Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಮೇಲೆ ಇ.ಡಿ ದಾಳಿ, 9 ಸ್ಥಳಗಳಲ್ಲಿ ಶೋಧ

ponmudy: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಸಿದಂತೆ ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಅವರು ಮೇಲೆ ಇ.ಡಿ ದಾಳಿ ನಡೆದಿದೆ. ಚೆನ್ನೈ ಮತ್ತು ವಿಲ್ಲುಪುರಂ ಜಿಲ್ಲೆಗಳಲ್ಲಿರುವ ಅವರ ನಿವಾಸದಲ್ಲಿ ಶೋಧ ನಡೆಸಲಾಗುತ್ತಿದೆ.

Tamil Nadu: ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಮೇಲೆ ಇ.ಡಿ ದಾಳಿ, 9 ಸ್ಥಳಗಳಲ್ಲಿ ಶೋಧ
ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jul 17, 2023 | 10:57 AM

ಚೆನ್ನೈ ಜುಲೈ 17:  ತಮಿಳುನಾಡಿನಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ಭಾರೀ ಜೋರಾಗಿಯೇ ನಡೆಯುತ್ತಿದೆ, ಎಂ.ಕೆ ಸ್ಟಾಲಿನ್​​ ಸರ್ಕಾರದ ಸಚಿವರು ಈ ದಾಳಿಗೆ ಒಳಗಾಗಿದ್ದಾರೆ. ಇದೀಗ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಸಿದಂತೆ ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಅವರು ಮೇಲೆ ಇ.ಡಿ ದಾಳಿ ನಡೆದಿದೆ. ಚೆನ್ನೈ ಮತ್ತು ವಿಲ್ಲುಪುರಂ ಜಿಲ್ಲೆಗಳಲ್ಲಿರುವ ಅವರ ನಿವಾಸದಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಜತೆಗೆ ಅವರ ಪುತ್ರ ಹಾಗೂ ಸಂಸದ ಗೌತಮ್ ಸಿಗಮಣಿ ಅವರ ಮನೆಯಲ್ಲೂ ಹುಡುಕಾಟ ನಡೆದಿದೆ.

ಸಚಿವ ಕೆ ಪೊನ್ಮುಡಿ ಅವರಿಗೆ ಸಂಬಂಧಿಸಿದ 9 ಸ್ಥಳಗಳಲ್ಲಿ ಇ.ಡಿ ಶೋಧ ಕಾರ್ಯವನ್ನು ಮಾಡುತ್ತಿದ್ದು, ಕೇಂದ್ರ ಭದ್ರತಾ ಪಡೆಯ ಜತೆಗೆ ಸೇರಿ ಇ.ಡಿ ಕಾರ್ಯಚರಣೆಯನ್ನು ನಡೆಸುತ್ತಿದೆ. ಈ ಹಿಂದೆ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಇಂಧನ ಮತ್ತು ಅಬಕಾರಿ ಇಲಾಖೆ ಸಚಿವ ವಿ ಸೆಂಥಿಲ್ ಬಾಲಾಜಿ ಅವರು ಮೇಲೆ ಇ.ಡಿ ದಾಳಿ ನಡೆಸಿ, ಅನೇಕ ಕಡೆ ಶೋಧ ಕಾರ್ಯವನ್ನು ನಡೆಸಿತ್ತು. ಅವರ ಆಪ್ತರ ಮೇಲೂ ಇ.ಡಿ ದಾಳಿ ನಡೆಸಿತ್ತು. ಜೂ.14ರಂದು ವಿ ಸೆಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿ, ಈಗ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ; ತಮಿಳುನಾಡಿನ ಸಚಿವ ವಿ ಸೆಂಥಿಲ್ ಬಾಲಾಜಿ ಮನೆಯ ಮೇಲೆ ಐಟಿ ದಾಳಿ

ಇದೀಗ ವಿ ಸೆಂಥಿಲ್ ಬಾಲಾಜಿ ಅವರನ್ನು ಬಂಧಿಸಿದ ನಂತರ ತಮಿಳುನಾಡಿನ ಸರ್ಕಾರದ ಸಚಿವರ ಮೇಲೆ ಇ.ಡಿ ಒಂದು ಕಣ್ಣಿಟ್ಟಿದ್ದು, ಅವರ ವ್ಯವಹಾರಗಳ ಮೇಲೆ ಗಮನ ನೀಡಿದೆ. ಇದರ ಜತೆಗೆ ಈಗಾಗಲೇ ವಿ ಸೆಂಥಿಲ್ ಬಾಲಾಜಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಆದೇಶವನ್ನು ರಾಜ್ಯಪಾಲರು ತಡೆಹಿಡಿದಿದ್ದು, ಕಾನೂನು ಕ್ರಮಗಳನ್ನು ಬಗ್ಗೆ ತಿಳಿದುಕೊಂಡು ರಾಜೀನಾಮೆ ಪಡೆಯಬೇಕೇ? ಬೇಡವೇ? ಎಂಬುದನ್ನು ನಿರ್ಧಾರಿಸುತ್ತೇವೆ ಎಂದು ಹೇಳಿದ್ದಾರೆ. ಈ ಸಮಯದಲ್ಲೇ ಇನ್ನೊಬ್ಬ ಸಚಿವ ಮೇಲೆ ಇ.ಡಿ ದಾಳಿ ನಡೆದಿದೆ. ಇದು ರಾಜಕೀಯ ಎಂದು ಸ್ಟಾಲಿನ್​ ಸರ್ಕಾರ ಹೇಳುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:56 am, Mon, 17 July 23

ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ