜನರು ಕರೆ ನೀಡುತ್ತಾರೆ ಮತ್ತು ಅವರು ವಿದೇಶಿ ಶಕ್ತಿಗಳು ಮತ್ತು ಜಿಹಾದಿಗಳ ಸಹಯೋಗದೊಂದಿಗೆ ದೇಶವನ್ನು ಒಡೆಯುವ ಉದ್ದೇಶವನ್ನು ಹೊಂದಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸೋನಿಯಾ ಗಾಂಧಿ ಅವರನ್ನು ತೆಲಂಗಾಣ ತಲ್ಲಿ ಎಂದು ಬಿಂಬಿಸಿದ್ದಕ್ಕೆ ಕಿಶನ್ ರೆಡ್ಡಿ ಆಕ್ಷೇಪ

ತಮಿಳುನಾಡು ರಾಜ್ಯಪಾಲರ ಸಾಮಾಜಿಕ ತಾರತಮ್ಯದ ಟೀಕೆಗಳಿಗೆ ಪ್ರತಿಕ್ರಿಯಿಸಿದ ಡಿಎಂಕೆ ಸಂಸದೆ ಕನಿಮೊಳಿ ಅವರು ಇತಿಹಾಸವನ್ನು ಓದಬೇಕು ಏಕೆಂದರೆ ಮೀಸಲಾತಿಗಾಗಿ ಮೊದಲ ತಿದ್ದುಪಡಿಯನ್ನು ಮೊದಲು ತಂದಿದ್ದೇ ತಮಿಳುನಾಡು. ಸಾಮಾಜಿಕ ನ್ಯಾಯ ಎಂದರೆ ಅದು ಪ್ರತಿಯೊಬ್ಬರಿಗೂ ಸಮಾನವಾದ ವೇದಿಕೆಯನ್ನು ನೀಡುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್