AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಲ್ಲಿಕಟ್ಟು ಆಯೋಜನೆಗೆ ಅನುಮತಿ ನೀಡಿದ ತಮಿಳುನಾಡು ಸರ್ಕಾರ; ಸ್ಪರ್ಧಿಗಳಿಗೆ ಕೊರೊನಾ ನೆಗೆಟಿವ್ ಪತ್ರ ಕಡ್ಡಾಯ

ಕೊವಿಡ್-19 ನಿಯಮಾವಳಿಯಂತೆ ಜಲ್ಲಿಕಟ್ಟು ನಡೆಯುವ ಸ್ಥಳದಲ್ಲಿ 150 ಸ್ಪರ್ಧಾಳುಗಳು ಭಾಗವಹಿಸಬಹುದಾಗಿದೆ. ಅವರೆಲ್ಲರೂ ಕೊರೊನಾ ನೆಗೆಟಿವ್ ವರದಿ ಪ್ರಮಾಣ ಪತ್ರ ಹೊಂದಿರಬೇಕಿದೆ.

ಜಲ್ಲಿಕಟ್ಟು ಆಯೋಜನೆಗೆ ಅನುಮತಿ ನೀಡಿದ ತಮಿಳುನಾಡು ಸರ್ಕಾರ; ಸ್ಪರ್ಧಿಗಳಿಗೆ ಕೊರೊನಾ ನೆಗೆಟಿವ್ ಪತ್ರ ಕಡ್ಡಾಯ
ಜಲ್ಲಿಕಟ್ಟು (ಸಂಗ್ರಹ ಚಿತ್ರ)
TV9 Web
| Edited By: |

Updated on:Apr 06, 2022 | 11:23 PM

Share

ಚೆನ್ನೈ: ಕೊವಿಡ್-19 ಪರಿಸ್ಥಿತಿ ಮಧ್ಯೆ ಜಲ್ಲಿಕಟ್ಟು ಜಾನಪದ ಕ್ರೀಡಾಕೂಟ ನಡೆಸಲು ತಮಿಳುನಾಡು ಸರ್ಕಾರ ಅನುಮತಿ ನೀಡಿದೆ. ಕೊರೊನಾ ಪರಿಸ್ಥಿತಿ ಬಿಗಡಾಯಿಸದಂತೆ ತಡೆಯಲು ಸೂಕ್ತ ನಿಬಂಧನೆಗಳನ್ನು ಹೇರಿಕೊಂಡು ಜಲ್ಲಿಕಟ್ಟು ಆಯೋಜಿಸಬೇಕು ಎಂದೂ ಸರ್ಕಾರ ಆದೇಶಿಸಿದೆ.

ಕೊವಿಡ್-19 ನಿಯಮಾವಳಿಯಂತೆ ಜಲ್ಲಿಕಟ್ಟು ನಡೆಯುವ ಸ್ಥಳದಲ್ಲಿ 150 ಸ್ಪರ್ಧಾಳುಗಳು ಭಾಗವಹಿಸಬಹುದಾಗಿದೆ. ಅವರೆಲ್ಲರೂ ಕೊರೊನಾ ನೆಗೆಟಿವ್ ವರದಿ ಪ್ರಮಾಣ ಪತ್ರ ಹೊಂದಿರಬೇಕಿದೆ. ಜಲ್ಲಿಕಟ್ಟು ನೋಡಲು ಬರುವ ಪ್ರೇಕ್ಷಕರಿಗೂ ನಿಬಂಧನೆಗಳನ್ನು ಹೇರಿರುವ ಸರ್ಕಾರ, ಮಾಮೂಲಿಯಂತೆ ಸೇರುತ್ತಿದ್ದ ಒಟ್ಟು ಜನರ ಪೈಕಿ ಅರ್ಧದಷ್ಟು ಮಂದಿ ಮಾತ್ರ ಈ ವರ್ಷ ಇರಬೇಕು ಎಂದು ಸೂಚನೆ ನೀಡಿದೆ.

ಜಲ್ಲಿಕಟ್ಟು ಸ್ಪರ್ಧೆಯನ್ನು ಸುಪ್ರೀಂಕೋರ್ಟ್ 2014ರಲ್ಲಿ ನಿಷೇಧಿಸಿತ್ತು. ಆದರೆ, ತಮಿಳುನಾಡು ರಾಜ್ಯ ಸರ್ಕಾರ, ಜಲ್ಲಿಕಟ್ಟು ಆಟವು ತಮ್ಮ ಸಂಸ್ಕೃತಿಯ ಅಸ್ಮಿತೆ ಎಂದು ಜಲ್ಲಿಕಟ್ಟು ಸ್ಪರ್ಧೆ ನಡೆಸುವುದನ್ನು ಸಮರ್ಥಿಸಿಕೊಂಡಿತ್ತು. ಚೆನ್ನೈ ಸೇರಿದಂತೆ ತಮಿಳುನಾಡು ರಾಜ್ಯದಾದ್ಯಂತ ಈ ಸಂಬಂಧ ಪ್ರತಿಭಟನೆಗಳು ನಡೆದಿದ್ದವು. ಬಳಿಕ, 2017ರಲ್ಲಿ ಜಲ್ಲಿಕಟ್ಟು ಮೇಲಿನ ನಿಷೇಧವನ್ನು ಹಿಂಪಡೆಯಲಾಗಿತ್ತು.

ಜಲ್ಲಿಕಟ್ಟು ಜಾನಪದ ಕ್ರೀಡಾಕೂಟವನ್ನು ತಮಿಳುನಾಡಿನಲ್ಲಿ ಪ್ರತಿವರ್ಷ ಪೊಂಗಲ್ ಸಂದರ್ಭ ಆಯೋಜಿಸಲಾಗುತ್ತದೆ. ಈ ಬಾರಿ, ಜನವರಿ 14ರಿಂದ 17ರವರೆಗೆ ಪೊಂಗಲ್ ಆಚರಣೆ ನಡೆಯಲಿದ್ದು ಅದೇ ಸಮಯದಲ್ಲಿ ಜಲ್ಲಿಕಟ್ಟು ಆಟವನ್ನೂ ಆಯೋಜಿಸಲಾಗುತ್ತದೆ. ಪೊಂಗಲ್​ಗೆ ಇನ್ನೇನು ಇಪ್ಪತ್ತು ದಿನಗಳು ಉಳಿದಿರುವಂತೆ ಸರ್ಕಾರ ಈ ಕ್ರಮ ಕೈಗೊಂಡಿದೆ.

ಚಿತ್ತೂರಿನಲ್ಲಿ ಜಲ್ಲಿಕಟ್ಟು ಸಂಭ್ರಮ, 10ಕ್ಕೂ ಹೆಚ್ಚು ಯುವಕರಿಗೆ ಗಾಯ

Published On - 4:41 pm, Wed, 23 December 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ