AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇರೆ ರಾಜ್ಯಗಳಿಗಿಂತ ತಮಿಳುನಾಡಿನಲ್ಲಿ ಸಾಮಾಜಿಕ ತಾರತಮ್ಯ ಹೆಚ್ಚು: ರಾಜ್ಯಪಾಲ ಆರ್‌ಎನ್ ರವಿ

ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಜಾತಿ ಪಟ್ಟಿ ಧರಿಸಿರುವುದು, ದಲಿತರು ಬಳಸುವ ನೀರಿನ ತೊಟ್ಟಿಯಲ್ಲಿ ಮಾನವ ಮಲವಿಸರ್ಜನೆ, ದೇವಸ್ಥಾನಗಳಿಗೆ ಒಂದು ವರ್ಗದವರಿಗೆ ಅನುಮತಿ ನಿರಾಕರಿಸುವುದು ಮುಂತಾದ ವರದಿಗಳನ್ನು ಓದಿದ್ದೇನೆ, ಅಂಥಾ ವರದಿಗಳು ನನಗೆ ಸಿಕ್ಕಿದೆ. ಇದೆಲ್ಲವೂ ರಾಜ್ಯದಲ್ಲಿ ಅಸ್ಪೃಶ್ಯತೆ ಆಚರಣೆಯನ್ನು ಪ್ರತಿಬಿಂಬಿಸುತ್ತದೆ. ಈ ಅನಿಷ್ಟ ಪದ್ಧತಿಯನ್ನು ಸಮಾಜ ಸುಧಾರಣೆಯಿಂದ ಮಾತ್ರ ನಿರ್ಮೂಲನೆ ಮಾಡಲು ಸಾಧ್ಯವೇ ಹೊರತು ಮತ ಬ್ಯಾಂಕ್ ರಾಜಕಾರಣದಿಂದಲ್ಲ ಎಂದ ತಮಿಳುನಾಡು ರಾಜ್ಯಪಾಲ.

ಬೇರೆ ರಾಜ್ಯಗಳಿಗಿಂತ ತಮಿಳುನಾಡಿನಲ್ಲಿ ಸಾಮಾಜಿಕ ತಾರತಮ್ಯ ಹೆಚ್ಚು: ರಾಜ್ಯಪಾಲ ಆರ್‌ಎನ್ ರವಿ
ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Sep 18, 2023 | 6:50 PM

Share

ತಂಜಾವೂರು: ಸಾಮಾಜಿಕ ತಾರತಮ್ಯದ ಕುರಿತು ತಮಿಳುನಾಡು (Tamil Nadu) ರಾಜ್ಯಪಾಲ ಆರ್‌ಎನ್ ರವಿ (Governor RN Ravi) ಸೋಮವಾರ ನೀಡಿರುವ ಹೇಳಿಕೆ ಡಿಎಂಕೆ (DMK) ನೇತೃತ್ವದ ರಾಜ್ಯ ಸರ್ಕಾರದೊಂದಿಗೆ ಹೊಸ ವಾಗ್ವಾದಕ್ಕೆ ಕಾರಣವಾಗಿದೆ.ರಾಜ್ಯದ ವಿವಿಧೆಡೆ ಸಾಮಾಜಿಕ ತಾರತಮ್ಯ ಇನ್ನೂ ಚಾಲ್ತಿಯಲ್ಲಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ. ಜಾತಿ ತಾರತಮ್ಯವು ದೇಶದ ಎಲ್ಲಕ್ಕಿಂತ ಹೆಚ್ಚಾಗಿ ತಮಿಳುನಾಡಿನಲ್ಲಿ ಅತಿರೇಕವಾಗಿದೆ ಎಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರ ವಿರುದ್ಧ ರವಿ ಹೇಳಿಕೆ ನೀಡಿದ್ದಾರೆ

ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಜಾತಿ ಪಟ್ಟಿ ಧರಿಸಿರುವುದು, ದಲಿತರು ಬಳಸುವ ನೀರಿನ ತೊಟ್ಟಿಯಲ್ಲಿ ಮಾನವ ಮಲವಿಸರ್ಜನೆ, ದೇವಸ್ಥಾನಗಳಿಗೆ ಒಂದು ವರ್ಗದವರಿಗೆ ಅನುಮತಿ ನಿರಾಕರಿಸುವುದು ಮುಂತಾದ ವರದಿಗಳನ್ನು ಓದಿದ್ದೇನೆ, ಅಂಥಾ ವರದಿಗಳು ನನಗೆ ಸಿಕ್ಕಿದೆ. ಇದೆಲ್ಲವೂ ರಾಜ್ಯದಲ್ಲಿ ಅಸ್ಪೃಶ್ಯತೆ ಆಚರಣೆಯನ್ನು ಪ್ರತಿಬಿಂಬಿಸುತ್ತದೆ. ಈ ಅನಿಷ್ಟ ಪದ್ಧತಿಯನ್ನು ಸಮಾಜ ಸುಧಾರಣೆಯಿಂದ ಮಾತ್ರ ನಿರ್ಮೂಲನೆ ಮಾಡಲು ಸಾಧ್ಯವೇ ಹೊರತು ಮತ ಬ್ಯಾಂಕ್ ರಾಜಕಾರಣದಿಂದಲ್ಲ ಎಂದು ಅವರು ಹೇಳಿದ್ದಾರೆ.

ರವಿ ಅವರು ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮದ ನಿರ್ಮೂಲನದ ಕರೆಯನ್ನು ಪರೋಕ್ಷವಾಗಿ ಟೀಕಿಸಿದ್ದಾರೆ. ಹಿಂದೂ ಧರ್ಮ, ಅಸಮಾನತೆಯ ಬಗ್ಗೆ ಮಾತನಾಡುವುದಿಲ್ಲ. ನಾವೆಲ್ಲರೂ ಒಂದೇ ದೈವಿಕತೆಯ ಅಭಿವ್ಯಕ್ತಿಗಳು, ಸಾಮಾಜಿಕ ಅನಿಷ್ಟಗಳನ್ನು ನಿರ್ಮೂಲನೆ ಮಾಡಲು ಅದರೊಳಗೆ ಹಲವಾರು ಚಳುವಳಿಗಳನ್ನು ಹೊಂದಿದ್ದೇವೆ. ಆದರೆ ಸನಾತನ ಧರ್ಮದ ನಿರ್ಮೂಲನೆಗೆ ಕೆಲವು ವರ್ಗದ ಜನರು ಕರೆ ನೀಡುತ್ತಾರೆ ಮತ್ತು ಅವರು ವಿದೇಶಿ ಶಕ್ತಿಗಳು ಮತ್ತು ಜಿಹಾದಿಗಳ ಸಹಯೋಗದೊಂದಿಗೆ ದೇಶವನ್ನು ಒಡೆಯುವ ಉದ್ದೇಶವನ್ನು ಹೊಂದಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸೋನಿಯಾ ಗಾಂಧಿ ಅವರನ್ನು ತೆಲಂಗಾಣ ತಲ್ಲಿ ಎಂದು ಬಿಂಬಿಸಿದ್ದಕ್ಕೆ ಕಿಶನ್ ರೆಡ್ಡಿ ಆಕ್ಷೇಪ

ತಮಿಳುನಾಡು ರಾಜ್ಯಪಾಲರ ಸಾಮಾಜಿಕ ತಾರತಮ್ಯದ ಟೀಕೆಗಳಿಗೆ ಪ್ರತಿಕ್ರಿಯಿಸಿದ ಡಿಎಂಕೆ ಸಂಸದೆ ಕನಿಮೊಳಿ ಅವರು ಇತಿಹಾಸವನ್ನು ಓದಬೇಕು ಏಕೆಂದರೆ ಮೀಸಲಾತಿಗಾಗಿ ಮೊದಲ ತಿದ್ದುಪಡಿಯನ್ನು ಮೊದಲು ತಂದಿದ್ದೇ ತಮಿಳುನಾಡು. ಸಾಮಾಜಿಕ ನ್ಯಾಯ ಎಂದರೆ ಅದು ಪ್ರತಿಯೊಬ್ಬರಿಗೂ ಸಮಾನವಾದ ವೇದಿಕೆಯನ್ನು ನೀಡುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!