AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಲ್ಲಿಕಟ್ಟು ಆಯೋಜನೆಗೆ ಅನುಮತಿ ನೀಡಿದ ತಮಿಳುನಾಡು ಸರ್ಕಾರ; ಸ್ಪರ್ಧಿಗಳಿಗೆ ಕೊರೊನಾ ನೆಗೆಟಿವ್ ಪತ್ರ ಕಡ್ಡಾಯ

ಕೊವಿಡ್-19 ನಿಯಮಾವಳಿಯಂತೆ ಜಲ್ಲಿಕಟ್ಟು ನಡೆಯುವ ಸ್ಥಳದಲ್ಲಿ 150 ಸ್ಪರ್ಧಾಳುಗಳು ಭಾಗವಹಿಸಬಹುದಾಗಿದೆ. ಅವರೆಲ್ಲರೂ ಕೊರೊನಾ ನೆಗೆಟಿವ್ ವರದಿ ಪ್ರಮಾಣ ಪತ್ರ ಹೊಂದಿರಬೇಕಿದೆ.

ಜಲ್ಲಿಕಟ್ಟು ಆಯೋಜನೆಗೆ ಅನುಮತಿ ನೀಡಿದ ತಮಿಳುನಾಡು ಸರ್ಕಾರ; ಸ್ಪರ್ಧಿಗಳಿಗೆ ಕೊರೊನಾ ನೆಗೆಟಿವ್ ಪತ್ರ ಕಡ್ಡಾಯ
ಜಲ್ಲಿಕಟ್ಟು (ಸಂಗ್ರಹ ಚಿತ್ರ)
TV9 Web
| Edited By: |

Updated on:Apr 06, 2022 | 11:23 PM

Share

ಚೆನ್ನೈ: ಕೊವಿಡ್-19 ಪರಿಸ್ಥಿತಿ ಮಧ್ಯೆ ಜಲ್ಲಿಕಟ್ಟು ಜಾನಪದ ಕ್ರೀಡಾಕೂಟ ನಡೆಸಲು ತಮಿಳುನಾಡು ಸರ್ಕಾರ ಅನುಮತಿ ನೀಡಿದೆ. ಕೊರೊನಾ ಪರಿಸ್ಥಿತಿ ಬಿಗಡಾಯಿಸದಂತೆ ತಡೆಯಲು ಸೂಕ್ತ ನಿಬಂಧನೆಗಳನ್ನು ಹೇರಿಕೊಂಡು ಜಲ್ಲಿಕಟ್ಟು ಆಯೋಜಿಸಬೇಕು ಎಂದೂ ಸರ್ಕಾರ ಆದೇಶಿಸಿದೆ.

ಕೊವಿಡ್-19 ನಿಯಮಾವಳಿಯಂತೆ ಜಲ್ಲಿಕಟ್ಟು ನಡೆಯುವ ಸ್ಥಳದಲ್ಲಿ 150 ಸ್ಪರ್ಧಾಳುಗಳು ಭಾಗವಹಿಸಬಹುದಾಗಿದೆ. ಅವರೆಲ್ಲರೂ ಕೊರೊನಾ ನೆಗೆಟಿವ್ ವರದಿ ಪ್ರಮಾಣ ಪತ್ರ ಹೊಂದಿರಬೇಕಿದೆ. ಜಲ್ಲಿಕಟ್ಟು ನೋಡಲು ಬರುವ ಪ್ರೇಕ್ಷಕರಿಗೂ ನಿಬಂಧನೆಗಳನ್ನು ಹೇರಿರುವ ಸರ್ಕಾರ, ಮಾಮೂಲಿಯಂತೆ ಸೇರುತ್ತಿದ್ದ ಒಟ್ಟು ಜನರ ಪೈಕಿ ಅರ್ಧದಷ್ಟು ಮಂದಿ ಮಾತ್ರ ಈ ವರ್ಷ ಇರಬೇಕು ಎಂದು ಸೂಚನೆ ನೀಡಿದೆ.

ಜಲ್ಲಿಕಟ್ಟು ಸ್ಪರ್ಧೆಯನ್ನು ಸುಪ್ರೀಂಕೋರ್ಟ್ 2014ರಲ್ಲಿ ನಿಷೇಧಿಸಿತ್ತು. ಆದರೆ, ತಮಿಳುನಾಡು ರಾಜ್ಯ ಸರ್ಕಾರ, ಜಲ್ಲಿಕಟ್ಟು ಆಟವು ತಮ್ಮ ಸಂಸ್ಕೃತಿಯ ಅಸ್ಮಿತೆ ಎಂದು ಜಲ್ಲಿಕಟ್ಟು ಸ್ಪರ್ಧೆ ನಡೆಸುವುದನ್ನು ಸಮರ್ಥಿಸಿಕೊಂಡಿತ್ತು. ಚೆನ್ನೈ ಸೇರಿದಂತೆ ತಮಿಳುನಾಡು ರಾಜ್ಯದಾದ್ಯಂತ ಈ ಸಂಬಂಧ ಪ್ರತಿಭಟನೆಗಳು ನಡೆದಿದ್ದವು. ಬಳಿಕ, 2017ರಲ್ಲಿ ಜಲ್ಲಿಕಟ್ಟು ಮೇಲಿನ ನಿಷೇಧವನ್ನು ಹಿಂಪಡೆಯಲಾಗಿತ್ತು.

ಜಲ್ಲಿಕಟ್ಟು ಜಾನಪದ ಕ್ರೀಡಾಕೂಟವನ್ನು ತಮಿಳುನಾಡಿನಲ್ಲಿ ಪ್ರತಿವರ್ಷ ಪೊಂಗಲ್ ಸಂದರ್ಭ ಆಯೋಜಿಸಲಾಗುತ್ತದೆ. ಈ ಬಾರಿ, ಜನವರಿ 14ರಿಂದ 17ರವರೆಗೆ ಪೊಂಗಲ್ ಆಚರಣೆ ನಡೆಯಲಿದ್ದು ಅದೇ ಸಮಯದಲ್ಲಿ ಜಲ್ಲಿಕಟ್ಟು ಆಟವನ್ನೂ ಆಯೋಜಿಸಲಾಗುತ್ತದೆ. ಪೊಂಗಲ್​ಗೆ ಇನ್ನೇನು ಇಪ್ಪತ್ತು ದಿನಗಳು ಉಳಿದಿರುವಂತೆ ಸರ್ಕಾರ ಈ ಕ್ರಮ ಕೈಗೊಂಡಿದೆ.

ಚಿತ್ತೂರಿನಲ್ಲಿ ಜಲ್ಲಿಕಟ್ಟು ಸಂಭ್ರಮ, 10ಕ್ಕೂ ಹೆಚ್ಚು ಯುವಕರಿಗೆ ಗಾಯ

Published On - 4:41 pm, Wed, 23 December 20

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ